ಸುಗ್ಗಿ ಸಂಭ್ರಮ : ತುಳು ಚಿತ್ರರಂಗದಲ್ಲೊಂದು ಹೊಸ ಪ್ರಯೋಗ


Team Udayavani, May 19, 2017, 8:38 PM IST

Suggi-20-5.jpg

‘ಸುಗ್ಗಿ’ ಎಂಬ ತುಳು ಸಿನಿಮಾವೊಂದು ತಯಾರಾಗಿರುವ ವಿಷಯ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತದಲ್ಲಿದೆ. ಆದರೆ, ಬಿಡುಗಡೆಗೆ ಮುನ್ನವೇ ‘ಸುಗ್ಗಿ’ ತಂಡ ಖುಷಿಯಾಗಿದೆ. ಆ ಖುಷಿಗೆ ಕಾರಣ ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ‘ಸುಗ್ಗಿ’ ಚಿತ್ರಕ್ಕೆ ಕೆಲವು ಪ್ರಶಸ್ತಿಗಳಿಗೂ ಭಾಜನವಾಗಿದೆ. ಈ ಚಿತ್ರವನ್ನು ಡಾ.ಎಸ್‌.ರಾಜ್‌ಕಮಲ್‌ ನಿರ್ದೇಶನ ಮಾಡಿದ್ದಾರೆ. ಇವರಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಆದರೆ, ಸಿನಿಮಾ ರಂಗ ಇವರಿಗೆ ಹೊಸದಲ್ಲ. ಈಗಾಗಲೇ ಬಿಡುಗಡೆಯಾಗಿರುವ ‘ಬಬ್ಲುಷ’ದಲ್ಲಿ ನಟಿಸಿರುವ ರಾಜ್‌ ಕಮಲ್‌, ಬಿಡುಗಡೆಯಾಗಬೇಕಿರುವ ಮೂರ್‍ನಾಲ್ಕು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ನಿರ್ದೇಶನದ ಜೊತೆಗೆ ‘ಸುಗ್ಗಿ’ಯ ಪ್ರಮುಖ ಪಾತ್ರದಲ್ಲೂ ರಾಜ್‌ಕಮಲ್‌ ನಟಿಸಿದ್ದಾರೆ.

ಕೊಲ್ಕತ್ತ ಇಂಟರ್‌ನ್ಯಾಷನಲ್‌ ಕಲ್ಟ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಬೆಸ್ಟ್‌ ಡೆಬ್ಯೂ ಫಿಲ್ಮ್ ಮೇಕರ್‌’, ಲಾಸ್‌ಎಂಜೆಲಿಸ್‌ ಸ್ವತಂತ್ರ ಚಿತ್ರೋತ್ಸವದಲ್ಲಿ ‘ಅತ್ಯುತ್ತಮ ವಿದೇಶಿ ಚಿತ್ರ’, ಹಾಲಿವುಡ್‌ ಇಂಟರ್‌ನ್ಯಾಷನಲ್‌ ಮೂವಿಂಗ್‌ ಪಿಕ್ಚರ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಚೊಚ್ಚಲ ನಿರ್ದೇಶನದ ಚಿತ್ರ’ ಹಾಗೂ ದಾದಾ ಸಾಹೇಬ್‌ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಜ್ಯೂರಿ ಅವಾರ್ಡ್‌’ ಪ್ರಶಸ್ತಿಗಳನ್ನು ‘ಸುಗ್ಗಿ’ ತನ್ನದಾಗಿಸಿಕೊಂಡಿದೆ. ಜೊತೆಗೆ ಫೈವ್‌ ಕಾಂಟಿನೆಂಟ್ಸ್‌ ಇಂಟರ್‌ನ್ಯಾಷನಲ್‌ ಫಿಲ್ಮ್ಫೆ ಸ್ಟಿವಲ್‌ಗೆ ‘ಅಧಿಕೃತ ಆಯ್ಕೆ’ಗೊಂಡ ಚಿತ್ರ ಎಂಬ ಹೆಗ್ಗಳಿಕೆಯೂ ‘ಸುಗ್ಗಿ’ಯದ್ದು.

‘ಈ ಚಿತ್ರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಹೇಳುವ ಪ್ರಯತ್ನ ಮಾಡಿದ್ದೇನೆ. ಮುಖ್ಯವಾಗಿ ಪ್ರೀತಿಯಿಂದಲೇ ಎಲ್ಲವನ್ನು ಗೆಲ್ಲುತ್ತೇನೆ ಎಂದು ಹೊರಟಿರುವ ಆಯುರ್ವೇದ ಪಂಡಿತನ ಸುತ್ತ ಈ ಸಿನಿಮಾ ಸುತ್ತುತ್ತದೆ’ ಎನ್ನುವುದು ರಾಜ್‌ ಕಮಲ್‌ ಮಾತು. ಈ ಚಿತ್ರದಲ್ಲಿ ಆಧುನಿಕ ಸೌಲಭ್ಯಗಳಿಂದ ದೂರವಿರುವ ಹಳ್ಳಿಯೊಂದರಲ್ಲಿರುವ ಆಯುರ್ವೇದ ಪಂಡಿತರೊಬ್ಬರ ಜೀವನ ಶೈಲಿ ಹಾಗೂ ಎಲ್ಲವನ್ನು ಪ್ರೀತಿಯಿಂದಲೇ ಗೆಲ್ಲುತ್ತಾ ಹೋಗುವ ಅವರ ಮನಸ್ಥಿತಿಯ ಕುರಿತು ಹೇಳಲಾಗಿದೆ. ಚಿತ್ರಕ್ಕೆ ‘ಮೋಕೆದ’ ಎಂಬ ಟ್ಯಾಗ್‌ಲೈನ್‌ ಕೂಡಾ ಇದೆ. ಜೊತೆಗೆ ಜಾತಿ ವ್ಯವಸ್ಥೆ, ಮರ್ಯಾದಾ ಹತ್ಯೆ ಸೇರಿದಂತೆ ಅನೇಕ ವಿಷಯಗಳ ಸುತ್ತವೂ ‘ಸುಗ್ಗಿ’ ಸುತ್ತಲಿದೆ. ಮಂಗಳೂರಿನ ಸಖತ್‌ ರಗಡ್‌ ಲೊಕೇಶನ್‌ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಎ.ಬಿ. ಷಾ ಮತ್ತು ವಿ. ಕೃಷ್ಣಮೂರ್ತಿ ‘ಸುಗ್ಗಿ’ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ಭೂಮಿಕಾ ನಾಯಕಿ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.