ರಾಜ್ಯಾದ್ಯಂತ ಭ್ರಷ್ಟ ಕುಳಗಳಿಗೆ ಎ.ಸಿ.ಬಿ. ಶಾಕ್
Team Udayavani, Mar 19, 2019, 5:52 AM IST
ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಆಧಿಕಾರಿಗಳ ನಿವಾಸಗಳ ಮೇಲೆ ಇಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಕೋಟಿಗಟ್ಟಲೆ ಮೌಲ್ಯದ ಚರಾಸ್ತಿ ಹಾಗೂ ಸ್ತಿರಾಸ್ತಿ ಪತ್ತೆಯಾಗಿದೆ. ಡಿ.ವೈ.ಎಸ್ಪಿ. ರವಿಶಂಕರ್, ವಝೀರ್ ಖಾನ್ ಹೆಚ್ಚುವರಿ ನೋಂದಾವಣಾಧಿಕಾರಿ ಮತ್ತು ರಮೇಶ್ ಜಾರಕಿಹೊಳಿಯವರ ಮಾಜೀ ಆಪ್ತಕಾರ್ಯದರ್ಶಿ ಸತೀಶ್ ಬಿ.ಸಿ. ಮುಂತಾದವರ ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು, ಗದಗ್, ವಿಜಯಪುರಗಳಲ್ಲಿ ಎಸಿಬಿ ದಾಳಿ ನಡೆದಿರುವ ಕುರಿತಾಗಿ ವರದಿಯಾಗಿದೆ.
ಹೆಚ್ಚುವರಿ ನೋಂದಾವಣಾಧಿಕಾರಿಯಾಗಿರುವ ಸತೀಶ್ ಬಿ.ಸಿ. ಅವರ ಬಸವೇಶ್ವರ ನಗರದಲ್ಲಿರುವ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಇಲ್ಲಿನ ವೀರಶೈವ ಕೊ ಅಪರೇಟಿವ್ ಬ್ಯಾಂಕ್ ನಲ್ಲಿ ಸತೀಶ್ ಅವರ ಹೆಸರಿನಲ್ಲಿದ್ದ ಮೂರು ಅಕೌಂಟ್ ಗಳಲ್ಲಿ 1.5 ಕೋಟಿ ರೂಪಾಯಿಗಳ ಹಣ ಪತ್ತೆಯಾಗಿದೆ. ಇದೀಗ ಎಸಿಬಿ ಅಧಿಕಾರಿಗಳು ಸತೀಶ್ ಅವರ ನಿವಾಸದಲ್ಲಿ ಆಸ್ತಿ ಕಡತಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಇನ್ನು ಎಸಿಸಿ ಶರದ್ ಇಜಾರಿ ಅವರ ವಿಜಯಪುರದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಆರು ಲಕ್ಷ ನಗದು, ಆರು ನಿವೇಶನ ದಾಖಲೆಗಳು ಮತ್ತು ಬ್ಯಾಂಕ್ ಲಾಕರ್ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಸಂಬಂಧಿತ ಕಡತಗಳ ಪರಿಶಿಲನೆಯನ್ನು ಎಸಿಬಿ ಅಧಿಕಾರಿಗಳು ಮುಂದುವರೆಸಿದ್ದಾರೆ. ದಾಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್ಶೀಟ್
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್ಶೀಟ್
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ