ಕೊನೆಗೂ ನಿಗಮ-ಮಂಡಳಿಗಳ ನೇಮಕಕ್ಕೆ ಮುಂದಾದ ಜೆಡಿಎಸ್‌


Team Udayavani, Feb 16, 2019, 12:30 AM IST

jds.jpg

 ಬೆಂಗಳೂರು: ಬಜೆಟ್‌ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕಿದ್ದ ಕಂಟಕದ ಆತಂಕ ಮರೆಯಾಗುತ್ತಿದ್ದಂತೆ ನಿರಾಳವಾಗಿರುವ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷ ಜೆಡಿಎಸ್‌, ತನ್ನ ಪಾಲಿನ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳ ಭರ್ತಿಗೆ ಮುಂದಾಗಿದೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಈ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಜತೆ ಸಮಾಲೋಚನೆ ನಡೆಸಿದ್ದು, ಆದಷ್ಟು ಶೀಘ್ರ ನೇಮಕ ಮಾಡಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ಜೆಡಿಎಸ್‌ಗೆ 12 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಮಾಡಲು ಅವಕಾಶವಿದ್ದು, ಆ ಪೈಕಿ 7 ಶಾಸಕರಿಗೆ, ಮೂರು ಮಾಜಿ ಶಾಸಕರಿಗೆ, ಎರಡು ಹಿರಿಯ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಲಾಗಿದೆ. ಶಾಸಕರಾದ ಮಂಜುನಾಥ್‌, ಮಂಜು, ಶಿವಲಿಂಗೇಗೌಡ, ನಾರಾಯಣಗೌಡ, ನಾರಾಯಣಸ್ವಾಮಿ, ಸುರೇಶ್‌ಗೌಡ, ಮಹದೇವ್‌, ಅಶ್ವಿ‌ನ್‌ಕುಮಾರ್‌, ಗೌರಿಶಂಕರ್‌, ಪರಿಷತ್‌ ಸದಸ್ಯರಾದ ಬೆಮೆಲ್‌ ಕಾಂತರಾಜ್‌, ತೂಪಲ್ಲಿ ಚೌಡರೆಡ್ಡಿ, ಅಪ್ಪಾಜಿಗೌಡ ನಿಗಮ-ಮಂಡಳಿ ಅಧ್ಯಕ್ಷಗಿರಿಯ ಆಕಾಂಕ್ಷಿಗಳಾಗಿದ್ದಾರೆ. ಇದರ ಜತೆಗೆ, ಮಾಜಿ ಶಾಸಕರಾದ ವೆಂಕಟ ಶಿವಾರೆಡ್ಡಿ, ಸುರೇಶ್‌ಬಾಬು, ಕೋನರೆಡ್ಡಿ, ಮಂಜುನಾಥಗೌಡ, ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ಬಾಬು ಸಹ ಆಕಾಂಕ್ಷಿಗಳಾಗಿದ್ದಾರೆ.

ಜೆಡಿಎಸ್‌ ಪಾಲಿನ ಸಂಸದೀಯ ಕಾರ್ಯದರ್ಶಿ ಹುದ್ದೆ ತಕ್ಷಣಕ್ಕೆ ಭರ್ತಿ ಮಾಡುವುದು ಅನುಮಾನ ಎಂದು ತಿಳಿದು ಬಂದಿದೆ. ಆದರೆ, ಸಚಿವ ಸ್ಥಾನ ವಂಚಿತ ಶಾಸಕರಿಗೆ ಅಧಿಕಾರ ನೀಡುವ ನಿಟ್ಟಿನಲ್ಲಿ ಅದನ್ನೂ ಭರ್ತಿ ಮಾಡಿ ಬಿಡಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ನಂತರ ಸಂಪುಟ ಪುನಾರಚನೆ ಸಾಧ್ಯತೆ ಇರುವುದರಿಂದ ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗದ ಹಿರಿಯ ಶಾಸಕರಿಗೆ ಎರಡನೇ ಹಂತದಲ್ಲಿ ನೀಡುವ ಭರವಸೆಯೊಂದಿಗೆ ಕಿರಿಯ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ತಿಪ್ಪೇಸ್ವಾಮಿ ಸಿಎಂ ರಾಜಕೀಯ ಕಾರ್ಯದರ್ಶಿ?

ಇತ್ತೀಚೆಗೆ ವಿಧಾನ ಪರಿಷತ್‌ ಸದಸ್ಯರಾಗಿರುವ, ದೇವೇಗೌಡರ ಕುಟುಂಬದ ಆಪ್ತರಾಗಿರುವ ತಿಪ್ಪೇಸ್ವಾಮಿ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಮಧು ಬಂಗಾರಪ್ಪ, ಸುರೇಶ್‌ ಬಾಬು, ಕೋನರೆಡ್ಡಿ ಪೈಕಿ ಒಬ್ಬರು ರಾಜಕೀಯ ಕಾರ್ಯದರ್ಶಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಮಧು ಬಂಗಾರಪ್ಪ ಅವರ ಮೇಲೆ ಕುಮಾರಸ್ವಾಮಿಯವರಿಗೆ ಒಲವಿತ್ತು. ಆದರೆ, ಮಧು ಬಂಗಾರಪ್ಪ ಲೋಕಸಭೆ ಚುನಾವಣೆಗೆಸ್ಪರ್ಧಿಸಲು ಸಿದಟಛಿತೆ ನಡೆಸುತ್ತಿರುವುದರಿಂದ ತಿಪ್ಪೇಸ್ವಾಮಿ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಚುನಾವಣೆ ನಂತರ ಎರಡನೇ ಹಂತ

ರಾಜ್ಯದಲ್ಲಿ ಒಟ್ಟು 78 ನಿಗಮ-ಮಂಡಳಿಗಳಿದ್ದು, ಆ ಪೈಕಿ ಕಾಂಗ್ರೆಸ್‌, ಈಗಾಗಲೇ ಮೊದಲ ಹಂತದಲ್ಲಿ 20 ಸ್ಥಾನಗಳನ್ನು ಭರ್ತಿ ಮಾಡಿದೆ. ಜೆಡಿಎಸ್‌ 12 ಸ್ಥಾನಗಳನ್ನು ಭರ್ತಿ ಮಾಡಿದರೆ ಇನ್ನೂ 46 ನಿಗಮ -ಮಂಡಳಿಗಳಿಗೆ ನೇಮಕ ಮಾಡಬಹುದಾಗಿದೆ. ಲೋಕಸಭೆ ಚುನಾವಣೆ ನಂತರ ಎರಡನೇ
ಹಂತದಲ್ಲಿ ಉಳಿದ ನಿಗಮ-ಮಂಡಳಿಗಳ ಭರ್ತಿ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.