ಎಸ್‌ಐಟಿ ತನಿಖೆ ಬೇಡವೇ ಬೇಡ; ಆಡಿಯೋ ಕುರ್ಚಿ ಉಳಿಸಿಕೊಳ್ಳಲು ಬಳಕೆ !


Team Udayavani, Feb 12, 2019, 12:38 PM IST

100.jpg

ಬೆಂಗಳೂರು : “ಆಪರೇಷನ್‌ ಕಮಲ ಆಡಿಯೋ ಬಿಡುಗಡೆಯ ಹಿಂದೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಸ್ವಾರ್ಥ ಅಡಗಿದ್ದು, ಪ್ರಕರಣವನ್ನು ಕುರ್ಚಿ ಉಳಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಪ್ರಕರಣದಲ್ಲಿ ತನಿಖೆಯನ್ನು ಎಸ್‌ಐಟಿ ನಡೆಸುವುದು ಬೇಡ, ನಡೆಸಿದರೆ ಸತ್ಯಾಂಶ ಹೊರ ಬರುವುದಿಲ್ಲ ಎಂದು ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ವಿಧಾನ ಸಭಾ ಕಲಾಪದಲ್ಲಿ  ಗುಡುಗಿದ್ದಾರೆ. 

ಘಟನೆಯನ್ನು ಸ್ವಾರ್ಥಕ್ಕಾಗಿ,ಕುರ್ಚಿ ಉಳಿಸಿಕೊಳ್ಳಲು ಬಳಸಿಕೊಂಡಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಶೋಭೆ ತರುವಂತದ್ದಲ್ಲ. 30 ನಿಮಿಷಗಳ ವಿಡಿಯೋವನ್ನು ಕಟ್‌ ಆಂಡ್‌ ಪೇಸ್ಟ್‌ ಮಾಡಿ 2 ರಿಂದ 3  ನಿಮಿಷದ ಆಡಿಯೋ ಮಾಡಿ ತಮಗೆ ಬೇಕಾದ ಹಾಗೆ ತಿರುಚಿ ಮಾಡಲಾಗಿದೆ. ಈ ಪ್ರಕರಣದ ತನಿಖೆಯನ್ನು ಸದನ ಸಮಿತಿ ಮೂಲಕವೇ ಮಾಡಬೇಕು. ಯಾವುದೇ ಕಾರಣಕ್ಕೂ ಎಸ್‌ಐಟಿ ಮೂಲಕ ನಡೆಸುವುದನ್ನು ನಾವು ಒಪ್ಪುವುದಿಲ್ಲ ಎಂದರು. 

ನಾನು ಸಾಮಾನ್ಯ ಕುಟುಂಬದಿಂದ ಬಂದವನು. ಹೋರಾಟಗಳ ಮೂಲಕ ಈ ಹಂತಕ್ಕೆ ತಲುಪಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಆಗಿದ್ದೇನೆ. ಕುಮಾರಸ್ವಾಮಿ ಅವರೊಂದಿಗೂ 20 ತಿಂಗಳು ಕೆಲಸ ಮಾಡಿದ್ದೇನೆ ಎಂದರು. 

ಜಗತ್ತಿಗೇ ಗೊತ್ತಿದೆ 20 ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ನಲ್ಲಿ ಎಚ್‌ಡಿಕೆಯನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದಕ್ಕೆ ಯಡಿಯೂರಪ್ಪ ಜವಾಬ್ದಾರ ಅಲ್ಲ. ಅವರನ್ನು ಕಾದಿಟ್ಟುಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದರು. 

ಸುಭಾಷ್‌ ಗುತ್ತೇದಾರ್‌ರನ್ನು ಕುಮಾರಸ್ವಾಮಿ ಅವರು ಕರೆಯಲಿಲ್ಲವೆ?,ನಿಮ್ಮ ಇಬ್ಬರು ಮಂತ್ರಿಗಳು ನಮ್ಮ ಜೊತೆ ಬಿಜೆಪಿ ಶಾಸಕರಿದ್ದಾರೆ ಎಂದಿದ್ದು ನಿಜ ತಾನೆ ಎಂದು ಪ್ರಶ್ನಿಸಿದರು. 

ವಿಧಾನ ಸಭಾಧ್ಯಕ್ಷ ರಮೇಶ್‌ಕುಮಾರ್‌ ಅವರ ಸೂಚನೆ ಬಳಿಕ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸುವುದಾಗಿ ಸರ್ಕಾರ ಘೋಷಿಸಿತ್ತು.  ನ್ಯಾಯಾಂಗ ಅಥವಾ ಸದನ ಸಮಿತಿ ಮೂಲಕ ಸಮಗ್ರ ತನಿಖೆ ಯಾಗಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ. 

ನಾಳೆ ಬೆಳಗ್ಗೆ 10.30 ಕ್ಕೆ ಸ್ಪೀಕರ್‌ ಕೊಠಡಿಯಲ್ಲಿ ಸಭೆ 
ನಾಳೆ ಬೆಳಗ್ಗೆ ಸ್ವೀಕರ್‌ ರಮೇಶ್‌ ಕುಮಾರ್‌ ಅವರ ಕೊಠಡಿಯಲ್ಲಿ ಮೂರು ಪಕ್ಷಗಳ ನಾಯಕರ ಸಭೆ ನಡೆಯಲಿದ್ದು , ಇಲ್ಲಿ ತನಿಖೆಯ ಕುರಿತು ಯಾವ ತೀರ್ಮಾನ ಕೈಗೊಳ್ಳುತ್ತಾರೆ.ಸರ್ಕಾರದ ವತಿಯಿಂದ ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.