ಅತೃಪ್ತರಿಗೆ ಫೈನಲ್ ಚಾನ್ಸ್ : ವೇಣುಗೋಪಾಲ್ ‘ಆಫರ್’


Team Udayavani, Feb 12, 2019, 3:00 AM IST

venugopal-25-12.jpg

ಬೆಂಗಳೂರು: ಕಾಂಗ್ರೆಸ್ – ಜೆ.ಡಿ.ಎಸ್. ದೋಸ್ತಿ ಸರಕಾರದ ವಿರುದ್ಧ ಮುನಿಸಿಕೊಂಡು ಕಳೆದ ಕೆಲವು ದಿನಗಳಿಂದ ಅಜ್ಞಾತ ಸ್ಥಳದಲ್ಲಿರುವ ನಾಲ್ವರು ಕಾಂಗ್ರೆಸ್ ಶಾಸಕರಿಗೆ ತಮ್ಮ ಮುನಿಸನ್ನು ತೊರೆದು ಮಾತುಕತೆಗೆ ಬರುವಂತೆ ಇದೀಗ ಪಕ್ಷವು ಕೊನೇ ಅವಕಾಶವೊಂದನ್ನು ನೀಡಿದೆ.

ಎಲ್ಲಾ ಅತೃಪ್ತ ಶಾಸಕರು ತಮ್ಮ ಮುನಿಸನ್ನು ತೊರೆದು ತಕ್ಷಣವೇ ಬೆಂಗಳೂರಿಗೆ ಆಗಮಿಸಬೇಕು ಮಾತ್ರವಲ್ಲದೇ ಪಕ್ಷ ಹಾಗೂ ಸರಕಾರದ ಮೇಲೆ ತಮಗೆ ಯಾವುದೇ ರೀತಿಯ ಅತೃಪ್ತಿ ಇಲ್ಲ ಎಂಬುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಬೇಕು ಎಂಬ ಸ್ಪಷ್ಟ ನಿರ್ದೇಶನವನ್ನು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೀಡಿರುವುದಾಗಿ ಇದೀಗ ತಿಳಿದುಬಂದಿದೆ. ಹಾಗೆಯೇ ಪಕ್ಷ ಹಾಕಿರುವ ಈ ಎಲ್ಲಾ ಷರತ್ತುಗಳಿಗೆ ಒಪ್ಪಿಕೊಂಡದ್ದೇ ಆದಲ್ಲಿ ಸ್ಪೀಕರ್ ಗೆ ಸಲ್ಲಿಸಿರುವ ಅನರ್ಹತೆ ಮನವಿಯ ಕುರಿತಾಗಿ ಪರಿಶೀಲಿಸಲಾಗುವುದು ಮತ್ತು ನಿಗಮ ಮಂಡಳಿ ಹಾಗೂ ಮಂತ್ರಿ ಸ್ಥಾನ ನೀಡುವ ಕುರಿತಾಗಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂಬ ಭರವಸೆಯನ್ನೂ ವೇಣುಗೋಪಾಲ್ ಅವರು ಅತೃಪ್ತರಿಗೆ ನೀಡಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಮಂಗಳವಾರ ಸಂಜೆ ಒಳಗೆ ಅತೃಪ್ತರೆಲ್ಲರೂ ನಗರಕ್ಕೆ ಆಗಮಿಸಬೇಕು ಮಾತ್ರವಲ್ಲದೇ ಬುಧವಾರದಿಂದಲೇ ಸದನದ ಕಲಾಪಗಳಲ್ಲಿ ಪಾಲ್ಗೊಳ್ಳಬೇಕು ಎಂಬ ಶರತ್ತನ್ನೂ ಸಹ ಇದೇ ಸಂದರ್ಭದಲ್ಲಿ ಕೆ.ಸಿ.ವಿ. ಅತೃಪ್ತರ ಮುಂದೆ ಇರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ತಮಗೆ ಇಂದು ಮಧ್ಯಾಹ್ನದವರೆಗೂ ಸಮಯ ನೀಡುವಂತೆ ಅತೃಪ್ತ ಶಾಸಕರು ಕೇಳಿಕೊಂಡಿರುವುದಾಗಿ ವರದಿಯಾಗಿದೆ.

ಒಟ್ಟಿನಲ್ಲಿ ದೋಸ್ತಿ ಸರಕಾರದ ವಿರುದ್ಧ ಮುನಿಸಿಕೊಂಡು ಅಜ್ಞಾತವಾಗಿರುವ ಕಾಂಗ್ರೆಸ್ ಶಾಸಕರು ಪಕ್ಷ ನೀಡಿರುವ ‘ಆಫರ್’ಗೆ ಒಪ್ಪಿಕೊಳ್ಳುತ್ತಾರೋ ಅಥವಾ ತಮ್ಮ ಅತೃಪ್ತಿಯ ಪಟ್ಟನ್ನು ಇನ್ನಷ್ಟು ಬಿಗಿಗೊಳಿಸುತ್ತಾರೋ ಎಂಬ ಕುತೂಹಲ ಇದೀಗ ಮೂಡಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.