ನಿಶ್ಚಿತಾರ್ಥ ಮುಗಿಸಿ ಕರ್ತವ್ಯಕ್ಕೆ ಮರಳಿದ್ದ ಬೆಳಗಾವಿ ಯೋಧ ಹುತಾತ್ಮ
Team Udayavani, Mar 17, 2019, 4:05 PM IST
ಬೆಳಗಾವಿ : ಪಶ್ಚಿಮ ಬಂಗಾಳದಲ್ಲಿ ನಕ್ಸಲ್ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಖಾನಾಪುರದ ನಾವಗದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ರಾಹುಲ್ ವಸಂತ್ ಶಿಂಧೆ (29) ಹುತಾತ್ಮ ಯೋಧ. ನಾಲ್ಕು ವರ್ಷಗಳಿಂದ ಬಿಎಸ್ಎಫ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮುಗಿಸಿಕೊಂಡು ಕರ್ತವ್ಯಕ್ಕೆ ಮರಳಿದ್ದರು ಎಂದು ತಿಳಿದು ಬಂದಿದೆ.
ನಾವಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,ನಾಳೆ ಪಾರ್ಥೀವ ಶರೀರ ಆಗಮಿಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ರಾಹುಲ್ ಅವರ ಸಹೋದರನೂ ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.