ಕಿಲ್ಲರ್‌ ಕಟ್ಟಡ: ಸಾವಿನ ಸಂಖ್ಯೆ 15ಕ್ಕೇರಿಕೆ


Team Udayavani, Mar 23, 2019, 12:06 AM IST

1-aaa.jpg

ಧಾರವಾಡ : ಕಿಲ್ಲರ್‌ ಕಟ್ಟಡ ದುರಂತದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿದ್ದು, ಶುಕ್ರವಾರ ನಾಲ್ಕು ಮಂದಿ ಅವಶೇಷಗಳಿಂದ ಸುರಕ್ಷಿತವಾಗಿ ಹೊರ ಬಂದಿದ್ದಾರೆ. ಈ ನಾಲ್ವರನ್ನು ಸೇರಿ ಒಟ್ಟು 54 ಜನರನ್ನು ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಅಗ್ನಿಶಾಮಕದಳ ರಕ್ಷಣೆ ಮಾಡಿದ್ದು, ಶನಿವಾರವೂ ಕಾರ್ಯಾಚರಣೆ ಮುಂದುವರಿಯಲಿದೆ.

ಸಾವಿನ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದ ರಕ್ಷಣಾ ಸಿಬ್ಬಂದಿ ನೇರವಾಗಿ ಜೆಸಿಬಿಗಳನ್ನು ಬಳಸಿ ಕಟ್ಟಡದ ಅವಶೇಷಗಳ ತೆರವು ಆರಂಭಿಸಿದ್ದರು. ಬೆಳಗ್ಗೆಯೇ ಮಾಜಿ ಸೈನಿಕ ಸುಬ್ಬಪ್ಪ ದಿಂಡಲಕೊಪ್ಪ (68) ಅವರ ಶವ ಹೊರ ತೆಗೆಯಲಾಯಿತು. ಅವರ ಬೆನ್ನ ಹಿಂದೆಯೇ ಜೀವಂತವಾಗಿ ಹೊರಬಂದ ಸಂಗನಗೌಡ ರಾಮನಗೌಡರ ಕಟ್ಟಡದ ಒಳಗಡೆ ಇನ್ನೂ ಕೆಲವಷ್ಟು ಜನರು ಜೀವಂತವಾಗಿದ್ದಾರೆ ಎಂಬ ಸುಳಿವು ಬೆನ್ನಟ್ಟಿದ ರಕ್ಷಣಾ ಸಿಬ್ಬಂದಿ, ದಿಲೀಪ್‌ ಕೊಕರೆ(35) ಮತ್ತು ಸಂಗೀತಾ(33) ದಂಪತಿಯನ್ನು ರಕ್ಷಿಸಿದರು.

ಇವರು ಹೊರಬಂದು ಇನ್ನೂ ಕೆಲವಷ್ಟು ಜನರು ಜೀವಂತವಿದ್ದಾರೆ ಎಂಬ ಮಾಹಿತಿ ನೀಡಿದಾಗ ಮತ್ತೆ ಸೂಕ್ಷ್ಮ ಕಾರ್ಯಾಚರಣೆಗೆ ಇಳಿದ ಎನ್‌ಡಿಆರ್‌ಎಫ್‌ ಸಿಬ್ಬಂದಿ ಹೊನ್ನಮ್ಮ ಕಮಸೋಲ(45) ಎಂಬ ಮಹಿಳೆಯನ್ನು ಸಂಜೆ ವೇಳೆಗೆ ಜೀವಂತವಾಗಿ ರಕ್ಷಿಸಿ ಹೊರ ತಂದರು. ಅವರ ಕಾಲಿಗೆ ಬಲವಾದ ಏಟು ಬಿದ್ದಿದ್ದರಿಂದ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಕಟ್ಟಡ ಅವಶೇಷಗಳ ತಳ ಮಹಡಿಯಲ್ಲಿ ಇನ್ನೂ 15ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಎನ್‌ಡಿಆರ್‌ಎಫ್‌ ಸಿಬ್ಬಂದಿ ಹೇಳಿದ್ದು, ಶುಕ್ರವಾರ ರಾತ್ರಿ ಮತ್ತೆ ಚುರುಕು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಚಿವರ ನೆನೆದ ಗಾಯಾಳುಗಳು: ಈ ಮಧ್ಯೆ ಮೂರು ದಿನಗಳ ಕಾಲ ಕಟ್ಟಡ ದುರಂತದ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯಾಚರಣೆಗೆ ಬೆನ್ನೆಲುಬಾಗಿ ನಿಂತಿದ್ದ ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ಅವರ ನಿಧನದಿಂದಾಗಿ ಅವರ ಅಭಿಮಾನಿಗಳು ಮತ್ತು ಅವರಿಂದ ಸಾಂತ್ವನದ ನುಡಿ ಕೇಳಿದ ಗಾಯಾಳುಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಮೊದಲ ದಿನ ಗಾಯಾಳುಗಳ ಆರೋಗ್ಯ ವಿಚಾರಸಿದ್ದ ಸಚಿವರು, ಪ್ರತಿಯೊಬ್ಬರ ಬಗ್ಗೆ ತೋರಿಸಿದ್ದ ಕಾಳಜಿ ನೆನೆದು, ಸಂತಾಪ ವ್ಯಕ್ತಪಡಿಸಿದರು.

2 ಲಕ್ಷ ಪರಿಹಾರ ವಿತರಣೆ
ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಧಾರವಾಡ ಡೀಸಿ ದೀಪಾ ಚೋಳನ್‌ ಶುಕ್ರವಾರ ಬೆಳಗ್ಗೆ 2 ಲಕ್ಷ ರೂ.ಚೆಕ್‌ ವಿತರಿಸಿದರು. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ|ರಾಜಕುಮರ್‌ ಖತ್ರಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು,
ಕಟ್ಟಡ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಹೆಚ್ಚಳದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳವ ಭರವಸೆ ನೀಡಿದರು.

ಆರೋಪಿಗಳು ಪೊಲೀಸ್‌ ವಶಕ್ಕೆ
ಗುರುವಾರ ಕೊಲ್ಲಾಪೂರದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಿಲ್ಲರ್‌ ಕಟ್ಟಡದ ಎಂಜಿನಿಯರ್‌ ವಿವೇಕ್‌ ಪವಾರ್‌ಗೆ ಮಾ.25ರವರೆಗೆ ಪೊಲೀಸ್‌ ಕಸ್ಟಡಿಗೆ ವಹಿಸುವಂತೆ ಇಲ್ಲಿನ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಇನ್ನುಳಿದಂತೆ ಗುರುವಾರ ತಡರಾತ್ರಿ ಪೊಲೀಸರಿಗೆ ಶರಣಾದ ಕಟ್ಟಡ ಮಾಲೀಕರಾದ ಗಂಗಾಧರ ಶಿಂತ್ರಿ, ಬಸವರಾಜ ನಿಗದಿ, ರವಿ ಸಬರದ, ಮಹಾಬಳೇಶ್ವರ ಪುರದಗುಡಿ ಅವರು ಕೂಡ ಪೊಲೀಸ್‌ ವಶದಲ್ಲಿದ್ದು ಅವರನ್ನು ಪೊಲೀಸರು ಶೀಘ್ರವೇ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಧಾರವಾಡದಲ್ಲಿ ಕಟ್ಟಡ ದುರಂತ ನಡೆದಿರುವುದು ವಿಷಾದನೀಯ ಸಂಗತಿ. ಮೃತರ ಕುಟುಂಬಗಳಿಗೆ ಭಗವಂತ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಈ ಘಟನೆಯಲ್ಲಿ ಗಾಯಗೊಂಡ ಎಂಟು ಜನರಿಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ● ಡಾ|ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಧರ್ಮಾಧಿಕಾರಿ
 

ಟಾಪ್ ನ್ಯೂಸ್

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.