ಪೊಲೀಸರಿಗೆ ಬರೀ ಕಷ್ಟ ಪರಿಹಾರ ಭತ್ಯೆ ಭಾಗ್ಯ


Team Udayavani, Feb 12, 2019, 12:30 AM IST

police-c.jpg

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪೊಲೀಸ್‌ ಪೇದೆಗಳಿಗೆ ಘೋಷಿಸಿರುವ ಕಷ್ಟ ಪರಿಹಾರ ಭತ್ಯೆ 69,785 ಮಂದಿಗೆ ದೊರೆಯಲಿದ್ದು, ಔರಾದ್ಕರ್‌ ಸಮಿತಿ ಶಿಫಾರಸ್ಸಿನಂತೆ ಇಡೀ ಇಲಾಖೆಯ ಸಿಬ್ಬಂದಿಯ ವೇತನ ಪರಿಷ್ಕರಣೆಯಾಗಬೇಕಿತ್ತಾ ದರೂ ಗೃಹ ಇಲಾಖೆ ಹಾಗೂ ಹಣಕಾಸು ಇಲಾಖೆ ನಡುವಿನ ಸಂಘರ್ಷದಿಂದ ‘ಕಷ್ಟ ಪರಿಹಾರ ಭತ್ಯೆ’ ಭಾಗ್ಯವಷ್ಟೇ ಸಿಕ್ಕಂತಾಗಿದೆ.

ಈ ಮೊದಲು ವೈದ್ಯಕೀಯ, ಆಹಾರ, ಸಮವಸ್ತ್ರ, ಕಷ್ಟ ಪರಿಹಾರ ಭತ್ಯೆ ಹಾಗೂ ಇತರೆ ಸೌಲಭ್ಯ ಸೇರಿ ಎರಡು ಸಾವಿರ ರೂ.ಗಳನ್ನು ಕಾನ್‌ಸ್ಟೇಬಲ್‌ ಹಂತದಿಂದ ಸಬ್‌ ಇನ್‌ಸ್ಪೆಕ್ಟರ್‌ವರೆಗೆ ನೀಡಲಾಗುತ್ತಿತ್ತು. ಆದರೆ, ಈ ಬಾರಿಯ ಬಜೆಟ್‌ನಲ್ಲಿ ಪೊಲೀಸ್‌ ಪೇದೆಗಳಿಗೆ ‘ಕಷ್ಟ ಪರಿಹಾರ ಭತ್ಯೆ’ ಹೆಚ್ಚಳ ಎಂದು ಉಲ್ಲೇಖೀಸಿರುವುದರಿಂದ ಈ ಸೌಲಭ್ಯ ಪೇದೆ ಹಾಗೂ ಮುಖ್ಯಪೇದೆ ಹಂತದ ಸಿಬ್ಬಂದಿಗೆ ಮಾತ್ರ ದೊರೆಯಲಿದೆ. ಐಪಿಎಸ್‌ ಅಧಿಕಾರಿಗಳ ಮನೆಗಳಲ್ಲಿ ಕೆಲಸ ಮಾಡುವ ಆರ್ಡರ್ಲಿ(ಅನುಯಾಯಿಗಳು)ಗಳಿಗೆ ಅನ್ವಯವಾಗುವುದಿಲ್ಲ.

ಪ್ರಸ್ತುತ ಪೊಲೀಸ್‌ ಪೇದೆಗೆ ಎಲ್ಲ ರೀತಿಯ ಭತ್ಯೆ ಸೇರಿ 28,000 ರೂ.ವರೆಗೆ, ಮುಖ್ಯ ಪೇದೆಗೆ 38,000 ರೂ. ವೇತನ ಸಿಗುತ್ತಿದ್ದು, ಬಜೆಟ್‌ನಲ್ಲಿ ಘೋಷಣೆಯಿಂದ ಒಂದು ಸಾವಿರ ರೂ. ಮಾತ್ರ ಹೆಚ್ಚಳವಾಗಲಿದೆ. ಆದರೆ, ಔರಾದ್ಕರ್‌ ಸಮಿತಿ ಶೇ. 30 ರಿಂದ 35 ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಆದರೆ, ಬಜೆಟ್‌ನಲ್ಲಿ ವೇತನ ಪರಿಷ್ಕರಣೆಯಾಗಿಲ್ಲ.

ಸಂಘರ್ಷ: ಮುಖ್ಯಮಂತ್ರಿಯವರು ಔರಾದ್ಕರ್‌ ಸಮಿತಿ ವರದಿ ಜಾರಿಗೆ ಒಪ್ಪಿದ್ದರೂ ಗೃಹ ಇಲಾಖೆಯಲ್ಲಿನ ಅಧಿಕಾರಿಗಳ ಆಂತರಿಕ ಸಂಘರ್ಷದಿಂದ ಸಕಾಲದಲ್ಲಿ ಸ್ಪಷ್ಟ ಮಾಹಿತಿ ಸಲ್ಲಿಕೆಯಾಗದಿರುವುದ ರಿಂದ ಬಜೆಟ್‌ನಲ್ಲಿ ತೀರ್ಮಾನ ಪ್ರಕಟವಾಗಿಲ್ಲ ಎಂಬ ಅಸಮಾಧಾನ ಪೊಲೀಸ್‌ ವಲಯದಲ್ಲಿ ಕೇಳಿಬರುತ್ತಿದೆ.

ಆದರೆ, ಸಾವಿರಾರು ಪೊಲೀಸ್‌ ಸಿಬ್ಬಂದಿಯ ವೇತನ ಹೆಚ್ಚಳ ಮಾಡುವುದರಿಂದ ಸರ್ಕಾರಕ್ಕೆ ಮಾಸಿಕ ನೂರಾರು ಕೋಟಿ ರೂ. ಹೊರೆಯಾಗುತ್ತದೆ. ಜತೆಗೆ ಸಮಾನ ವೇತನ, ಸಮಾನ ಶ್ರೇಣಿಗೆ ಅನುಗುಣವಾಗಿ ಸಂಬಳ ನಿಗದಿ ಮಾಡುವುದು ಕಷ್ಟದಾಯಕ. ಹೀಗಾಗಿ ಪ್ರಸ್ತುತ ಔರಾದ್ಕರ್‌ ವರದಿಯ ಶಿಫಾರಸನ್ನು ಕೈಬಿಟ್ಟು ‘ಕಷ್ಟ ಪರಿಹಾರ ಭತ್ಯೆ’ ಹೆಚ್ಚಳ ಮಾಡುವುದು ಒಳಿತು ಎಂದು ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡದೆ, ಭತ್ಯೆಯನ್ನಷ್ಟೇ ಏರಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಿ.ಪರಮೇಶ್ವರ್‌ ಅವರು ಈ ಹಿಂದೆ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚು ಆಸಕ್ತಿ ವಹಿಸಿ, ವೇತನ ಪರಿಷ್ಕರಣೆ ಕುರಿತು ಸಂಪೂರ್ಣ ಮಾಹಿತಿ ಪರಿಶೀಲಿಸಿ ಮುಖ್ಯಮಂತ್ರಿಗಳಿಗೂ ಸಲ್ಲಿಸಿದ್ದರು. ಈ ವೇಳೆ ಗೃಹ, ಪೊಲೀಸ್‌ ಇಲಾಖೆಯಲ್ಲಾಗಲಿ, ಹಣ ಕಾಸು ಇಲಾಖೆಯಲ್ಲಾಗಲಿ ಯಾವುದೇ ಗೊಂದಲ ಗಳಿರಲಿಲ್ಲ. ಇದೀಗ ಏಕಾಏಕಿ ಗೊಂದಲ ಸೃಷ್ಟಿಯಾ ಗಿರುವುದು ಯಾಕೆ? ಯಾರು ಗೊಂದಲ ಮಾಡು ತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಗೃಹ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಸಿಬ್ಬಂದಿ ಕೊರತೆ
ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಐಪಿಎಸ್‌ ಅಧಿಕಾರಿಗಳು ಸೇರಿ 1,08,069 ಮಂದಿ ನೇಮಕಾತಿಗೆ ಮಂಜೂರಾತಿ ದೊರಕಿದ್ದು, 148 ಐಪಿಎಸ್‌ ಅಧಿಕಾರಿಗಳು ಸೇರಿ 83,125 ಸಿಬ್ಬಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 25,944 ಮಂದಿ ಸಿಬ್ಬಂದಿ ಕೊರತೆ ಇದೆ.

– ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.