ದೇಗುಲ ನಿರ್ವಹಣಾ ಕೌಶಲ್ಯ ತರಬೇತಿ ಶಿಬಿರಕ್ಕೆ ಚಾಲನೆ
Team Udayavani, Feb 26, 2019, 12:55 AM IST
ಶಿರಸಿ: ದೇವಾಲಯಗಳಲ್ಲೂ ಶಿಸ್ತು ಅಳವಡಿಕೆ ಕುರಿತು ಅಲ್ಲಿನ ಸಿಬ್ಬಂದಿಗೆ, ಆಡಳಿತ ಪ್ರಮುಖರಿಗೆ, ಅರ್ಚಕರಿಗೆ ತರಬೇತಿ ನೀಡುವ ಕಾರ್ಯಯೋಜನೆ ಆರಂಭಿಸಲಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ತಿಳಿಸಿದರು.
ನಗರದಲ್ಲಿ ದೇಶದ ಪ್ರಥಮ ದೇವಸ್ಥಾನ, ಧಾರ್ಮಿಕ ಸಂಸ್ಥೆಗಳ ನಿರ್ವಹಣಾ ಕೌಶಲ್ಯ ತರಬೇತಿಯ ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದೇ ಮೊದಲಿಗೆ ಪ್ರಾಯೋಗಿಕವಾಗಿ ಇಲ್ಲಿ ತರಬೇತಿ ಆರಂಭಿಸಲಾಗುತ್ತಿದೆ. ನಮ್ಮ ಶ್ರದ್ಧಾ ಕೇಂದ್ರಗಳಲ್ಲಿನ ಸ್ವತ್ಛತೆ, ಆಡಳಿತಾತ್ಮಕ ಸೌಲಭ್ಯ, ನಿರ್ವಹಣೆ ಸೇರಿ ಅನೇಕ ಸಂಗತಿಗಳನ್ನು ತಿಳಿಸುವ ನಿಟ್ಟನಲ್ಲಿ ಎಲ್ಲೆಡೆ ಏಕರೂಪ ಶಿಸ್ತು ಅಳವಡಿಕೆಗೆ ಈ ತರಬೇತಿ ಅಗತ್ಯವಾಗಿದೆ ಎಂದರು. ಈಗಾಗಲೇ ಆಂಧ್ರ ಪ್ರದೇಶದ ಹೋರಾಟಗಾರ್ತಿ ಹೇಮಾ ರೆಡ್ಡಿ ಅವರ ಮೂಲಕ ತರಬೇತಿಗೆ ಅಗತ್ಯವಾದ ಪಠ್ಯವನ್ನೂ ಸಿದ್ಧಗೊಳಿಸಲಾಗಿದೆ. ತರಬೇತಿಯ ಅಗತ್ಯತೆ ಹಾಗೂ ಆಶಯದ ಕುರಿತು ಬಾಬಾ ರಾಮದೇವ್, ರವಿಶಂಕರ ಗುರೂಜಿ, ಮಾತಾ ಅಮೃತಾನಂದಮಯಿ ಅವರ ಜತೆ ಸಮಾಲೋಚನೆ ನಡೆಸಿ ಅಂತಿಮ ಹೆಜ್ಜೆ ಇಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ