ಏರ್ ಶೋ ರಿಹರ್ಸಲ್ ನಲ್ಲಿ ಎರಡು ಯುದ್ಧವಿಮಾನಗಳ ಢಿಕ್ಕಿ
Team Udayavani, Feb 19, 2019, 6:48 AM IST
ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ತಾಲೀಮಿನಲ್ಲಿ ತೊಡಗಿಕೊಂಡಿದ್ದ ಎರಡು ಯುದ್ಧವಿಮಾನಗಳು ಪರಸ್ಪರ ಢಿಕ್ಕಿ ಹೊಡೆದುಕೊಂಡಿರುವ ಘಟನೆ ನಡೆದಿದೆ. ಸೂರ್ಯ ಕಿರಣ್ ಜೆಟ್ ವಿಮಾನಗಳು ಪರಸ್ಪರ ಢಿಕ್ಕಿ ಹೊಡೆದುಕೊಂಡಿದ್ದು ಅದೃಷ್ಟವಶಾತ್ ಎರಡೂ ಯುದ್ಧವಿಮಾನಗಳ ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಆದರೆ ಇಬ್ಬರು ಪೈಲಟ್ ಗಳಲ್ಲಿ ಓರ್ವ ಪೈಲಟ್ ಇನ್ನೂ ಪತ್ತೆಯಾಗಿಲ್ಲ. ಅವರಿಗಾಗಿ ಶೋಧಕಾರ್ಯವನ್ನು ಮುಂದುವರಿಸಲಾಗಿದೆ. ಗಾಯಗೊಂಡಿರುವ ಇನ್ನೋರ್ವ ಪೈಲಟ್ ನನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೂರ್ಯಕಿರಣ್ ಎಂಬುದು ಭಾರತೀಯ ವಾಯುಸೇನೆಗೆ ಸೇರಿರುವ ಲಘುಯುದ್ಧ ವಿಮಾನವಾಗಿದೆ. ಇಂದು ಬೆಳಿಗ್ಗೆ ಈ ಯುದ್ಧ ವಿಮಾನಗಳು ತಾಲೀಮಿನಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ಏಕಾಏಕಿ ಪರಸ್ಪರ ಢಿಕ್ಕಿ ಹೊಡೆದುಕೊಂಡವು ಮತ್ತು ತಕ್ಷಣವೇ ಈ ವಿಮಾನಗಳು ಭೂಮಿಗೆ ಅಪ್ಪಳಿಸಿದವು. ಆದರೆ ಈ ಸಂದರ್ಭದಲ್ಲಿ ಎರಡೂ ವಿಮಾನಗಳ ಪೈಲಟ್ ಗಳು ತುರ್ತುನಿರ್ಗಮನ ದ್ವಾರದ ಮೂಲಕ ಹೊರಜಿಗಿದ ಕಾರಣ ಅವರಿಗೆ ಯಾವುದೆ ಅಪಾಯ ಉಂಟಾಗಲಿಲ್ಲ. ಪರಸ್ಪರ ಢಿಕ್ಕಿ ಹೊಡೆದುಕೊಂಡ ವಿಮಾನಗಳು ಜನವಸತಿ ಪ್ರದೇಶದ ಮೇಲೆಯೇ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ನಾಗರಿಕನಿಗೂ ಗಾಯಗಳಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. HAL ನಿರ್ಮಿತ ವಿಮಾನಗಳು ಇದಾಗಿದ್ದು ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ವಾಯುಪಡೆ ಆದೇಶಿಸಿದೆ.
ಢಿಕ್ಕಿ ಬಳಿಕ ಎರಡೂ ಯುದ್ಧ ವಿಮಾನಗಳು ಹೊತ್ತಿ ಉರಿದ ಕಾರಣ ಆ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಏರ್ ಶೋಗೆ ಒಂದು ದಿನ ಬಾಕಿಯಿರುವಾಗಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ