ಅರಣ್ಯ ಸಿಬ್ಬಂದಿ ವೇತನ ಪರಿಷ್ಕರಣೆಗೆ ಕ್ರಮ: ಸತೀಶ
Team Udayavani, Feb 18, 2019, 1:00 AM IST
ಧಾರವಾಡ: ಅರಣ್ಯ ಸಿಬ್ಬಂದಿ, ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಗುಂಗರಗಟ್ಟಿಯ ಕರ್ನಾಟಕ ರಾಜ್ಯ ಅರಣ್ಯ ಅಕಾಡೆಮಿ ಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ವೇತನ ತಾರತಮ್ಯದ ವಿಚಾರ ತಮ್ಮ ಗಮನಕ್ಕೆ ಬಂದಿದೆ.
ಬಾಕಿ ಇರುವ ಅನುಕಂಪ ಆಧಾರದ 40 ಪ್ರಕರಣಗಳನ್ನು ಶೀಘ್ರ ವಿಚಾರಣೆ ಮಾಡಿ, ಸಂತ್ರಸ್ತ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದರು.