ಧಾರವಾಡ ಕಟ್ಟಡ ದುರಂತ: 13ಕ್ಕೇರಿದ ಮೃತರ ಸಂಖ್ಯೆ
Team Udayavani, Mar 22, 2019, 12:30 AM IST
ಧಾರವಾಡ: ಬಹುಮಹಡಿ ಕಟ್ಟಡ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 13ಕ್ಕೇರಿದ್ದು, ಗುರುವಾರ ಯಾರನ್ನೂ ರಕ್ಷಿಸಲು ಸಾಧ್ಯವಾಗಲಿಲ್ಲ. ಇನ್ನೂ ಎರಡು ದಿನ ಕಾಲ ಕಾರ್ಯಾಚರಣೆ ಮುಂದುವರಿಯುವ ನಿರೀಕ್ಷೆ ಇದ್ದು, ಈಗ ಕಟ್ಟಡದ ಅವಶೇಷಗಳನ್ನು ದೈತ್ಯ ಯಂತ್ರಗಳಿಂದ ಒಡೆದು ತೆರವುಗೊಳಿಸುವ ಕಾರ್ಯ ಆರಂಭಗೊಂಡಿದೆ. ಗುರುವಾರ ಏಳು ಶವಗಳನ್ನು ಹೊರತೆಗೆಯಲಾಗಿದೆ.
ಗುರುವಾರ ರಾತ್ರಿವರೆಗೂ ಒಟ್ಟು 13 ಜನ ಮೃತಪಟ್ಟಿದ್ದನ್ನು ಜಿಲ್ಲಾಧಿಕಾರಿಗಳು ದೃಢಪಡಿಸಿದ್ದು, ಕಟ್ಟಡದ ಅವಶೇಷಗಳಡಿ ಇನ್ನೂ 20 ಜನರು ಇರುವ ಸಾಧ್ಯತೆ ಇದೆ ಎಂದಿದ್ದಾರೆ. ಈ ಮಧ್ಯೆ, ಕಟ್ಟಡ ದುರಂತ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಗುರುವಾರ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದರು.
ಅನಂತರ ಕಟ್ಟಡದ ಅವಶೇಷಗಳಡಿ ಸಿಲುಕಿದ್ದವರ ಸಂಬಂಧಿಗಳನ್ನು ಭೇಟಿ ಮಾಡಿ ಧೈರ್ಯ
ಹೇಳಿದರು. ಮೃತರ ಕುಟುಂಬ ಸದಸ್ಯರಿಗೆ ಸರಕಾರದಿಂದ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದು, ಈ ಬಗ್ಗೆ ಚಿಂತೆ ಬೇಡ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?