ಮಂಡ್ಯದಲ್ಲಿ ಸ್ವಂತ ಮನೆಗೆ ಸುಮಲತಾ ಆಲೋಚನೆ
Team Udayavani, Feb 26, 2019, 12:45 AM IST
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿರುವ ಸುಮಲತಾ, ಮಂಡ್ಯದಲ್ಲಿ ಸ್ವಂತ ಮನೆ ಮಾಡುವ ಆಲೋಚನೆಯಲ್ಲಿದ್ದಾರೆಂದು ತಿಳಿದುಬಂದಿದೆ.
ಕಾಂಗ್ರೆಸ್ ಟಿಕೆಟ್ ಬಯಸಿರುವ ಸುಮಲತಾ ಒಮ್ಮೆ ಪಕ್ಷದ ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದಕ್ಕೆ ನಿಶ್ಚಯಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಆಪ್ತರಿಗೆ ಮಂಡ್ಯದಲ್ಲಿ ಮನೆಯೊಂದನ್ನು ಹುಡುಕುವಂತೆ ತಿಳಿಸಿದ್ದಾರೆಂದು ಹೇಳಲಾಗಿದೆ.
ಮಂಡ್ಯ ನಗರದಲ್ಲಿ ಬಾಡಿಗೆ ಮನೆ ಮಾಡುವುದಕ್ಕೆ ಅಷ್ಟಾಗಿ ಒಲವು ತೋರುತ್ತಿಲ್ಲದ ಸುಮಲತಾ, ಆದಷ್ಟು ಸ್ವಂತ ಮನೆಯನ್ನೇ ಹೊಂದುವುದಕ್ಕೆ ನಿರ್ಧರಿಸಿದ್ದಾರೆ. ವಾಸ್ತು ಪ್ರಕಾರವಾಗಿ ಕಟ್ಟಿರುವ ಮನೆಯನ್ನೇ ಖರೀದಿಸಲು ಮುಂದಾಗಿದ್ದಾರೆಂದು ಅಭಿಮಾನಿ ವಲಯದಿಂದ ಗೊತ್ತಾಗಿದೆ.
ಬಾಡಿಗೆ ಮನೆ ಮಾಡಿದರೆ ಮಾಜಿ ಸಂಸದೆ ರಮ್ಯಾ ಅವರಂತೆ ಚುನಾವಣೆ ಮುಗಿದ ಮೇಲೆ ಬೆಂಗಳೂರಿಗೆ ಹೊರಟುಹೋಗುವರೆಂಬ ಅಪಪ್ರಚಾರಕ್ಕೆ ಸಿಲುಕಬೇಕಾಗುತ್ತದೆ. ಹೀಗಾಗಿ ಸ್ವಂತ ಮನೆ ಮಾಡಿಕೊಂಡರೆ ಅಪವಾದದಿಂದ ದೂರವಿರಬಹುದು. ಮಂಡ್ಯದ ಜನರ ಜತೆ ನಿರಂತರ ಸಂಪರ್ಕದಲ್ಲಿರುವುದಕ್ಕೆ ಸಾಧ್ಯವಾಗುತ್ತದೆ. ಅಲ್ಲದೆ, ಸ್ವಂತ ಮನೆಯಿಂದ ಈ ನೆಲದೊಂದಿಗಿನ ಬಾಂಧವ್ಯವೂ ಉಳಿಯಲಿದೆ ಎಂಬುದೂ ಅವರ ಮನಸ್ಸಿನಲ್ಲಿದೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್