ಪಾಕ್‌ಗೆ ಮಸೂದ್‌ ಕಳುಹಿಸಿದ್ದು ಯಾರು ? : ರಾಹುಲ್‌ 


Team Udayavani, Mar 10, 2019, 12:03 AM IST

rahul-gandhi.jpg

ಹಾವೇರಿ: ಪುಲ್ವಾಮಾದಲ್ಲಿ ಭಾರತೀಯ ಯೋಧರಹತ್ಯೆಗೈದ ಜೈಶ್‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಸುರಕ್ಷಿತವಾಗಿ ಪಾಕಿಸ್ತಾನಕ್ಕೆ ಬಿಟ್ಟು ಬಂದಿದ್ದೇ ಬಿಜೆಪಿ. ಹೀಗಾಗಿ ಉಗ್ರ ದಾಳಿಗೆ ಬಿಜೆಪಿಯೇ ಹೊಣೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಮುನ್ಸಿಪಲ್‌ ಮೈದಾನದಲ್ಲಿ ಶನಿವಾರ ನಡೆದ ಪರಿವರ್ತನಾ ರ್ಯಾಲಿಗೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪುಲ್ವಾಮಾದಲ್ಲಿ ಭಾರತೀಯ ಯೋಧರ ಹತ್ಯೆ ಮಾಡಿದ್ದು ಯಾರು, ಜೈಶ್‌ ಮೊಹಮ್ಮದ್‌ ಸಂಘಟನೆ ಮುಖ್ಯಸ್ಥ ಯಾರು, ಆ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಭಾರತದ ಜೈಲಿನಿಂದ ಪಾಕಿಸ್ತಾನಕ್ಕೆ ಬಿಟ್ಟು ಬಂದವರು ಯಾರು ಎಂಬುದನ್ನು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ತಿಳಿಸಬೇಕು. ಕಂದಹಾರ್‌ ವಿಮಾನ ಅಪಹರಣ ಘಟನೆ ಬಗ್ಗೆ ಇಂಟರ್‌ನೆಟ್‌ನಲ್ಲಿ ನೋಡಿದರೆ ಬಿಜೆಪಿ ಸರ್ಕಾರ ಇದ್ದಾಗಲೇ ಆಗಿನ ರಕ್ಷಣಾ ಸಚಿವ ಜಾರ್ಜ್‌ ಫ‌ರ್ನಾಂಡೀಸ್‌ ಹಾಗೂ ಭಾರತೀಯ ಸೇನಾ ಮುಖ್ಯಸ್ಥರು ಪಾಕಿಸ್ತಾನಕ್ಕೆ ಹೋಗಿ ಮಸೂದ್‌ನನ್ನು ಬಿಟ್ಟು ಬಂದ ´ೋಟೋಗಳು ಕಾಣುತ್ತವೆ. ಇದನ್ನು ಮೋದಿಯವರು ಮರೆತರೇ? ಮೋದಿ ತಮ್ಮ ಭಾಷಣದಲ್ಲಿ ಇದನ್ನು ಏಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಮೋದಿಯವರೇ, ನಾವು ನಿಮ್ಮ ಥರ ಅಲ್ಲ, ಭಯೋತ್ಪಾದನೆಗೆ ನಾವು ತಲೆಬಾಗಲ್ಲ; ಎದುರಿ ಸುತ್ತೇವೆ. ಮೋದಿ ಇನ್ನೊಮ್ಮೆ ರಾಜ್ಯಕ್ಕೆ ಬಂದಾಗ ಈ ವಿಚಾರವನ್ನು ಭಾಷಣದಲ್ಲಿ ಪ್ರಸ್ತಾಪಿಸಿ ಉಗ್ರ ಮಸೂದ್‌ಗೆ ರಕ್ಷಣೆ ಕೊಟ್ಟಿದ್ದು ಯಾರು ಎಂದು ತಿಳಿಸಬೇಕು. ಅತ್ತ ದೇಶದ ಭೂಪ್ರದೇಶವನ್ನು ಚೀನಾ ಆಕ್ರಮಿಸಿದರೆ ಇತ್ತ ಪ್ರಧಾನಿ ಮೋದಿ ಚೀನಾ ಅಧ್ಯಕ್ಷರ ಜತೆ ಉಯ್ನಾಲೆಯಲ್ಲಿ ಕುಳಿತು ಚರ್ಚೆ ಮಾಡುತ್ತಾರೆ. ವಿದೇಶಗಳಿಗೆ ಹೋದಲ್ಲೆಲ್ಲ ಮೋದಿ ತಲೆಬಾಗಿಸಿ ಬರುತ್ತಾರೆ ಎಂದರು.

ಮೋದಿ ಚೌಕಿದಾರ್‌ ಅಲ್ಲ: ದೇಶದ ಚೌಕಿದಾರ (ಕಾವಲುಗಾರ) ಎನ್ನುತ್ತಲೇ ಮೋದಿ ರಫೇಲ್‌ ಹಗರಣದಲ್ಲಿ 30,000 ಕೋಟಿ ರೂ. ಹಣ ಅಂಬಾನಿ ಕಿಸೆಗೆ ಹಾಕಿದರು. ದೇಶದಲ್ಲಿ ಒಮ್ಮೆಯೂ ಒಂದೂ ಯುದ್ಧ ವಿಮಾನ ತಯಾರಿಸದ ಅನಿಲ್‌ ಅಂಬಾನಿಗೆ ರಷ್ಯಾಕ್ಕೆ ಕರೆದುಕೊಂಡು ಹೋಗಿ ಗುತ್ತಿಗೆ ಕೊಡಿಸುತ್ತಾರೆ. ಹೋದಲ್ಲೆಲ್ಲ ಭ್ರಷ್ಟಾಚಾರದ ವಿರುದ್ದ  ಹೋರಾಡುತ್ತೇನೆ ಎನ್ನುತ್ತಲೇ ಅಂಬಾನಿ, ಅದಾನಿ, ನೀರವ್‌ ಮೋದಿ, ಲಲಿತ್‌ ಮೋದಿಯಂಥವರಿಗೆ ಚೌಕಿದಾರ ಕೆಲಸ ಮಾಡಿ ಅವರು ಈ ದೇಶದ ಚೋರ್‌ದಾರ್‌ ಆಗಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಬಡವರ ಖಾತೆಗೆ ಕೇವಲ 3.50 ರೂ.
ಅದಾನಿ, ಅಂಬಾನಿ ಯಂಥ 10-15 ಜನರ ಖಾತೆಗೆ ಲಕ್ಷ ಕೋಟಿ ಹಣ ಹಾಕುವ ಮೋದಿಯವರು ಬಡವರ ಖಾತೆಗೆ 3.50 ರೂ. ಹಾಕುತ್ತಾರೆ. ನಾವು ಬಡವರಿಗೆ 3.50 ರೂ. ಕೊಡಲ್ಲ. ಬಡವರಿಗೆ ಕನಿಷ್ಠ ವರಮಾನ ಖಾತ್ರಿಯಾಗಿ ಪ್ರತಿ ತಿಂಗಳು ಕೊಡುತ್ತೇವೆ ಎಂದು ರಾಹುಲ್‌ ಹೇಳಿದರು.

ಮೋದಿಗೆ ರೈತರು ಕಾಣಿಸುತ್ತಿಲ್ಲ: ಕೆಲ ದಿನಗಳ ಹಿಂದೆ ಮೋದಿ ರಾಜ್ಯಕ್ಕೆ ಬಂದು ಕರ್ನಾಟಕ ಸರ್ಕಾರ ರೈತರಿಗೆ ಲಾಲಿಪಾಪ್‌ ಕೊಟ್ಟಿದೆ ಎಂದಿದ್ದಾರೆ. 11 ಸಾವಿರ ಕೋಟಿ ರೈತರ ಸಾಲಮನ್ನಾ ಮೋದಿಯವರಿಗೆ ಲಾಲಿಪಾಪ್‌ ಆಗಿದೆ.

ಕಾಂಗ್ರೆಸ್‌ ಛತ್ತೀಸಗಡ ಸೇರಿದಂತೆ 3 ರಾಜ್ಯಗಳಲ್ಲಿ ಪಕ್ಷ ಘೋಷಿಸಿದಂತೆ ಸರ್ಕಾರ ಬಂದ ಎರಡು ದಿನಗಳಲ್ಲಿ ರೈತರ ಸಾಲಮನ್ನಾ ಮಾಡಿ ತೋರಿ ಸಿದ್ದೇವೆ. ಸಾವಿರಾರು ಕೋಟಿಗಳನ್ನು ಕೆಲವೇ ಕೆಲವು ಶ್ರೀಮಂತರ ಸಾಲಮನ್ನಾ ಮಾಡುವ ಮೋದಿಗೆ ದೇಶದ ರೈತರು ಕಾಣುತ್ತಿಲ್ಲ ಎಂದರು.

ಎರಡೂ ಪಕ್ಷಗಳ ಕಾರ್ಯಕರ್ತರು ಮೈತ್ರಿ ಪಕ್ಷದ ಅಭ್ಯರ್ಥಿಗಳಗೆಲುವಿ ಗೆ ಒಗ್ಗೂಡಿ ಕೆಲಸ ಮಾಡುತ್ತಾರೆ.
ನಮ್ಮದು ರೈತ ಹಾಗೂ ಬಡವರ ಪರ ಸರ್ಕಾರವಾಗಿದ್ದು, ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಲು ಸಜ್ಜಾಗಿದ್ದೇವೆ.

 ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.