ಡಾ| ಭರತ್ ಕುಮಾರ್ ಪೊಲಿಪು ಅವರಿಗೆ ಅಭಿನಂದನೆ
Team Udayavani, Mar 6, 2019, 2:11 PM IST
ಮುಂಬಯಿ: ಈ ಬಾರಿಯ ಪ್ರತಿಷ್ಠಿತ ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್ ಪಡೆದ ರಂಗತಜ್ಞ, ಸಂಘಟಕ, ಖ್ಯಾತ ರಂಗ ನಿರ್ದೇಶಕ, ಕರ್ನಾಟಕ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್ ಕುಮಾರ್ ಪೊಲಿಪು ಅವರನ್ನು ಗೌರವಿಸಲಾಯಿತು.
ಇತ್ತೀಚೆಗೆ ಮುಂಬಯಿ ವಿಶ್ವ ವಿದ್ಯಾಲಯ ಕನ್ನಡ ವಿಭಾಗ ಹಾಗೂ ಮೈಸೂರು ಅಸೋಸಿಯೇಶನ್ ಇವರ ಸಂಯುಕ್ತ ಅಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಹೊರನಾಡ ಕನ್ನಡ ರಂಗಭೂಮಿ ಎಂಬ ಡಾ| ಪೊಲಿಪು ಅವರ ಶೋಧ ಯೋಜನೆಗೆ ಕರ್ನಾಟಕ ನಾಟಕ ಅಕಾಡೆಮಿ ಹಸಿರು ನಿಶಾನೆ ತೋರಿಸಿದ್ದು ಈ ಯೋಜನೆ ಸಿದ್ಧಗೊಳಿಸಲು ಒಂದು ಲಕ್ಷ ರೂಪಾಯಿಗಳ ಅನುದಾನವನ್ನು ಘೋಷಿಸಿದೆ.
ಈ ಸಾಧನೆಗಾಗಿ ಡಾ| ಭರತ್ ಕುಮಾರ್ ಪೊಲಿಪು ಅವರನ್ನು ಮುಂಬಯಿ ಕನ್ನಡಿಗರ ಪರವಾಗಿ ಖ್ಯಾತ ಸಾಹಿತಿ, ಸಿನೆಮಾ ನಿರ್ದೇಶಕ ಡಾ| ನಾಗತಿಹಳ್ಳಿ ಚಂದ್ರಶೇಖರ ಅವರು ಗೌರವಿಸಿದರು.
ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಜಿ. ಎನ್. ಉಪಾಧ್ಯ, ಹಿರಿಯ ನಾಟಕಕಾರ ಡಾ| ಮಂಜುನಾಥ್, ಸಂಘಟಕ ಮಂಜುನಾಥಯ್ಯ, ಮೈಸೂರು ಅಸೋಸಿಯೇಶನ್ ಕಾರ್ಯದರ್ಶಿ ಡಾ| ಗಣಪತಿ ಶಂಕರಲಿಂಗ, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಶೆಟ್ಟಿ, ಕಲಾವಿದ ಜಯ ಸಾಲ್ಯಾನ್, ಹಿರಿಯ ಸಂಶೋಧಕಿ ಡಾ| ಲೀಲಾ ಬಿ. ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’