ಆಪರೇಷನ್ ಆಡಿಯೋ : ಬಿಎಸ್ವೈ ವಿರುದ್ಧದ ವಿಚಾರಣೆಗೆ ತಡೆ
Team Udayavani, Feb 23, 2019, 12:30 AM IST
ಕಲಬುರಗಿ: “ಆಪರೇಷನ್ ಕಮಲ’ ಆಡಿಯೋ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಇತರ ಮೂವರ ವಿರುದ್ಧ ರಾಯಚೂರು ಜಿಲ್ಲೆ ದೇವ ದುರ್ಗ ಠಾಣೆಯಲ್ಲಿ ದಾಖ ಲಾಗಿರುವ ಎಫ್ಐಆರ್ನ ವಿಚಾರಣೆ ಮತ್ತು ತನಿಖೆಗೆ ನಗರದ ಹೈಕೋರ್ಟ್ ಪೀಠ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
ಯಡಿಯೂರಪ್ಪ, ಶಾಸಕ ರಾದ ಶಿವನಗೌಡ ನಾಯಕ ಮತ್ತು ಪ್ರೀತಂ ಗೌಡ, ಹಿರಿಯ ಪತ್ರಕರ್ತ ಎಂ.ಬಿ. ಮರಮಕಲ್ ವಿರುದ್ಧ ದೇವದುರ್ಗ ಠಾಣೆಯಲ್ಲಿ ದಾಖಲಾಗಿ ರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪೀಠ, ಬುಧವಾರ ಆದೇಶ ಕಾಯ್ದಿರಿ ಸಿತ್ತು. ಶುಕ್ರವಾರ ನ್ಯಾಯ ಮೂರ್ತಿ ಪಿಜಿಎಂ ಪಾಟೀಲ ಅವರು, ಈ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ, ದೂರು ದಾರ ಶರಣಗೌಡ ಕಂದಕೂರ ಅವರಿಗೆ ನೋಟಿಸ್ ಜಾರಿ ಮಾಡಿ ದರು. ಆದರೆ ಈ ಪ್ರಕರಣ ರದ್ದು ಮಾಡ ಬೇಕೆಂಬ ಮನವಿ ಯನ್ನು ಮಾನ್ಯ ಮಾಡಲಿಲ್ಲ. ಈ ಮಧ್ಯೆ, ಬೀದರ್ ಜಿಲ್ಲೆ ಹುಮನಾ ಬಾದ್ ನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಯಡಿಯೂರಪ್ಪ, ಹೈಕೋರ್ಟ್ ಪೀಠ ಮಧ್ಯಾಂತರ ತಡೆಯಾಜ್ಞೆ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…