ಸುಗ್ಗಿ ಸಂಭ್ರಮ : ತುಳು ಚಿತ್ರರಂಗದಲ್ಲೊಂದು ಹೊಸ ಪ್ರಯೋಗ


Team Udayavani, May 19, 2017, 8:38 PM IST

Suggi-20-5.jpg

‘ಸುಗ್ಗಿ’ ಎಂಬ ತುಳು ಸಿನಿಮಾವೊಂದು ತಯಾರಾಗಿರುವ ವಿಷಯ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತದಲ್ಲಿದೆ. ಆದರೆ, ಬಿಡುಗಡೆಗೆ ಮುನ್ನವೇ ‘ಸುಗ್ಗಿ’ ತಂಡ ಖುಷಿಯಾಗಿದೆ. ಆ ಖುಷಿಗೆ ಕಾರಣ ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ‘ಸುಗ್ಗಿ’ ಚಿತ್ರಕ್ಕೆ ಕೆಲವು ಪ್ರಶಸ್ತಿಗಳಿಗೂ ಭಾಜನವಾಗಿದೆ. ಈ ಚಿತ್ರವನ್ನು ಡಾ.ಎಸ್‌.ರಾಜ್‌ಕಮಲ್‌ ನಿರ್ದೇಶನ ಮಾಡಿದ್ದಾರೆ. ಇವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಆದರೆ, ಸಿನಿಮಾ ರಂಗ ಇವರಿಗೆ ಹೊಸದಲ್ಲ. ಈಗಾಗಲೇ ಬಿಡುಗಡೆಯಾಗಿರುವ ‘ಬಬ್ಲುಷ’ದಲ್ಲಿ ನಟಿಸಿರುವ ರಾಜ್‌ ಕಮಲ್‌, ಬಿಡುಗಡೆಯಾಗಬೇಕಿರುವ ಮೂರ್‍ನಾಲ್ಕು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ನಿರ್ದೇಶನದ ಜೊತೆಗೆ ‘ಸುಗ್ಗಿ’ಯ ಪ್ರಮುಖ ಪಾತ್ರದಲ್ಲೂ ರಾಜ್‌ಕಮಲ್‌ ನಟಿಸಿದ್ದಾರೆ.

ಕೊಲ್ಕತ್ತ ಇಂಟರ್‌ನ್ಯಾಷನಲ್‌ ಕಲ್ಟ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಬೆಸ್ಟ್‌ ಡೆಬ್ಯೂ ಫಿಲ್ಮ್ ಮೇಕರ್‌’, ಲಾಸ್‌ಎಂಜೆಲಿಸ್‌ ಸ್ವತಂತ್ರ ಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವಿದೇಶಿ ಚಿತ್ರ’, ಹಾಲಿವುಡ್‌ ಇಂಟರ್‌ನ್ಯಾಷನಲ್‌ ಮೂವಿಂಗ್‌ ಪಿಕ್ಚರ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಚೊಚ್ಚಲ ನಿರ್ದೇಶನದ ಚಿತ್ರ’ ಹಾಗೂ ದಾದಾ ಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಜ್ಯೂರಿ ಅವಾರ್ಡ್‌’ ಪ್ರಶಸ್ತಿಗಳನ್ನು ‘ಸುಗ್ಗಿ’ ತನ್ನದಾಗಿಸಿಕೊಂಡಿದೆ. ಜೊತೆಗೆ ಫೈವ್‌ ಕಾಂಟಿನೆಂಟ್ಸ್‌ ಇಂಟರ್‌ನ್ಯಾಷನಲ್‌ ಫಿಲ್ಮ್ಫೆ ಸ್ಟಿವಲ್‌ಗೆ ‘ಅಧಿಕೃತ ಆಯ್ಕೆ’ಗೊಂಡ ಚಿತ್ರ ಎಂಬ ಹೆಗ್ಗಳಿಕೆಯೂ ‘ಸುಗ್ಗಿ’ಯದ್ದು.

‘ಈ ಚಿತ್ರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಹೇಳುವ ಪ್ರಯತ್ನ ಮಾಡಿದ್ದೇನೆ. ಮುಖ್ಯವಾಗಿ ಪ್ರೀತಿಯಿಂದಲೇ ಎಲ್ಲವನ್ನು ಗೆಲ್ಲುತ್ತೇನೆ ಎಂದು ಹೊರಟಿರುವ ಆಯುರ್ವೇದ ಪಂಡಿತನ ಸುತ್ತ ಈ ಸಿನಿಮಾ ಸುತ್ತುತ್ತದೆ’ ಎನ್ನುವುದು ರಾಜ್‌ ಕಮಲ್‌ ಮಾತು. ಈ ಚಿತ್ರದಲ್ಲಿ ಆಧುನಿಕ ಸೌಲಭ್ಯಗಳಿಂದ ದೂರವಿರುವ ಹಳ್ಳಿಯೊಂದರಲ್ಲಿರುವ ಆಯುರ್ವೇದ ಪಂಡಿತರೊಬ್ಬರ ಜೀವನ ಶೈಲಿ ಹಾಗೂ ಎಲ್ಲವನ್ನು ಪ್ರೀತಿಯಿಂದಲೇ ಗೆಲ್ಲುತ್ತಾ ಹೋಗುವ ಅವರ ಮನಸ್ಥಿತಿಯ ಕುರಿತು ಹೇಳಲಾಗಿದೆ. ಚಿತ್ರಕ್ಕೆ ‘ಮೋಕೆದ’ ಎಂಬ ಟ್ಯಾಗ್‌ಲೈನ್‌ ಕೂಡಾ ಇದೆ. ಜೊತೆಗೆ ಜಾತಿ ವ್ಯವಸ್ಥೆ, ಮರ್ಯಾದಾ ಹತ್ಯೆ ಸೇರಿದಂತೆ ಅನೇಕ ವಿಷಯಗಳ ಸುತ್ತವೂ ‘ಸುಗ್ಗಿ’ ಸುತ್ತಲಿದೆ. ಮಂಗಳೂರಿನ ಸಖತ್‌ ರಗಡ್‌ ಲೊಕೇಶನ್‌ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಎ.ಬಿ. ಷಾ ಮತ್ತು ವಿ. ಕೃಷ್ಣಮೂರ್ತಿ ‘ಸುಗ್ಗಿ’ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ಭೂಮಿಕಾ ನಾಯಕಿ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.