ಕೇಡರ್ ಬೇಸ್ನಲ್ಲಿ ರೈತರ ಸಂಘಟನೆ
Team Udayavani, Feb 19, 2019, 12:55 AM IST
ಬೆಂಗಳೂರು: ರೈತ ಸಮುದಾಯವನ್ನು ಸೆಳೆಯಲು ತಳ ಮಟ್ಟದಿಂದ “ಕೇಡರ್’ ಆಧಾರದಲ್ಲಿ ರೈತರನ್ನು ಸಂಘಟಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕಿಸಾನ್ ಘರ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ರಾಜ್ಯದಲ್ಲಿ ಸುಮಾರು ಐದು ಲಕ್ಷ ರೈತರನ್ನು ಸಂಘಟಿಸಲು
ತೀರ್ಮಾನಿಸಲಾಗಿದೆ.
ಸೋಮವಾರ ಕೆಪಿಸಿಸಿ ಕಿಸಾನ್ ಘಟಕ ಏರ್ಪಡಿಸಿದ್ದ ರೈತ ಪ್ರತಿನಿಧಿಗಳ ದೃಷ್ಠಿಕೋನ ಶಿಬಿರದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ 56 ಸಾವಿರ ಬೂತ್ಗಳಿದ್ದು ಪ್ರತಿ ಬೂತ್ನಲ್ಲಿ 10-15 ಜನವಸತಿ ಪ್ರದೇಶಗಳಿದ್ದು,ಪ್ರತಿ ಜನ ವಸತಿ ಪ್ರದೇಶದಲ್ಲೂ ರೈತ ಪ್ರತಿನಿಧಿಯನ್ನು ನೇಮಕ ಮಾಡಿ, ಅವರ ಮೂಲಕ ರೈತರ ಸಮಸ್ಯೆಗಳ ಕುರಿತು ಚರ್ಚಿಸುವುದು ಹಾಗೂ ಕಾಂಗ್ರೆಸ್ ಸಾಧನೆಗಳು, ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ.
ಕಿಸಾನ್ ಘರ್ ಪೆ ಚರ್ಚಾ ಕಾರ್ಯಕ್ರಮವನ್ನು ಒಂದು ತಿಂಗಳು ರಾಜ್ಯದ ಪ್ರತಿ ಜನ ವಸತಿ ಪ್ರದೇಶದಲ್ಲಿಯೂ ನಡೆಸಲು ತೀರ್ಮಾನಿಸಲಾಗಿದ್ದು, ಅಂತಿಮವಾಗಿ ಪಕ್ಷದ ವತಿಯಿಂದ 5 ಲಕ್ಷ ರೈತರನ್ನು ಸೇರಿಸಿ ರೈತರ ಸಮಾವೇಶ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ತಿಳಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಕಿಸಾನ್ ಘಟಕದ ಅಧ್ಯಕ್ಷ ನಾನಾ ಪಟೋಲೆ, ಹ್ಯಾಮ್ಲೆಟ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ, ಕೇಂದ್ರ ಸರ್ಕಾರದ ವಿರುದಟಛಿ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ