‘ಆಡಿಯೋ ಪಕ್ರರಣ’ವನ್ನು ಸಿಎಂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ


Team Udayavani, Feb 12, 2019, 11:22 AM IST

jagdish-shettar-700.jpg

ಬೆಂಗಳೂರು: ‘ಆಡಿಯೋ ಪ್ರಕರಣ’ ಕುರಿತಾದಂತೆ ಮಂಗಳವಾರವೂ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಪ್ರಕರಣವನ್ನು ಮೂರೂ ಪಕ್ಷಗಳು ಬಿಡುವಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದರೂ ಆಡಳಿತ ಮತ್ತು ವಿರೋಧ ಪಕ್ಷಗಳು ಈ ಪ್ರಕರಣದ ಕುರಿತಾಗಿಯೇ ಚರ್ಚಿಸುತ್ತಾ ಸದನದ ಅಮೂಲ್ಯ ಸಮಯವನ್ನು ಹಾಳುಮಾಡುತ್ತಿವೆ.

ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿಯು ಈ ಸದನದ ಸದಸ್ಯರಾಗಿದ್ದಾರೆ ಎಂಬ ಆರೋಪವನ್ನು ಸ್ವತಃ ಮುಖ್ಯಮಂತ್ರಿಯವರೇ ಮಾಡಿದ್ದಾರೆ. ಮಾತ್ರವಲ್ಲದೇ ಆ ವ್ಯಕ್ತಿಯು ವಿಧಾನಸಭಾಧ್ಯಕ್ಷರಿಗೆ ಹಣ ಸಂದಾಯ ಮಾಡಿರುವ ಕುರಿತಾಗಿ ಪ್ರಸ್ತಾಪ ಮಾಡಿರುವ ವಿಚಾರವನ್ನು ಹಿಡಿದುಕೊಂಡು ಪರಸ್ಪರ ಮಾತಿನ ಸಮರ ನಡೆಯುತ್ತಿದೆ. ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಒತ್ತಾಯಿಸುತ್ತಿದ್ದರೆ, ವಿರೋಧ ಪಕ್ಷ ಬಿಜೆಪಿ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರವಾಗಿ ಹಲವಾರು ಸದಸ್ಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ ಈ ವಿಚಾರದಲ್ಲಿ ಸ್ಪೀಕರ್ ಅವರಿಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಮಾಜೀ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ‘ಆಡಿಯೋ ಕ್ಲಿಪ್ ಅನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಪ್ಪು ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇನ್ನು ಮುಖ್ಯಮಂತ್ರಿಯವರು ಕದ್ದಾಲಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಶೆಟ್ಟರ್ ಅವರು ಇದೇ ಸಂದರ್ಭದಲ್ಲಿ ಮಾಡಿದರು. ಸಿಎಂ ಆಗಿ ಈ ರೀತಿ ಕದ್ದಾಲಿಕೆ ಮಾಡಿರುವುದು ತಪ್ಪಲ್ಲವೇ ಎಂದು ಶೆಟ್ಟರ್ ಪ್ರಶ್ನಿಸಿದರು. ಮಾತ್ರವಲ್ಲದೆ ಆಡಿಯೋ ಸಿಕ್ಕ ಸಂದರ್ಭದಲ್ಲಿ ಸದನ ನಡೆಯುತ್ತಿದ್ದ ಕಾರಣ ಮುಖ್ಯಮಂತ್ರಿಯವರು ಅದನ್ನು ನೇರವಾಗಿ ಸದನದಲ್ಲಿ ಪ್ರಸ್ತಾಪಿಸಿ ಸ್ಪೀಕರ್ ಅವರ ಗಮನಕ್ಕೆ ತರಬೇಕಿತ್ತು ; ಹಾಗೆ ಮಾಡದೆ ನೇರವಾಗಿ ಸುದ್ದಿಗೊಷ್ಠಿ ನಡೆಸುವ ಮೂಲಕ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಶೆಟ್ಟರ್ ವಾದಿಸಿದರು.’

ಶೆಟ್ಟರ್ ಅವರ ಮಾತಿಗೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಅವರೆಲ್ಲರನ್ನು ಸುಮ್ಮನಿರಿಸಿದ ಸ್ಪೀಕರ್ ಅವರು, ‘ಮಾಜೀ ಮುಖ್ಯಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಗಂಭೀರವಾಗಿ ಆಲಿಸಲು ಕಲಿಯಿರಿ’ ಎಂದು ಹೇಳಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.