ಲೋಕ ಚುನಾವಣೆಯತ್ತ ಮೂರೂ ಪಕ್ಷಗಳ ಚಿತ್ತ 


Team Udayavani, Feb 16, 2019, 12:30 AM IST

congress-jds.jpg

ಬೆಂಗಳೂರು: ರಾಜ್ಯ ಬಜೆಟ್‌ ಮಂಡನೆ ಹಾಗೂ ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಇದೀಗ ಲೋಕಸಭೆ ಚುನಾವಣೆಯತ್ತ ಚಿತ್ತ ಹರಿಸಿವೆ. ಮುಂದಿನ ಮೂರು ತಿಂಗಳು ಮೂರೂ ಪಕ್ಷಗಳಿಗೂ ಅಗ್ನಿಪರೀಕ್ಷೆಯಂತಾಗಿದೆ.

ಮುಂದಿನ ವಾರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಲೋಕಸಭೆ ಚುನಾವಣೆ ಕುರಿತಂತೆ
ಮೈತ್ರಿ ಮಾತುಕತೆ ನಡೆಯಲಿದ್ದು, ಬಹುತೇಕ ಈ ಮಾಸಾಂತ್ಯಕ್ಕೆ ಸೀಟು ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆಯಿದೆ. ಬಿಜೆಪಿ ಸಹ ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದು, ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯ ಪ್ರವಾಸ ಕೈಗೊಂಡು ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಾಹ ತುಂಬಿ ಹೋಗಿದ್ದಾರೆ. ಮೊದಲ ಹಂತದ ಲೋಕಸಭಾ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಣೆ ಸಭೆಯನ್ನೂ ನಡೆಸಿರುವ ಬಿಜೆಪಿ, ಸ್ಥಳೀಯ ಮುಖಂಡರ ಸಲಹೆ-ಸೂಚನೆ ಪಡೆದಿದೆ.ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡುವ ನಿರೀಕ್ಷೆ ಇರುವುದರಿಂದ ಮೂರೂ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ಆಪರೇಷನ್‌ ಕಮಲದ ಗುಂಗಿನಲ್ಲಿದ್ದ ಬಿಜೆಪಿ, ಅಧಿವೇಶನದಲ್ಲಿ ಆಡಿಯೋ ಬಾಂಬ್‌ ಬಿಡುಗಡೆ ನಂತರ ಥಂಡಾ ಹೊಡೆದಿದ್ದು, ತಕ್ಷಣಕ್ಕೆ ಲೋಕಸಭೆ ಚುನಾವಣೆಯತ್ತ ಮುಖ ಮಾಡಿದೆ.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೂಟದ ಗುರಿಯೂ 20 ಪ್ಲಸ್‌ ಸೀಟು ಗೆಲ್ಲುವುದು. ಬಿಜೆಪಿಯ ಗುರಿಯೂ 20 ಪ್ಲಸ್‌ ಗೆಲ್ಲುವುದೇ ಆಗಿರುವುದರಿಂದ ಮೂರೂ ಪಕ್ಷಗಳು ಕ್ಷೇತ್ರವಾರು ತಂತ್ರಗಾರಿಕೆಯಲ್ಲಿ ತೊಡಗಿವೆ. ಕಾಂಗ್ರೆಸ್‌ -ಜೆಡಿಎಸ್‌ ಜತೆಗೂಡಿ ಚುನಾವಣೆ ಎದುರಿಸುವುದು ಬಹುತೇಕ ಖಚಿತ ಆಗಿರುವುದರಿಂದ ಬಿಜೆಪಿ ಮೈಸೂರು, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಳಗಾವಿ, ಹಾವೇರಿ, ವಿಜಯಪುರ, ಕಲಬುರಗಿ, ಬೀದರ್‌ ಸೇರಿ ಹತ್ತು ಕ್ಷೇತ್ರಗಳಲ್ಲಿ ಕಾರ್ಯತಂತ್ರ ಬದಲಾಯಿಸಿಕೊಳ್ಳಲುಮುಂದಾಗಿದೆ.

ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪ್ರತಿ ಹಂತದಲ್ಲೂ ಎಚ್ಚರಿಕೆಯಿಂದ ಹೆಜ್ಜೆ ಇಡಲು ತೀರ್ಮಾನಿಸಿದೆ. ಬಹುತೇಕ ಈ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಯಾರು ಎಂಬುದು ನಿರ್ಧಾರವಾದ ನಂತರವಷ್ಟೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಟ್ಟು, ಬಿಕ್ಕಟ್ಟು: ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ತೀರ್ಮಾನ ಮಾಡಿರುವ ಜೆಡಿಎಸ್‌, 10 ರಿಂದ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆಯಾದರೂ ಅಂತಿಮವಾಗಿ ಎಂಟು ಕ್ಷೇತ್ರಕ್ಕೆ ತೃಪ್ತಿಪಡಬಹುದು. ಆದರೆ, ಆ ಎಂಟು ಕ್ಷೇತ್ರಗಳು ಯಾವುವು ಎಂಬುದೇ ಇದೀಗ ಯಕ್ಷ ಪ್ರಶ್ನೆಯಾಗಿದೆ.

ಮಂಡ್ಯ, ಹಾಸನದ ಜತೆಗೆ ಬಿಜೆಪಿ ಗೆಲುವು ಸಾಧಿಸಿರುವ ಶಿವಮೊಗ್ಗ, ಮೈಸೂರು, ಬೆಂಗಳೂರು ಉತ್ತರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಕಾಂಗ್ರೆಸ್‌ ಸಹ ಮನಸ್ಸು ಮಾಡಬಹುದು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು ಪೈಕಿ ಎರಡು ಕ್ಷೇತ್ರಗಳನ್ನು ನಮಗೆ ಬಿಟ್ಟುಕೊಡಿ ಎಂಬ ವಾದ ಜೆಡಿಎಸ್‌ನದ್ದಾಗಿದೆ. ಕಾಂಗ್ರೆಸ್‌ನ ಹಾಲಿ ಸಂಸದರು ಇರುವ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂಬುದು ಕಾಂಗ್ರೆಸ್‌ ನಾಯಕರ ಹಠ. ಹೀಗಾಗಿ, ದೇವೇಗೌಡ ಹಾಗೂ ರಾಹುಲ್‌ಗಾಂಧಿಯವರ ಜತೆಗಿನ ಮಾತುಕತೆ ನಂತರವಷ್ಟೇ ಅಂತಿಮ ಚಿತ್ರಣ ಸಿಗಲಿದೆ.

ಈ ಮಧ್ಯೆ, ಮಂಡ್ಯದಲ್ಲಿ ಸುಮಲತಾ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿಸುವ ಯತ್ನವೂ ಇದ್ದು, ಅದಕ್ಕೆ ಖುದ್ದು ಮುಖ್ಯಮಂತ್ರಿ ಎಚ್‌ .ಡಿ.ಕುಮಾರಸ್ವಾಮಿಯವರ ವಿರೋಧವಿದೆ. ನಿಖೀಲ್‌ ಅಲ್ಲಿ ಕಣಕ್ಕಿಳಿಯಲು ಬಯಸಿದ್ದಾರೆ. ಸುಮಲತಾ ಹೆಸರು ಕೇಳಿ ಬರುತ್ತಿರುವುದರಿಂದ ಸಹಜವಾಗಿಯೇ ಜೆಡಿಎಸ್‌ ನಾಯಕರು ಗರಂ ಆಗಿದ್ದಾರೆ. ಹೀಗಾಗಿ, ಸೀಟು ಹಂಚಿಕೆಕಾಂಗ್ರೆಸ್‌-ಜೆಡಿಎಸ್‌ ನಡುವೆ ಕಗ್ಗಂಟಾಗುವ ಸಾಧ್ಯತೆಯೂ ಇಲ್ಲದಿಲ್ಲ.

ಕ್ಷೇತ್ರವಾರು ಸಭೆಗಳ ನಿಗದಿ ಸಮ್ಮಿಶ್ರ ಸರ್ಕಾರದ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾರ್ಚ್‌ ಮೊದಲ ವಾರದೊಳಗೆ ಪ್ರಮುಖ ಯೋಜನೆ ಉದ್ಘಾಟನೆ, ಕ್ಷೇತ್ರಗಳಲ್ಲಿನ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮುಗಿಸಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಹಿಂದಿನ ಬಜೆಟ್‌ನಲ್ಲಿ ಘೋಷಣೆಯಾಗಿರುವ ಕಾರ್ಯಕ್ರಮಗಳಿಗೂ ಹಣ ಹೊಂದಾಣಿಕೆಗೆ ಹಣಕಾಸು ಇಲಾಖೆಗೂ ನಿರ್ದೇಶನ ನೀಡಲಾಗಿದೆ. ಇದರ ಜತೆಯಲ್ಲೇ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಕ್ಷೇತ್ರವಾರು ಸಭೆಗಳನ್ನು ನಿಗದಿಪಡಿಸಿಕೊಂಡಿದ್ದಾರೆ. ಬಿಜೆಪಿಯೂ ಅದೇ ಕಾರ್ಯದಲ್ಲಿ ತೊಡಗಿದೆ.

ಎಸ್‌ ಲಕ್ಷ್ಮೀ ನಾರಾಯಣ 

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.