ಲೋಕಸಭೆ ಚುನಾವಣೆ ಬಳಿಕ ಸಿದ್ದು ಮತ್ತೆ ಸಿಎಂ
Team Udayavani, Feb 22, 2019, 1:40 AM IST
ಬಾಗಲಕೋಟೆ: ಲೋಕಸಭೆ ಚುನಾವಣೆ ಮುಗಿದ 4-5 ತಿಂಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಪುನಃ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಳ್ಳಲಿದ್ದಾರೆಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ಹೇಳಿದರು.
ಬಾದಾಮಿಯಲ್ಲಿ ನಡೆದ ಗಂಗಾಮತಸ್ಥ ಅಂಬಿಗರ ಸಮಾವೇಶದಲ್ಲಿ ಮಾತನಾಡಿದ ಅವರು, 100ಕ್ಕೆ ನೂರರಷ್ಟು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಯಾಗಲಿದ್ದಾರೆ. ಅವರಂತಹ ಸಮರ್ಥ ನಾಯಕ ನಮಗೆ ಸಿಕ್ಕಿದ್ದಾರೆ. ನನ್ನನ್ನುಗುರುತಿಸಿ, ಬಸವಕಲ್ಯಾಣದಲ್ಲಿ ಟಿಕೆಟ್ ಕೊಡಿಸಿದರು. ಅಷ್ಟೇ ಅಲ್ಲದೆ, ಇಡೀ ಹಾಲುಮತ ಸಮಾಜ ಟೊಂಕಕಟ್ಟಿ ನಿಂತು ನನ್ನನ್ನು ಗೆಲ್ಲಿಸುವಂತೆ ಮಾಡಿದರು. 18 ಸಾವಿರ ಮತಗಳ
ಅಂತರದಿಂದ ನನ್ನನ್ನು ಗೆಲ್ಲಿಸಿದರು. ಸಿದ್ದರಾಮಯ್ಯಗೆ ನಾವು ಎಲ್ಲಾ ರೀತಿಯ ಸಹಕಾರ-ಶಕ್ತಿ ಕೊಡಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು