ಇಂದು “ವಿಜಯ ಸಂಕಲ್ಪ ಮಹಾ ಬೈಕ್‌ ರ‍್ಯಾಲಿ


Team Udayavani, Mar 2, 2019, 12:30 AM IST

bike.jpg

ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಬಿಜೆಪಿ ನಡೆಸುತ್ತಿರುವ ವಿವಿಧ ಪ್ರಚಾರ ಅಭಿಯಾನದ ಕೊನೆಯ ಕಾರ್ಯಕ್ರಮ “ವಿಜಯ ಸಂಕಲ್ಪ ಮಹಾ ಬೈಕ್‌ ರ‍್ಯಾಲಿ ಮಾ.2ರಂದು ದೇಶಾ ದ್ಯಂತ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಮಂಡಲಗಳಲ್ಲಿ (ವಿಧಾನಸಭಾ ಕ್ಷೇತ್ರ) ಈ ರ‍್ಯಾಲಿ ಹಾಗೂ ಸಮಾವೇಶವನ್ನು ನಡೆಸಲಾಗುವುದು ಎಂದು ದ.ಕ. ಲೋಕಸಭಾ ಕ್ಷೇತ್ರ ಬಿಜೆಪಿ ಚುನಾವಣಾ ಉಸ್ತುವಾರಿ ಸಂಚಾಲಕ ಗೋಪಾಲಕೃಷ್ಣ ಹೇರಳೆ ಅವರು ತಿಳಿಸಿದರು.
 
ಶುಕ್ರವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ 8 ಮಂಡಲಗಳ 54 ಮಹಾಶಕ್ತಿ ಕೇಂದ್ರ, 417 ಶಕ್ತಿ ಕೇಂದ್ರ ಹಾಗೂ 1,861 ಬೂತ್‌ಗಳಲ್ಲಿ ಚುನಾವಣೆಗೆ ಭರದ ಸಿದ್ಧತೆಯನ್ನು ನಡೆಸಲಾಗುತ್ತಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸೂಚಿಸಿದಂತೆ ಈಗಾಗಲೇ ವಿವಿಧ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇದರ ಸಮಾರೋಪದ ಅಂಗವಾಗಿ ಯುವ ಮೋರ್ಚಾ ನೇತೃತ್ವದಲ್ಲಿ ಮಹಾ ಬೈಕ್‌ ರ‍್ಯಾಲಿಯನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯೊಳಗೆ ಎಲ್ಲ ಮಂಡಲಗಳಲ್ಲಿ ನಿಗದಿತ ಕೇಂದ್ರಕ್ಕೆ ಬೂತ್‌ಗಳಿಂದ ಕಾರ್ಯಕರ್ತರು ಬೈಕ್‌ಗಳಲ್ಲಿ ಆಗಮಿಸಲಿದ್ದು, ಬಳಿಕ ಸಮಾವೇಶ ನಡೆಯಲಿದೆ. ಇದರಲ್ಲಿ ಸುಮಾರು ಒಂದು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ರ್ಯಾಲಿ ವೇಳೆ ಬೈಕ್‌ನಲ್ಲಿ ಹೆಲ್ಮೆಟ್‌ ಧರಿಸಿ ವಾಹನದ ಎಲ್ಲ ದಾಖಲೆಗಳನ್ನು ಹೊಂದಿರುವಂತೆ ಸೂಚಿಸಲಾಗಿದೆ ಎಂದರು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ. ಮಂಗಳೂರು ಉತ್ತರ ಕ್ಷೇತ್ರದ ರ‍್ಯಾಲಿ ಸುರತ್ಕಲ್‌ನಲ್ಲಿ, ಮೂಡುಬಿದಿರೆಯ ಕಿನ್ನಿಗೋಳಿಯಲ್ಲಿ, ಪುತ್ತೂರಿನ ಕಲ್ಲೇಗ, ಸುಳ್ಯದ ಬಸ್‌ ನಿಲ್ದಾಣ, ಬಂಟ್ವಾಳದ ರಂಗೋಲಿ ಹೊಟೇಲ್‌ ಬಳಿ, ಉಳ್ಳಾಲದ ತೊಕ್ಕೊಟ್ಟಿನಲ್ಲಿ, ಬೆಳ್ತಂಗಡಿಯ ಉಜಿರೆಯಲ್ಲಿ ಮಹಾ ರ್ಯಾಲಿ ನಡೆಯಲಿದೆ ಎಂದು ತಿಳಿಸಿದರು.

ಪ್ರಣಾಳಿಕೆಗೆ ಸಲಹೆ ಆಹ್ವಾನ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರಣಾಳಿಕೆ ವಾಹನವನ್ನು ಹೊರಡಿಸಲಾಗಿದೆ. ಈ ವಾಹನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಅದರಲ್ಲಿರುವ ಸಲಹಾ ಪೆಟ್ಟಿಗೆಯಲ್ಲಿ ಈ ಚುನಾವಣೆಯ ವೇಳೆ ಯಾವ ರೀತಿಯ ಆಶ್ವಾಸನೆ ನೀಡಬಹುದು ಎಂಬುದನ್ನು ಸೂಚಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನೀಡಲಾಗುವ ಸಲಹೆಗಳನ್ನು ರಾಜ್ಯಕ್ಕೆ ಕಳುಹಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ರವಿಶಂಕರ ಮಿಜಾರ್‌, ನಿತಿನ್‌ ಕುಮಾರ್‌, ಕಿಶೋರ್‌ ರೈ, ಪ್ರಭಾಮಾಲಿನಿ, ಸಂಜಯ ಪ್ರಭು, ಸಂದೇಶ್‌ ಶೆಟ್ಟಿ, ಜಿತೇಂದ್ರ ಕೊಟ್ಟಾರಿ ಅವರು ಉಪಸ್ಥಿತರಿದ್ದರು.

ನಳಿನ್‌ ಅವರೇ ಅಭ್ಯರ್ಥಿ
ದ.ಕ. ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರನ್ನೇ ಅಭ್ಯರ್ಥಿಯನ್ನಾಗಿ ಜಿಲ್ಲಾ ಘಟಕ ಸೂಚಿಸಿದೆ. ಇದನ್ನು ಅಧಿಕೃತವಾಗಿ ಕೇಂದ್ರ ನಾಯಕರು ಘೋಷಿಸಬೇಕಾಗಿದೆ. ಆದರೆ ಪಕ್ಷದ ಚಿಹ್ನೆೆ°ಯನ್ನು ಬಳಸಿ ಕೊಂಡು ಅಲ್ಲಲ್ಲಿ ಕೆಲವರು ತಾನು ಅಭ್ಯರ್ಥಿ ಎಂದು ಪಕ್ಷ ವಿರೋಧಿಯಾಗಿ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಅಂತಹವರ ವಿರುದ್ಧ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೋಪಾಲಕೃಷ್ಣ ಹೇರಳೆ ತಿಳಿಸಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.