ಮನೆ ಮನೆಗೆ ಪಾರ್ಸೆಲ್‌ ತರಲಿದೆ ಡ್ರೋನ್‌!


Team Udayavani, Feb 21, 2019, 12:30 AM IST

1111.jpg

ಬೆಂಗಳೂರು: ಮದುವೆ-ಮುಂಜಿ, ಸಭೆ-ಸಮಾರಂಭದ ಫೊಟೋಗ್ರಫಿ ಹೆಚ್ಚೆಂದರೆ ಕೃಷಿ ಬೆಳೆಗಳಿಗೆ ರಸಗೊಬ್ಬರ ಸಿಂಪರಣೆಗೆ ಸೀಮಿತವಾಗಿರುವ “ಡ್ರೋನ್‌ ‘ ಶೀಘ್ರದಲ್ಲೇ ಪಾರ್ಸೆಲ್‌ಗ‌ಳನ್ನು ಮನೆ- ಮನೆಗೆ ತಲುಪಿಸುವ “ಪೋಸ್ಟ್‌ಮನ್‌’ ಕೆಲಸವನ್ನೂ ಮಾಡಲಿದೆ! ಹೌದು, ಎಲ್‌ಕಂಪೋನಿಕ್ಸ್‌ ಏರಾಬ್‌ ಟೆಕ್ನಾಲಜೀಸ್‌ಇಂಡಿಯಾ ಪ್ರೈ.ಲಿ., ಇದಕ್ಕೆ ಪೂರಕವಾದ ಡ್ರೋನ್‌ ಅನ್ನು ಪರಿಚಯಿಸುತ್ತಿದೆ. ಇದು 10 ಕೆಜಿಯಷ್ಟು ಭಾರವನ್ನು ಹೊತ್ತೂಯ್ಯುವ ಸಾಮರ್ಥ್ಯ ಹೊಂದಿದ್ದು, ಇಸ್ರೇಲ್‌ನ ಕಂಪನಿ ಯೊಂದು ಇದನ್ನು ಅಭಿವೃದ್ಧಿ ಪಡಿಸಿದೆ. ಬುಧವಾರ ಆರಂಭಗೊಂಡ ಐದು ದಿನಗಳ “ಏರೋ ಇಂಡಿಯಾ ಶೋ-2019’ದಲ್ಲಿ ಇದನ್ನು ಪ್ರದರ್ಶನಕ್ಕಿಡಲಾಗಿದೆ.

ಈಗಾಗಲೇ ಭಾರತೀಯ ಸೇನೆಯು ಈ ಡ್ರೋನ್‌ ಅನ್ನು ಗಡಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸಲು ಬಳಸಿಕೊಳ್ಳಲು ಉದ್ದೇಶಿಸಿದೆ. ಈ ಸಂಬಂಧ ಕಂಪನಿಯು ಮಾತುಕತೆ ನಡೆಸಿದ್ದು, ಪೂರಕ ಸ್ಪಂದನೆಯೂ ದೊರಕಿದೆ. ಇನ್ನೂ ಮುಂದುವರಿದು ಕೊರಿಯರ್‌ ಸೇವೆ ಪರಿಚಯಿಸಲಿಕ್ಕೂ ಕಂಪನಿ ಉದ್ದೇಶಿಸಿದೆ. ಇಸ್ರೇಲ್‌ನಲ್ಲಿ ಈ ಸೇವೆಯನ್ನು ಪರಿಚಯಿಸಲಾಗಿದೆ. ನಮ್ಮಲ್ಲಿಯೂ ಸಾಧಕ- ಬಾಧಕಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ಯಾವುದಾದರೂ ಕೊರಿಯರ್‌ ಕಂಪನಿಗಳು ಮುಂದೆಬಂದರೆ, ಸೇವೆಗೆ ಸಿದಟಛಿವಾಗಿದೆ ಎಂದು ಎಲ್‌ಕಂಪೋನಿಕ್ಸ್‌ ಟೆಕ್ನಾಲಜೀಸ್‌ ಇಂಡಿಯಾ ಪ್ರೈ.ಲಿ.,ನ ಉಪಾಧ್ಯಕ್ಷೆ ನಿಧಿ ಶಾರದಾ ತಿಳಿಸಿದರು.

ಏನು ಉಪಯೋಗ?
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಆನ್‌ಲೈನ್‌ ಮಾರುಕಟ್ಟೆ ಮುನ್ನೆಲೆಗೆ ಬಂದಿದ್ದು, ನಿತ್ಯ ಕೋಟ್ಯಂತರ ರೂ. ವಹಿವಾಟು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಡ್ರೋನ್‌ ಮೂಲಕ ಲಾಜಿಸ್ಟಿಕ್‌ ಸೇವೆ ಕಲ್ಪಿಸುವುದರಿಂದ ಜನರಿಗೆ ತ್ವರಿತ ಗತಿಯಲ್ಲಿ ಪಾರ್ಸೆಲ್‌ಗ‌ಳನ್ನು ತಲುಪಿಸಬಹುದು. ಸೇವೆಯಲ್ಲಿ ನಿಖರತೆ ಬರಲಿದೆ. ಸಮಯ ಉಳಿತಾಯದ ಜತೆಗೆ ಮಾನವರಹಿತ ವಾಹನ ಆಗಿರುವುದರಿಂದ ಮತ್ತೂಬ್ಬರ ಅವಲಂಬನೆ ತಪ್ಪಲಿದೆ. ನಿರಂತರವಾಗಿ ಸುಮಾರು 12 ತಾಸುಗಳ ಹಾರಾಟ ನಡೆಸಬಲ್ಲದು.

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮತಿ ಸೇರಿದಂತೆ ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಆರು ತಿಂಗಳಲ್ಲಿ ಕೊರಿಯರ್‌ ಸೇವೆ ಆರಂಭಿಸಲಾಗುವುದು. ಹಾಗೊಂದು ವೇಳೆ ಇದು ಸಾಧ್ಯವಾದರೆ, ದೇಶದಲ್ಲೇ ಇಂತಹದ್ದೊಂದು ಪ್ರಯೋಗ ಮೊದಲು ಬಾರಿಗೆ ನಡೆಯಲಿದೆ. ಇದುವರೆಗೆ ಈ ನಿಟ್ಟಿನಲ್ಲಿ ಯಾವುದೇ ಕಂಪನಿಯೊಂದಿಗೆ ಚರ್ಚೆಗಳು ನಡೆದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು. ಉಳಿದ ಡ್ರೋನ್‌ಗಳಿಗೆ ಹೋಲಿಸಿದರೆ, ಇದು ತುಸು ಭಿನ್ನವಾಗಿದೆ. 150 ಕೆಜಿ ಪೇಲೋಡ್‌ ಹೊಂದಿರುವ ಈ ಡ್ರೋನ್‌, ಗಂಟೆಗೆ 110 ಕಿ.ಮೀ. ವೇಗದಲ್ಲಿ ಸಂಚರಿಸುತ್ತದೆ. ಆಹಾರ, ಔಷಧಿಗಳು ಮತ್ತಿತರ ಸಾಮಗ್ರಿಗಳನ್ನು ಇದರ ಮೂಲಕ ಸಾಗಿಸಬಹುದಾಗಿದೆ ಎಂದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.