ನಾಲ್ವರು ಭ್ರಷ್ಟರಿಗೆ ಎಸಿಬಿ ಬಿಸಿ
Team Udayavani, Mar 20, 2019, 12:30 AM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಾಯಕ ಅಧಿಕಾರಿ ಸೇರಿ ನಾಲ್ವರು ಸರ್ಕಾರಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳು ಸೇರಿ ರಾಜ್ಯದ 10 ಸ್ಥಳಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮ ಆಸ್ತಿ ಕುರಿತ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ ಜೆ.ಬಿ ನಗರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ಮಂಜುನಾಥ್ ಎಸ್.ಬಿ., ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರನಿಬಂಧಕ ಬಿ.ಸಿ ಸತೀಶ್, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ವಿಜಯಪುರ ಉಪನಿರ್ದೇಶಕ ಶರದ್ ಗಂಗಪ್ಪ ಇಜ್ರಿ, ಮುಂಡರಗಿ ಕೃಷಿ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪ್ರಕಾಶ್ಗೌಡ ಕುದರಿಮೋಟಿ ಅಕ್ರಮ ಆಸ್ತಿಗಳಿಕೆ ಆರೋಪದ ಉರುಳಿನಲ್ಲಿ ಸಿಲುಕಿಕೊಂಡವರು.
ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮಂಜುನಾಥ್ ಅವರ ಬೆಂಗಳೂರಿನಲ್ಲಿರುವ ನಿವಾಸ, ಕಚೇರಿ, ಚನ್ನರಾಯಪಟ್ಟಣದಲ್ಲಿರುವ ಸಂಬಂಧಿಕರ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸಹಕಾರ ಇಲಾಖೆ ಅಧಿಕಾರಿ ಬಿ.ಸಿ ಸತೀಶ್ ಹಾಗೂ ಅವರ ಸಂಬಂಧಿಕರು ವಾಸವಿರುವ ಬೆಂಗಳೂರಿನ ನಿವಾಸಗಳು ಅವರ ಕಚೇರಿ, ಕೆಆರ್ಐಡಿಎಲ್ ಉಪನಿರ್ದೇಶಕ ಶರದ್ ಗಂಗಪ್ಪ ಇಜ್ರಿ ಅವರ ವಿಜಯಪುರದ ಕಚೇರಿ ಹಾಗೂ ನಿವಾಸಗಳು, ಕೃಷಿ ಅಧಿಕಾರಿ ಪ್ರಕಾಶ್ ಗೌಡ ಅವರ ಮುಂಡರಗಿ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ನಾಲ್ವರು ಆರೋಪಿತ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳಲ್ಲಿ ದೊರೆತ ಆಸ್ತಿ ದಾಖಲೆಗಳನ್ನು ಶೋಧ ಕಾರ್ಯಾಚರಣೆ ವೇಳೆ ದೊರೆತಿದ್ದು ಪರಿಶೀಲನೆ ನಡೆಸಲಾಗುತ್ತಿದೆ. ಜತೆಗೆ, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?