ಪೊಲೀಸರಿಗೆ ಬರೀ ಕಷ್ಟ ಪರಿಹಾರ ಭತ್ಯೆ ಭಾಗ್ಯ


Team Udayavani, Feb 12, 2019, 12:30 AM IST

police-c.jpg

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪೊಲೀಸ್‌ ಪೇದೆಗಳಿಗೆ ಘೋಷಿಸಿರುವ ಕಷ್ಟ ಪರಿಹಾರ ಭತ್ಯೆ 69,785 ಮಂದಿಗೆ ದೊರೆಯಲಿದ್ದು, ಔರಾದ್ಕರ್‌ ಸಮಿತಿ ಶಿಫಾರಸ್ಸಿನಂತೆ ಇಡೀ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆಯಾಗಬೇಕಿತ್ತಾ ದರೂ ಗೃಹ ಇಲಾಖೆ ಹಾಗೂ ಹಣಕಾಸು ಇಲಾಖೆ ನಡುವಿನ ಸಂಘರ್ಷದಿಂದ ‘ಕಷ್ಟ ಪರಿಹಾರ ಭತ್ಯೆ’ ಭಾಗ್ಯವಷ್ಟೇ ಸಿಕ್ಕಂತಾಗಿದೆ.

ಈ ಮೊದಲು ವೈದ್ಯಕೀಯ, ಆಹಾರ, ಸಮವಸ್ತ್ರ, ಕಷ್ಟ ಪರಿಹಾರ ಭತ್ಯೆ ಹಾಗೂ ಇತರೆ ಸೌಲಭ್ಯ ಸೇರಿ ಎರಡು ಸಾವಿರ ರೂ.ಗಳನ್ನು ಕಾನ್‌ಸ್ಟೇಬಲ್‌ ಹಂತದಿಂದ ಸಬ್‌ ಇನ್‌ಸ್ಪೆಕ್ಟರ್‌ವರೆಗೆ ನೀಡಲಾಗುತ್ತಿತ್ತು. ಆದರೆ, ಈ ಬಾರಿಯ ಬಜೆಟ್‌ನಲ್ಲಿ ಪೊಲೀಸ್‌ ಪೇದೆಗಳಿಗೆ ‘ಕಷ್ಟ ಪರಿಹಾರ ಭತ್ಯೆ’ ಹೆಚ್ಚಳ ಎಂದು ಉಲ್ಲೇಖೀಸಿರುವುದರಿಂದ ಈ ಸೌಲಭ್ಯ ಪೇದೆ ಹಾಗೂ ಮುಖ್ಯಪೇದೆ ಹಂತದ ಸಿಬ್ಬಂದಿಗೆ ಮಾತ್ರ ದೊರೆಯಲಿದೆ. ಐಪಿಎಸ್‌ ಅಧಿಕಾರಿಗಳ ಮನೆಗಳಲ್ಲಿ ಕೆಲಸ ಮಾಡುವ ಆರ್ಡರ್ಲಿ(ಅನುಯಾಯಿಗಳು)ಗಳಿಗೆ ಅನ್ವಯವಾಗುವುದಿಲ್ಲ.

ಪ್ರಸ್ತುತ ಪೊಲೀಸ್‌ ಪೇದೆಗೆ ಎಲ್ಲ ರೀತಿಯ ಭತ್ಯೆ ಸೇರಿ 28,000 ರೂ.ವರೆಗೆ, ಮುಖ್ಯ ಪೇದೆಗೆ 38,000 ರೂ. ವೇತನ ಸಿಗುತ್ತಿದ್ದು, ಬಜೆಟ್‌ನಲ್ಲಿ ಘೋಷಣೆಯಿಂದ ಒಂದು ಸಾವಿರ ರೂ. ಮಾತ್ರ ಹೆಚ್ಚಳವಾಗಲಿದೆ. ಆದರೆ, ಔರಾದ್ಕರ್‌ ಸಮಿತಿ ಶೇ. 30 ರಿಂದ 35 ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಆದರೆ, ಬಜೆಟ್‌ನಲ್ಲಿ ವೇತನ ಪರಿಷ್ಕರಣೆಯಾಗಿಲ್ಲ.

ಸಂಘರ್ಷ: ಮುಖ್ಯಮಂತ್ರಿಯವರು ಔರಾದ್ಕರ್‌ ಸಮಿತಿ ವರದಿ ಜಾರಿಗೆ ಒಪ್ಪಿದ್ದರೂ ಗೃಹ ಇಲಾಖೆಯಲ್ಲಿನ ಅಧಿಕಾರಿಗಳ ಆಂತರಿಕ ಸಂಘರ್ಷದಿಂದ ಸಕಾಲದಲ್ಲಿ ಸ್ಪಷ್ಟ ಮಾಹಿತಿ ಸಲ್ಲಿಕೆಯಾಗದಿರುವುದ ರಿಂದ ಬಜೆಟ್‌ನಲ್ಲಿ ತೀರ್ಮಾನ ಪ್ರಕಟವಾಗಿಲ್ಲ ಎಂಬ ಅಸಮಾಧಾನ ಪೊಲೀಸ್‌ ವಲಯದಲ್ಲಿ ಕೇಳಿಬರುತ್ತಿದೆ.

ಆದರೆ, ಸಾವಿರಾರು ಪೊಲೀಸ್‌ ಸಿಬ್ಬಂದಿಯ ವೇತನ ಹೆಚ್ಚಳ ಮಾಡುವುದರಿಂದ ಸರ್ಕಾರಕ್ಕೆ ಮಾಸಿಕ ನೂರಾರು ಕೋಟಿ ರೂ. ಹೊರೆಯಾಗುತ್ತದೆ. ಜತೆಗೆ ಸಮಾನ ವೇತನ, ಸಮಾನ ಶ್ರೇಣಿಗೆ ಅನುಗುಣವಾಗಿ ಸಂಬಳ ನಿಗದಿ ಮಾಡುವುದು ಕಷ್ಟದಾಯಕ. ಹೀಗಾಗಿ ಪ್ರಸ್ತುತ ಔರಾದ್ಕರ್‌ ವರದಿಯ ಶಿಫಾರಸನ್ನು ಕೈಬಿಟ್ಟು ‘ಕಷ್ಟ ಪರಿಹಾರ ಭತ್ಯೆ’ ಹೆಚ್ಚಳ ಮಾಡುವುದು ಒಳಿತು ಎಂದು ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡದೆ, ಭತ್ಯೆಯನ್ನಷ್ಟೇ ಏರಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಿ.ಪರಮೇಶ್ವರ್‌ ಅವರು ಈ ಹಿಂದೆ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚು ಆಸಕ್ತಿ ವಹಿಸಿ, ವೇತನ ಪರಿಷ್ಕರಣೆ ಕುರಿತು ಸಂಪೂರ್ಣ ಮಾಹಿತಿ ಪರಿಶೀಲಿಸಿ ಮುಖ್ಯಮಂತ್ರಿಗಳಿಗೂ ಸಲ್ಲಿಸಿದ್ದರು. ಈ ವೇಳೆ ಗೃಹ, ಪೊಲೀಸ್‌ ಇಲಾಖೆಯಲ್ಲಾಗಲಿ, ಹಣ ಕಾಸು ಇಲಾಖೆಯಲ್ಲಾಗಲಿ ಯಾವುದೇ ಗೊಂದಲ ಗಳಿರಲಿಲ್ಲ. ಇದೀಗ ಏಕಾಏಕಿ ಗೊಂದಲ ಸೃಷ್ಟಿಯಾ ಗಿರುವುದು ಯಾಕೆ? ಯಾರು ಗೊಂದಲ ಮಾಡು ತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಗೃಹ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಸಿಬ್ಬಂದಿ ಕೊರತೆ
ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಐಪಿಎಸ್‌ ಅಧಿಕಾರಿಗಳು ಸೇರಿ 1,08,069 ಮಂದಿ ನೇಮಕಾತಿಗೆ ಮಂಜೂರಾತಿ ದೊರಕಿದ್ದು, 148 ಐಪಿಎಸ್‌ ಅಧಿಕಾರಿಗಳು ಸೇರಿ 83,125 ಸಿಬ್ಬಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 25,944 ಮಂದಿ ಸಿಬ್ಬಂದಿ ಕೊರತೆ ಇದೆ.

– ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.