“ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು’
Team Udayavani, Feb 17, 2019, 12:50 AM IST
ಬೆಂಗಳೂರು: ರಾಜ್ಯದಲ್ಲಿ ವಿಶ್ವ ಪಾರಂಪರಿಕ ತಾಣಗಳಿದ್ದು, ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಸೋದ್ಯಮ ಇಲಾಖೆ ಏರ್ಪಡಿಸಿದ್ದ “ನಿಮ್ಮ ಸಾಹಸಗಾಥೆ ನೀವೇ ರಚಿಸಿ’ ಪ್ರವಾಸೋದ್ಯಮ ಪರಿಕಲ್ಪನೆಯ ಜಾಹೀರಾತು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಧಾಮ, ಅಭಯಾರಣ್ಯ, ಗಿರಿಧಾಮ, ಜಲಪಾತ, ಕಲಡ ಕಿನಾರೆಯಿದ್ದು ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ. ಪ್ರವಾಸಿಗರನ್ನು ಹೆಚ್ಚು, ಹೆಚ್ಚು ಸೆಳೆಯುವತ್ತ ನಮ್ಮ ಕಾರ್ಯಕ್ರಮಗಳು ಇರಬೇಕಾಗಿದೆ ಎಂದು ತಿಳಿಸಿದರು.
ರಾಜ್ಯದ ಪ್ರವಾಸಿ ತಾಣಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಹೊಸ ಪರಿಕಲ್ಪನೆ ಸ್ವಾಗತಾರ್ಹ.
ಕಿರುಚಿತ್ರ ಹಾಗೂ ಜಾಹೀರಾತುಗಳು ಅದ್ಭುತವಾಗಿ ಮೂಡಿ ಬಂದಿದ್ದು, ಪ್ರವಾಸೋದ್ಯಮದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶ್ಲಾಘಿಸಿದರು.
ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಸುಂದರ ತಾಣಗಳನ್ನು ಪರಿಚಯಿಸುವ ಪ್ರಯಾಣಕ್ಕೆ ನಾನು
ನಿಮ್ಮನ್ನು ಸ್ವಾಗತಿಸುತ್ತೇನೆ ಎಂಬ ಟ್ಯಾಗ್ಲೈನ್ ಕರ್ನಾಟಕದ ಪ್ರವಾಸ ಅವಿಸ್ಮರಣೀಯವಾಗಿಸುವುದರಲ್ಲಿ ಅನುಮಾನವೇ ಇಲ್ಲ.
ಕರ್ನಾಟಕ ಪ್ರವಾಸ ಯಾರಿಗೂ ಖಂಡಿತವಾಗಿಯೂ ನಿರಾಸೆ ಮೂಡಿಸುವುದಿಲ್ಲ ಎಂಬ ವಿಶ್ವಾಸವೂ ಇದೆ ಎಂದು ಹೇಳಿದರು.
ಇಲಾಖೆಯ ಕಾರ್ಯದರ್ಶಿ ಟಿ.ಕೆ.ಸುನೀಲ್ಕುಮಾರ್, ನಿರ್ದೇಶಕಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಶ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್