ಯಡಿಯೂರಪ್ಪ ಎದುರೇ ಯತ್ನಾಳ,ಜಿಗಜಿಣಗಿ ಬೆಂಬಲಿಗರ ಹೊಡೆದಾಟ
Team Udayavani, Feb 24, 2019, 1:38 AM IST
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲೇ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರ ಮಧ್ಯೆ ಶನಿವಾರ ನಗರದಲ್ಲಿ ಮಾರಾಮಾರಿ ನಡೆದಿದೆ.
ಜಿಪಂ ಕಚೇರಿ ಎದುರಿನ ಮೈದಾನದಲ್ಲಿ ಲೋಕಸಭೆ ಚುನಾವಣೆ ಸಿದಟಛಿತೆಗಾಗಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿತ್ತು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿ ಎಲ್ಲ ಗಣ್ಯರು ವೇದಿಕೆ ಏರಿದ್ದರು. ಈ ಹಂತದಲ್ಲಿ ಯತ್ನಾಳ ಬೆಂಬಲಿಗರು “ಅಭ್ಯರ್ಥಿ ಬದಲಿಸಿ, ಬಿಜೆಪಿ ಉಳಿಸಿ’ ಎಂದು ಘೋಷಣೆ ಕೂಗಲು ಆರಂಭಿಸಿದರು. ಅಲ್ಲದೇ ಲೋಕಸಭೆ ಚುನಾವಣೆಗೆ ಈ ಬಾರಿ ಜಿಗಜಿಣಗಿ ಅವರಿಗೆ ಟಿಕೆಟ್ ನೀಡದಂತೆ ಲಿಖೀತ ಮನವಿ ಹಿಡಿದು ಘೋಷಣೆ ಕೂಗುತ್ತಿದ್ದರು. ಕಾರ್ಯಕರ್ತರ ಘೋಷಣೆ ಹೆಚ್ಚಾಗುತ್ತಲೇ ಯಡಿಯೂರಪ್ಪ ಅವರು ವೇದಿಕೆಯಿಂದ ಕೆಳಗಿಳಿದು ಬಂದು ಮನವಿ ಸ್ವೀಕರಿಸಲು ಮುಂದಾದಾಗ ಜಿಗಜಿಣಗಿ ವಿರುದಟಛಿ ಘೋಷಣೆ ಹೆಚ್ಚಾದವು. ಈ ಹಂತದಲ್ಲಿ ಯತ್ನಾಳ ಹಾಗೂ ಜಿಗಜಿಣಗಿ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದು, ಪ್ಲಾಸ್ಟಿಕ್ ಕುರ್ಚಿಗಳನ್ನು ತೂರಾಡಿದರು. ಒಂದು ಹಂತದಲ್ಲಿ ಯಡಿಯೂರಪ್ಪ ಅವರಿಗೂ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಯಿತು.
ಅಂತಿಮವಾಗಿ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಕೆಲವರನ್ನು ವಶಕ್ಕೆ ಪಡೆದರು. ಘಟನೆಯಲ್ಲಿ ಸವನಳ್ಳಿ ಗ್ರಾಮದ ತೊನಶಾಳ ಗ್ರಾಮದ ಶರಣು ಹಚಡದ ಹಾಗೂ ನಗರದ ಐನಗೌಡ ಪಾಟೀಲ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!