ಸಾರ್ವಜನಿಕ ಬದುಕಿನಲ್ಲಿರಲು ಯಡಿಯೂರಪ್ಪ ಅನರ್ಹ
Team Udayavani, Feb 12, 2019, 12:30 AM IST
ಹುಬ್ಬಳ್ಳಿ: ಯಡಿಯೂರಪ್ಪ ಇನ್ನೊಮ್ಮೆ ಸಿಎಂ ಆಗಲು ಶಾಸಕರನ್ನು ಕೊಂಡುಕೊಳ್ಳಲು ಹೊರಟಿದ್ದಾರೆ. ಸಾರ್ವಜನಿಕ ಬದುಕಿನಲ್ಲಿರಲು ಬಿಎಸ್ವೈ ಅನರ್ಹ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಆಮಿ ಷವೊಡ್ಡಿರುವ ಧ್ವನಿ ಸುರುಳಿ ನನ್ನದು ಎಂದು ಸಾಬೀತು ಪಡಿಸಿದರೆ ರಾಜೀ ನಾಮೆ ಕೊಡುತ್ತೇನೆ. ರಾಜಕೀಯ ನಿವೃತ್ತಿ ಆಗುತ್ತೇನೆ ಎಂದಿದ್ದರು. ಈಗ ಅದು ನನ್ನದೇ ಧ್ವನಿ ಎಂದು ಒಪ್ಪಿಕೊಂಡಿದ್ದಾರೆ. ಕೂಡಲೇ ತಾವು ಹೇಳಿದಂತೆ ತಕ್ಷಣ ರಾಜೀನಾಮೆ ಕೊಡಬೇಕು.
ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆಯಿಲ್ಲ. ಈಗ ಅವರು ಯಾವುದೇ ಧ್ವನಿಸುರುಳಿ ಬಿಡುಗಡೆ ಮಾಡಿದರೂ ಅದಕ್ಕೆ ಮಹತ್ವ ಇರಲ್ಲ ಎಂದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಪ್ರಚಾರ ರ್ಯಾಲಿ ವೇಳೆ ದೇಶದ ಚೌಕಿದಾರ ರಫೇಲ್ ಬಗ್ಗೆ ಏಕೆ ಮಾತಾಡಲಿಲ್ಲ? ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಲಿಲ್ಲ? ರಾಜ್ಯದಲ್ಲಿ ಬರಗಾಲ ಬಿದ್ದಿದೆ. ಎರಡು ಬಾರಿ ನಿಯೋಗ ಒಯ್ದರೂ ರೈತರ ಸಾಲ ಮನ್ನಾ ಮಾಡಲಿಲ್ಲ. ಸಮ್ಮಿಶ್ರ ಸರ್ಕಾರ ಈ ವರ್ಷದ ಬಜೆಟ್ನಲ್ಲಿ ಸಾಲಮನ್ನಾಕ್ಕೆ 12,750 ಕೋಟಿ ಹಣ ತೆಗೆದಿರಿಸಿದೆ. ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರು ಕರ್ನಾಟಕಕ್ಕೆ ಬಂದು ಸ್ಪರ್ಧಿಸಲಿ. ಆಗ ಗೊತ್ತಾಗುತ್ತೆ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೋ ಇಲ್ಲವೋ ಎಂಬುದು ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?