ಡಾ. ರಾಜ್‌ ಹಾಡಿದ ಕೊನೆಯ ಹಾಡು ಯಾರಲ್ಲಿದೆ ಗೊತ್ತಾ?


Team Udayavani, May 19, 2017, 8:30 PM IST

Dr.-Rajkumar-Singing-600.jpg

ಡಾ. ರಾಜಕುಮಾರ್‌ ಅವರು ಹಾಡಿರುವ ಕೊನೆಯ ಹಾಡು ಯಾವುದು? ಇವತ್ತಿಗೂ ಅವರ ಕೊನೆಯ ಜನಪ್ರಿಯ ಹಾಡೆಂದು ಸಿಗುವುದು ‘ಅಭಿ’ ಚಿತ್ರದ ‘ವಿಧಿ ಬರಹ ಎಂಥ ಘೋರ, ಪ್ರೇಮಿಗಳು ದೂರ ದೂರ …’ ಹಾಡು. ಇನ್ನು ಇಂಟರ್‌ನೆಟ್‌ನಲ್ಲಿ ಹುಡುಕಿದರೆ, ಅವರ ಕೊನೆಯ ಹಾಡೆಂದು ಸಿಗುವುದು ‘ತೆರಳುತಿದೆ ಮರಳಿ ಮಣ್ಣಿಗೆ ಜೀವ …’ ಎಂಬ ಹಾಡು. 2007ರಲ್ಲಿ ಬಂದ ‘ಜೀವನ ಧಾರೆ’ ಎಂಬ ಚಿತ್ರಕ್ಕೆ ಹಾಡಿದ ಹಾಡೇ, ಡಾ. ರಾಜಕುಮಾರ್‌ ಅವರ ಕೊನೆಯ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ರಾಜಕುಮಾರ್‌ ಅವರು ಹಾಡಿರುವ ಒಂದು ಹಾಡು ಇನ್ನೂ ಬಿಡುಗಡೆಯಾಗಿಲ್ಲ ಎಂಬುದು ಬಹಳಷ್ಟು ಜನರಿಗೆ ಗೊತ್ತಿರಲಿಕ್ಕಿಲ್ಲ ಮತ್ತು ಆ ಹಾಡನ್ನು ಸದ್ಯದಲ್ಲೇ ಹೊಸ ಚಿತ್ರವೊಂದರಲ್ಲಿ ಬಳಸಿಕೊಳ್ಳಲಾಗುತ್ತದೆ.

ಹೌದು, ‘ಚಕ್ರವರ್ತಿ’ ಚಿತ್ರದ ಮೂಲಕ ಸುಮಾರು 14 ವರ್ಷಗಳ ನಂತರ ಚಿತ್ರರಂಗಕ್ಕೆ ವಾಪಸ್ಸು ಬಂದ ಕುಮಾರ್‌ ಬಂಗಾರಪ್ಪ ಸದ್ಯದಲ್ಲೇ ಹೊಸ ಚಿತ್ರವೊಂದನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದಾರೆ. ಈ ಚಿತ್ರದಲ್ಲಿ ಡಾ. ರಾಜಕುಮಾರ್‌ ಅವರ ಕೊನೆಯ ಹಾಡೊಂದನ್ನು ಬಳಸಿಕೊಳ್ಳುತ್ತಾರಂತೆ. ‘ಬಹಳ ವರ್ಷಗಳ ಹಿಂದೆ ಒಂದು ಚಿತ್ರ ನಿರ್ಮಿಸುವುದಕ್ಕೆ ತಯಾರಿ ನಡೆಸಿದ್ದೆ. ಆಗ ಅಪ್ಪಾಜಿ ಅವರಿಂದ ಒಂದು ಹಾಡನ್ನೂ ಹಾಡಿಸಿದ್ದೆ. ಹಂಸಲೇಖ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಹಾಡು ಅದು. ಆ ನಂತರ ಏನೋ ಆಗಿ, ಆ ಚಿತ್ರವನ್ನು ಶುರು ಮಾಡುವುದಕ್ಕೆ ಸಾಧ್ಯವಾಗಲೇ ಇಲ್ಲ. ಆ ಚಿತ್ರಕ್ಕೆಂದು ಮಾಡಿಟ್ಟುಕೊಂಡಿದ್ದ ಹಾಡು, ಇನ್ನೂ ನನ್ನ ಬಳಿಯೇ ಇದೆ. ಆ ಹಾಡನ್ನು ಕೊಡಿ ಎಂದು ಹಲವರು ಕೇಳಿದರು. ಆದರೆ, ನಾನು ಯಾರಿಗೂ ಕೊಟ್ಟಿಲ್ಲ. ಆ ಹಾಡನ್ನು ಮೂಲವಾಗಿಟ್ಟುಕೊಂಡು, ಈಗೊಂದು ಚಿತ್ರ ಮಾಡುವ ಯೋಚನೆ ಇದೆ. ಸದ್ಯಕ್ಕೆ ಆ ಚಿತ್ರದ ತಯಾರಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಆ ಚಿತ್ರದ ಬಗ್ಗೆ ಹೇಳುತ್ತೇನೆ’ ಎನ್ನುತ್ತಾರೆ ಕುಮಾರ್‌ ಬಂಗಾರಪ್ಪ. ವಿಶೇಷವೆಂದರೆ, ಡಾ. ರಾಜಕುಮಾರ್‌ ಬೇರೆಯವರ ಚಿತ್ರಕ್ಕೆಂದು ಮೊದಲಿಗೆ ಹಾಡಿದ್ದು ಕುಮಾರ್‌ ಬಂಗಾರಪ್ಪ ಅಭಿನಯದ ‘ಅಶ್ವಮೇಧ’ ಚಿತ್ರಕ್ಕಾಗಿ. ಆ ಹಾಡು ಇವತ್ತಿಗೂ ಜನಪ್ರಿಯ ಮತ್ತು ಆರ್ಕೆಸ್ಟ್ರಾಗಳಲ್ಲಿ ಆ ಹಾಡು ಹಾಡದೆ, ಕಾರ್ಯಕ್ರಮ ಮುಗಿಯುವುದಿಲ್ಲ ಎಂದರೆ ತಪ್ಪಿಲ್ಲ. ಈಗ ಡಾ. ರಾಜಕುಮಾರ್‌ ಅವರ ಕೊನೆಯ ಹಾಡು ಸಹ ಕುಮಾರ್‌ ಬಂಗಾರಪ್ಪ ಚಿತ್ರಕ್ಕೇ ಆಗಿರುತ್ತದೆ ಎನ್ನುವುದು ವಿಶೇಷ.

‘ಅಪ್ಪಾಜಿ ಅವರು ಅದುವರೆಗೂ ಬೇರೆಯವರ ಚಿತ್ರಗಳಿಗೆ ಹಾಡುತ್ತಿರಲಿಲ್ಲ. ‘ಅಶ್ವಮೇಧ’ ಚಿತ್ರದ ಟೈಟಲ್‌ ಸಾಂಗ್‌ ಹಾಡುವುದಕ್ಕೆ ಕೇಳಿದೆ. ತಕ್ಷಣವೇ, ಯಾವಾಗ ರೆಕಾರ್ಡಿಂಗ್‌ ಎಂದು ಕೇಳಿದರು. ತಕ್ಷಣ ಹಾಡು ಬರೆಸಿದೆ. ಕೇಳಿ ಚೆನ್ನಾಗಿದೆ ಎಂದರು. ಮೊದಲು ಅದೊಂದು ಹಿನ್ನೆಲೆ ಹಾಡು ಎಂದು ಫಿಕ್ಸ್‌ ಆಗಿತ್ತು. ಚಿತ್ರೀಕರಣ ಮಾಡುವಾಗ, ಡ್ಯಾನ್ಸ್‌ ಮಾಸ್ಟರ್‌ ಯಾಕೋ ಕಿಕ್‌ ಬರುತ್ತಿಲ್ಲ ಎಂದರು. ಬರೀ ಹಿನ್ನೆಲೆ ಹಾಡಾಗಿ ಬೇಡ, ಅದಕ್ಕೆ ಲಿಪ್‌ ಮೂವ್‌ಮೆಂಟ್‌ ಕೊಡಿ ಎಂದರು. ಡಾ. ರಾಜಕುಮಾರ್‌ ಅವರು ಹಾಡಿದ ಹಾಡಿಗೆ ನಾನು ಲಿಪ್‌ ಮೂವ್‌ಮೆಂಟ್‌ ಕೊಡೋದಾ ಅಂತ ಭಯವಾಯಿತು. ಕೊನೆಗೆ ಅವರಿಗೆ ರಷಸ್‌ ತೋರಿಸಿದೆ. ಹಾಡು ನೋಡಿದವರೇ, ‘ಇಲ್ಲ ಕಂದ, ಇದೇ ಬಹಳ ಚೆನ್ನಾಗಿದೆ. ಹೀಗೇ ಇರಲಿ ಬಿಡು’ ಎಂದಿದ್ದರು. ಆ ಚಿತ್ರ ಬಿಡುಗಡೆಯಾದಾಗ, ಮೊದಲ ದಿನ ಅವರಿಗೆ ಊರ್ವಶಿ ಚಿತ್ರಮಂದಿರದಲ್ಲಿ ಚಿತ್ರ ತೋರಿಸಿದ್ದೆ. ಚಿತ್ರ ನೋಡಿದ ಅವರು, ‘ಈ ಹಾಡಿನಿಂದ ನೀನು ದೊಡ್ಡ ಹೀರೋ ಆಗ್ತೀಯ’ ಎಂದು ಹೇಳಿದ್ದರು ಎಂದು ನೆನಪಿಸಿಕೊಳ್ಳುತ್ತಾರೆ ಕುಮಾರ್‌ ಬಂಗಾರಪ್ಪ.

– ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.