ಕಬ್ಬಿಣದ ಸರಪಳಿ ಹರಿತಲೆ ಪರಾಕ್‌ :ಕಾರ್ಣಿಕ ನುಡಿದ ಗೊರವಯ್ಯ


Team Udayavani, Feb 23, 2019, 1:50 AM IST

4.jpg

ಹೂವಿನಹಡಗಲಿ: ಕಬ್ಬಿಣದ ಸರಪಳಿ ಹರಿತಲೆ ಪರಾಕ್‌… ಇದು ನಾಡಿನ ಸುಪ್ರಸಿದ್ಧ  ಮೈಲಾರಲಿಂಗೇ ಶ್ವರದ ಈ ವರ್ಷದ ಕಾರಣಿಕ ನುಡಿ. ನಾಡಿನ ಪ್ರಸಿದ್ಧ  ಜಾತ್ರೆಗಳಲ್ಲಿ ಒಂದಾದ ಬಳ್ಳಾರಿ ಜಿಲ್ಲೆ ಹೂವಿನಹಡ ಗಲಿಯ ಮೈಲಾರಲಿಂಗೇಶ್ವರ ಕ್ಷೇತ್ರದ ಮೈಲಾರಲಿಂಗ ಸ್ವಾಮಿ ಜಾತ್ರಾ ಉತ್ಸವ ಹಾಗೂ ಕಾರ್ಣಿಕೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಕಳೆದ ಕೆಲ ದಿನದಿಂದ ವಿವಿಧ ಧಾರ್ಮಿಕ ಆಚರಣೆಗಳು ನಡೆದಿದ್ದು, ಜಾತ್ರೆಯ ಪ್ರಮುಖ ಘಟ್ಟ ಎಂದೇ ಕರೆಯಲ್ಪಡುವ ಕಾರ್ಣಿಕೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಮೈಲಾರ ಕ್ಷೇತ್ರದಿಂದ ಅನತಿ ದೂರದಲ್ಲಿರುವ ಡೆಂಕನಮರಡಿಯಲ್ಲಿ ಕಳೆದ 11 ದಿನಗಳಿಂದ ವ್ರತಾಚರಣೆಯಲ್ಲಿ ತೊಡಗಿದ್ದ ಗೊರವಯ್ಯ ಈ ವರ್ಷದ ಕಾರಣಿಕ ನುಡಿದರು. ಶುಕ್ರವಾರ ಸಂಜೆ 5.30 ರ ಸುಮಾರಿಗೆ 18 ಅಡಿ ಎತ್ತರದ ಬಿಲ್ಲನ್ನು ಸರಸರನೇ ಏರಿದ ಗೊರವಯ್ಯ ತದೇಕ ಚಿತ್ತನಾಗಿ ಕೆಲ ಕ್ಷಣ ಆಕಾಶ ವೀಕ್ಷಿಸಿ ಸದ್ದಲೇ…ಎನ್ನುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಭಕ್ತರು ಸಂಪೂರ್ಣ ಮೌನರಾಗಿ ದೈವವಾಣಿಗಾಗಿ ಕಾದರು. ನಂತರ ಗೊರವಯ್ಯ ರಾಮಣ್ಣ “ಕಬ್ಬಿಣದ ಸರಪಳಿ ಹರಿತಲೆ ಪರಾಕ್‌’ ಎಂಬ ದೈವವಾಣಿ ನುಡಿದು ಬಿಲ್ಲನಿಂದ ಕೆಳಕ್ಕೆ ಜಿಗಿದರು.

ಕಾರ್ಣಿಕ ನುಡಿ ವಿಶ್ಲೇಷಣೆ: ಈ ದೈವವಾಣಿಯಿಂದ ಇಡೀ ನಾಡಿನ ವರ್ಷದ ಭವಿಷ್ಯ ಅಡಗಿದೆ. ಈ ನುಡಿಯ ಆಧಾರದಲ್ಲಿ ರಾಜಕೀಯ, ಮಳೆ, ಬೆಳೆ ಎಲ್ಲವನ್ನೂ ನಿರ್ಧರಿಸಲಾಗುತ್ತದೆ. ಈ ಬಾರಿಯ ಕಾರ್ಣಿಕ ನುಡಿ ಕಬ್ಬಿಣದ ಸರಪಳಿ ಎನ್ನುವುದು ಕಠಿಣ. ಇಂತಹ ಕಠಿಣವಾದ ಸರಪಳಿ ಹರಿತಲೇ ಎಂದರೆ ಜನರ ಕಷ್ಟದ ದಿನಗಳು ದೂರವಾಗಿ ಭವಿಷ್ಯದಲ್ಲಿ ಒಳಿತನ್ನು ಕಾಣಬಹುದು. ರೈತಾಪಿ ವರ್ಗದವರಿಗೆ ಭವಿಷ್ಯದ ದಿನಗಳು ಉತ್ತಮವಾಗಿರಲಿವೆ. ಮಳೆ-ಬೆಳೆ ಚೆನ್ನಾಗಿ ಆಗಲಿದೆ. ರಾಜಕೀಯವಾಗಿಯೂ ಸಹ ಗೊಂದಲ, ಗೋಜಲು ಎಲ್ಲ ಮಾಯವಾಗಿ ಉತ್ತಮ ಸ್ಥಿತಿ ನಿರ್ಮಾಣವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಕಾರ್ಣಿಕೋತ್ಸವದಲ್ಲಿ ಮುಜರಾಯಿ ಖಾತೆ ಸಚಿವ ಪಿ.ಟಿ. ಪರಮೇಶ್ವರ್‌ನಾಯ್ಕ, ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ, ಜಿಲ್ಲಾಧಿಕಾರಿ ಡಾ.ರಾಮ್‌ ಪ್ರಸಾತ್‌ ಮನೋಹರ್‌, ಎಸ್‌ಪಿ ಅರಣ್‌
ರಂಗರಾಜನ್‌, ಸೇರಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.