ಚೆಕ್‌ಪೋಸ್ಟ್‌ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ


Team Udayavani, Feb 18, 2019, 12:30 AM IST

petrol-bomb.jpg

ಚಿಕ್ಕಮಗಳೂರು: ಇಲ್ಲಿಗೆ ಸಮೀಪದ ಬಸರೀಕಲ್‌ ಅರಣ್ಯ ಚೆಕ್‌ಪೋಸ್ಟ್‌ ಮೇಲೆ ಭಾನುವಾರ ಬೆಳಗಿನ ಜಾವ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಸಿಡಿಸಿದ್ದಾರೆ. ನಕ್ಸಲ್‌ ಪೀಡಿತ ಪ್ರದೇಶ ಎಂದು ಗುರುತಿಸಲ್ಪಟ್ಟ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಸರೀಕಲ್‌ ಅರಣ್ಯ ಚೆಕ್‌ ಪೋಸ್ಟ್‌ ಮೇಲೆ ದಾಳಿ ನಡೆದಿದ್ದು, ಅದೃಷ್ಟವಶಾತ್‌ ಹೆಚ್ಚಿನ ಹಾನಿಯಾಗಿಲ್ಲ. ಇದು ನಕ್ಸಲರ ಕೃತ್ಯ ಇರಬಹುದೆಂಬ ಸಂಶಯ ಮೂಡಿದೆ. ಅಲ್ಲದೆ, ಕಾಡುಗಳ್ಳರು ಅಥವಾ ಅಕ್ರಮ ಗೋ ಸಾಗಣೆ ಮಾಡುವವರು ಈ ಕೃತ್ಯ ಎಸಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.

ಐದು ಪೆಟ್ರೋಲ್‌ ಬಾಂಬ್‌: ದುಷ್ಕರ್ಮಿಗಳು ಭಾನುವಾರ ಬೆಳಗಿನ ಜಾವ 3.30ರ ಸುಮಾರಿಗೆ ಒಟ್ಟು 5 ಪೆಟ್ರೋಲ್‌ ಬಾಂಬ್‌ಗಳನ್ನು ಸಿಡಿಸಿದ್ದಾರೆ. ಪೆಟ್ರೋಲ್‌ ಬಾಂಬ್‌ ಎಸೆದ ಸಂದರ್ಭದಲ್ಲಿ ಚೆಕ್‌ ಪೋಸ್ಟ್‌ ಒಳಗೆ ಯಾರೂ ಇಲ್ಲದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಚೆಕ್‌ಪೋಸ್ಟ್‌ ಒಳಗೆ ಸಿಬ್ಬಂದಿ ಕೂರುತ್ತಿದ್ದ ಸ್ಥಳದ ಮೇಲೆ ನೇರವಾಗಿ ಪೆಟ್ರೋಲ್‌ ಬಾಂಬ್‌ಗಳನ್ನು ಎಸೆಯಲಾಗಿದೆ. ಇದರ ಪರಿಣಾಮ ಕೆಲವೊಂದು ದಾಖಲೆಗಳು ಸುಟ್ಟು ಹೋಗಿವೆ.

ಭಾನುವಾರ ರಾತ್ರಿ ಚೆಕ್‌ಪೋಸ್ಟ್‌ನಲ್ಲಿ ಇಬ್ಬರು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಂಬ್‌ ದಾಳಿ ನಡೆಯುವ ಸ್ವಲ್ಪ ಮೊದಲು ಓರ್ವ ಸಿಬ್ಬಂದಿ ಹೊರಗೆ ಹೋಗಿದ್ದರು. ನಂತರ ಮತ್ತೂಬ್ಬರು ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ಈ ದಾಳಿ ನಡೆದಿದೆ.

ದುಷ್ಕರ್ಮಿಗಳು ಖಾಲಿ ಬಾಟಲಿಗೆ ಮರಳನ್ನು ತುಂಬಿ ಅದರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಎಸೆದಿದ್ದಾರೆ. ಬಾಂಬ್‌ ಸಿಡಿಸಿರುವ ವಿಚಾರ ತಿಳಿದ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶಿಲ್ಪಾ ಸೇರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಇದು ನಕ್ಸಲ್‌ ಪೀಡಿತ ಪ್ರದೇಶವಾಗಿರುವುದರಿಂದ ನಕ್ಸಲರೇ ಪೆಟ್ರೋಲ್‌ ಬಾಂಬ್‌ ಸಿಡಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಎಲ್ಲಿಯೂ ನಕ್ಸಲರ ಚಟುವಟಿಕೆ ಕಂಡು ಬಂದಿಲ್ಲ. ಹೀಗಾಗಿ, ಬೇರೆ ಯಾರೋ ಈ ಕೃತ್ಯ ಎಸಗಿರಬಹುದು ಎಂದೂ ಹೇಳಲಾಗುತ್ತಿದೆ. ತನಿಖೆ ನಂತರವೇ ಸತ್ಯ ಬಹಿರಂಗವಾಗಬೇಕಿದೆ. ಆದರೆ ಘಟನೆ ನಂತರ ನಕ್ಸಲ್‌ ನಿಗ್ರಹ ದಳದವರು ಕೂಂಬಿಂಗ್‌ ತೀವ್ರಗೊಳಿಸಿದ್ದಾರೆ.

ಬಸರೀಕಲ್‌ ಅರಣ್ಯ ಚೆಕ್‌ಪೋಸ್ಟ್‌ ಮೇಲೆ 5 ಪೆಟ್ರೋಲ್‌ ಬಾಂಬ್‌ ಗಳನ್ನು ಸಿಡಿಸಲಾಗಿದೆ. ಬಾಂಬ್‌ ಎಸೆದವರು ಸ್ಥಳೀಯ ದುಷ್ಕರ್ಮಿಗಳು ಎಂಬ ಅನುಮಾನ ಬಂದಿದೆ. ಪ್ರಕರಣ ಕುರಿತು ತನಿಖೆ ಆರಂಭಿಸಲಾಗಿದೆ.ಬಾಂಬ್‌ ಎಸೆದವರು ನಕ್ಸಲರು ಎಂಬುದಕ್ಕೆ ಯಾವುದೇ ಸಾಕ್ಷಿಗಳು
ದೊರೆತಿಲ್ಲ.
– ಹರೀಶ್‌ ಪಾಂಡೆ, ಜಿಲ್ಲಾ
ಪೊಲೀಸ್‌ ವರಿಷ್ಠಾಧಿಕಾರಿ.

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.