ಸಚಿವ ಡಿಕೆಶಿ ವಿರುದ್ಧದ ಇಸಿಐಆರ್ ಒಪ್ಪಲಾಗದು’
Team Udayavani, Mar 19, 2019, 12:30 AM IST
ಬೆಂಗಳೂರು: ಐಟಿ ದಾಳಿ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಇಸಿಐಆರ್ ಒಪ್ಪಲು ಸಾಧ್ಯವಿಲ್ಲ ಎಂದು ಸಚಿವ ಡಿ.
ಕೆ. ಶಿವಕುಮಾರ್ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.
ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ.ಅರವಿಂದ ಕುಮಾರ್ ಅವರಿದ್ದ ಏಕಸದದಸ್ಯ ನ್ಯಾಯಪೀಠದಲ್ಲಿ ಸೋಮವಾರ ವಾದ ಮಂಡಿಸಿದ ಕಪಿಲ್ ಸಿಬಲ್, ಇಸಿಐಆರ್ ಒಂದು ಆಂತರಿಕ ದಾಖಲೆ, ಅಲ್ಲದೇ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಪ್ರಕರಣದಲ್ಲಿ ಪಿಎಂಎಲ್ಎ ಕಾಯ್ದೆ ಅನ್ವಯವಾಗುವುದಿಲ್ಲ ಎಂದರು. ಇಸಿಐಆರ್ ಆಂತರಿಕ ದಾಖಲೆ, ಅದು ನಮ್ಮ ಕೈಗೆ ಸಿಕ್ಕಿಲ್ಲ. ಆದರೆ, ಕೋರ್ಟ್ಗೆ ಸಲ್ಲಿಸಲಾಗಿದೆ. ಅದರಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ.
ಹಾಗಾಗಿ, ಅದೊಂದು ಹೈಬ್ರಿಡ್ ದಾಖಲೆ. ಆದ್ದರಿಂದ ಅದನ್ನು ಒಪ್ಪಲು ಸಾಧ್ಯವಿಲ್ಲ ಮತ್ತು ನ್ಯಾಯಾಲಯ ಅದನ್ನು ಸಾಕ್ಷಿಯಾಗಿ ಪರಿಗಣಿಸಲೂಬಾರದು. ದೂರು ಅಥವಾ ಎಫ್ ಐಆರ್ನಲ್ಲಿ ಆರೋಪಗಳ ಬಗ್ಗೆ ಉಲ್ಲೇಖೀಸಿದ್ದರೆ, ಅದಕ್ಕೆ ಸ್ಪಷ್ಟನೆ ಅಥವಾ ಉತ್ತರ ನೀಡಬಹುದು ಎಂದು ಕಪಿಲ್ ಸಿಬಲ್ ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇಸಿಐಆರ್ ಕೋರ್ಟ್ಗೆ ಸಲ್ಲಿಸುವಂತೆ ಹೇಳಿದ್ದು, ನಾವು. ಅದನ್ನು ನೋಡುವ ಹಕ್ಕು ನ್ಯಾಯಾಲಯಕ್ಕಿದೆ ಎಂದು, ವಿಚಾರಣೆಯನ್ನು ಮಂಗಳವಾರಕ್ಕೆ (ಮಾ.19) ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ