ಅರ್ಧ ಎಕರೆ ಜಮೀನು ನೀಡಿದ ಸುಮಲತಾ
Team Udayavani, Feb 17, 2019, 12:30 AM IST
ಮಂಡ್ಯ: ಹುತಾತ್ಮ ಯೋಧ ಎಚ್.ಗುರು ಅವರ ಕುಟುಂಬಕ್ಕೆ ಅರ್ಧ ಎಕರೆ ಜಮೀನನ್ನು ಕೊಡುಗೆಯಾಗಿ ನೀಡುವುದಾಗಿ
ಚಿತ್ರ ನಟಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
“ಅಮರ್’ಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕಾಗಿ ಮಲೇಷ್ಯಾಕ್ಕೆ ತೆರಳಿರುವ ಸುಮಲತಾ, ಅಲ್ಲಿಂದಲೇ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಗುರು ಅವರ ಅಂತಿಮ ಸಂಸ್ಕಾರ ಹಾಗೂ ಸ್ಮಾರಕ ನಿರ್ಮಾಣಕ್ಕೆ ಜಾಗದ ಸಮಸ್ಯೆಯಿರುವ ವಿಷಯ ನನಗೆ ಈಗಷ್ಟೇ ಗೊತ್ತಾಗಿದೆ.ಇದರಿಂದ ನನ್ನ ಮನಸ್ಸಿಗೆ ತುಂಬಾ ಬೇಸರವಾಗಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಗೌರವ,ಮರ್ಯಾದೆಯಿಂದ ಕಳುಹಿಸಿಕೊಡುವುದು ನಮ್ಮ ಧರ್ಮ. ಒಂದು ವೇಳೆ ಸರ್ಕಾರದಿಂದ ಸ್ಮಾರಕ ಅಥವಾ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲು ಸಾಧ್ಯವಾಗದಿದ್ದರೆ ದೊಡ್ಡರಸಿನ ಕೆರೆ ಗ್ರಾಮದಲ್ಲಿ ನಮ್ಮದೇ ಆದ ಜಾಗವಿದ್ದು, ಅದರಲ್ಲಿ ಅರ್ಧ ಎಕರೆ ಜಾಗ ಕೊಡಲು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.
ಈ ವಿಷಯವಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಅಂಬರೀಶ್ ಅವರ ಅಣ್ಣನ ಮಗ ಮದನ್ ಅವರನ್ನು ಸಂಪ ರ್ಕಿಸಬಹುದು. ಒಂದು ವೇಳೆ, ಸರ್ಕಾರ ಜಾಗ ನೀಡಿದರೆ ಆ ಜಾಗವನ್ನು ವೀರಯೋಧ ಗುರು ಕುಟುಂಬಕ್ಕೆ ಅಂಬರೀಶ್ ಕುಟುಂಬದ ಕೊಡುಗೆಯಾಗಿ ನೀಡಲಿದ್ದೇನೆ.
ಇದರಿಂದ ಅಂಬರೀಶ್ ಅವರ ಆತ್ಮಕ್ಕೆ ತೃಪ್ತಿ,ಸಂತೋಷ ಸಿಗಲಿದೆ. ಅವರೇ ನಾದರೂ ಬದುಕಿದ್ದರೆ ಇನ್ನೂ ಹೆಚ್ಚಿನ ಸಹಾಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ. “ಬೆಂಗಳೂರಿಗೆ ಬಂದ ಕೂಡಲೇ ನಾನು ಮತ್ತು ಅಭಿ ಇಬ್ಬರೂ ನೊಂದ ಕುಟುಂಬವನ್ನು ಭೇಟಿ ಮಾಡಲಿದ್ದೇವೆ. ಹುತಾತ್ಮ ಯೋಧನ ಕುಟುಂಬಕ್ಕೆ ಭಗವಂತ ನೆಮ್ಮದಿ ನೀಡಲಿ, ಯೋಧರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ