ಯೋಗ್ಯನಾಗುವ ಹಾದಿಯಲ್ಲಿ… ಪಂಚಾಯ್ತಿ ಸದಸ್ಯನ ಕಾಮಿಡಿ ಕಥೆ


Team Udayavani, Aug 11, 2017, 7:40 AM IST

yogya.jpg

ಹೊಸ ಮುಖವೇನಲ್ಲ. ಅದಕ್ಕೂ ಮುನ್ನ ಸಾಕಷ್ಟು ಪತ್ರಿಕಾಗೋಷ್ಠಿಗಳಲ್ಲಿ ಮಹೇಶ್‌ರನ್ನು ನೋಡಿದ್ದರು ಮಾಧ್ಯಮದವರು. ಅದರಲ್ಲೂ ಯೋಗರಾಜ್‌ ಭಟ್‌ ಅವರ ಚಿತ್ರಗಳ ಪತ್ರಿಕಾಗೋಷ್ಠಿಗಳಲ್ಲಿ, ಚಿತ್ರೀಕರಣ ಸ್ಪಾಟ್‌ಗಳಲ್ಲಿ ಮಹೇಶ್‌ ಹೆಚ್ಚಾಗಿಯೇ ಕಾಣಿಸಿಕೊಳ್ಳುತ್ತಿದ್ದರು. ಅದಕ್ಕೆ ಕಾರಣ, ಭಟ್ಟರ ಇತ್ತೀಚಿನ ಚಿತ್ರಗಳಿಗೆ ಮಹೇಶ್‌ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದರು. ಈಗ ಮೊದಲ ಬಾರಿಗೆ ನಿರ್ದೇಶಕರಾಗುತ್ತಿದ್ದಾರೆ ಮಹೇಶ್‌, “ಅಯೋಗ್ಯ’ ಎಂಬ ಚಿತ್ರದ ಮೂಲಕ. ಚಿತ್ರದ ಮುಹೂರ್ತ ವರಮಹಾಲಕ್ಷ್ಮೀ ಹಬ್ಬದಂದು ನಡೆಯಿತು.

ಪತ್ರಿಕಾಗೋಷ್ಠಿ ನಡೆಯುವಾಗ ದೂರದಲ್ಲಿ ಕೈಕಟ್ಟಿ ನಿಂತಿರುತ್ತಿದ್ದ ಮಹೇಶ್‌, ಈ ಬಾರಿ ವೇದಿಕೆಯ ಮೇಲಿದ್ದರು. ಚಿತ್ರದ ಬಗ್ಗೆ ವಿವರ ನೀಡುವ ಜವಾಬ್ದಾರಿ ಅವರದ್ದಾಗಿತ್ತು. ಹಳೆಯದನ್ನು ನೆನಪಿಸಿಕೊಂಡು, ಹೊಸದರ ಕುರಿತು ಅವರು ಮಾತು ಶುರು ಮಾಡಿದರು. “ಅಯೋಗ್ಯ’ ಸಿನಿಮಾಗೆ ಗ್ರಾಮ ಪಂಚಾಯ್ತಿ ಸದಸ್ಯರೇ ಸ್ಫೂರ್ತಿಯಂತೆ. ಅದೇ ಕಾರಣಕ್ಕೆ “ಅಯೋಗ್ಯ’ ಎಂಬ ಹೆಸರ ಕೆಳಗೆ “ಗ್ರಾಮ ಪಂಚಾಯ್ತಿ ಸದಸ್ಯ’ ಎಂಬ ಅಡಿಬರಹವನ್ನು ಅವರು ಬರೆಸಿದ್ದಾರೆ.

ಇದ್ಯಾಕೋ ವಿವಾದ ಆಗುವಂತೆ ಕಾಣುತ್ತಿದೆಯಲ್ಲಾ ಎಂದು ಪತ್ರಕರ್ತರಿಗೆ ಅನಿಸಿದ್ದುಂಟು. ತಾನು ಯಾರನ್ನೂ ಬಯ್ಯುತ್ತಿಲ್ಲ ಮತ್ತು ವಿವಾದ ಮಾಡಿಕೊಳ್ಳೋಕೂ ಇಷ್ಟ ಇಲ್ಲ ಎನ್ನುತ್ತಾರೆ ಮಹೇಶ್‌. “ಈ ಹೆಸರು ಇಡೋದಕ್ಕೂ ಕಾರಣವಿದೆ. ಅವನನ್ನ ಎಲ್ಲರೂ ಆ ಹಳ್ಳಿಯಲ್ಲಿ ಅಯೋಗ್ಯ ಅಂತಲೇ ಕರೆಯುತ್ತಿರುತ್ತಾರೆ. ಅವನಿಗೆ ತಾನೇಕೆ ಗ್ರಾಮ ಪಂಚಾಯ್ತಿ ಸದಸ್ಯ ಆಗಬಾರದು ಅಂತನಿಸುತ್ತದೆ. ಗ್ರಾಮ ಪಂಚಾಯ್ತಿ ಸದಸ್ಯನಾದ ಮೇಲೆ ಅವನು ಹೇಗೆ ಯೋಗ್ಯನಾಗಿ ಬದಲಾಗುತ್ತಾನೆ ಎನ್ನುವುದು ಕಥೆ. ಗ್ರಾಮ ಪಂಚಾಯ್ತಿ ಸದಸ್ಯರ ಮೇಲೆ ಹಲವು ಜವಾಬ್ದಾರಿಗಳಿರುತ್ತವೆ. ಆದರೆ, ಬಹಳಷ್ಟು ಜನ ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅದೇ ಕಾರಣಕ್ಕೆ ಈಗಲೂ ಹಳ್ಳಿಗಳಲ್ಲಿ ಶೌಚಾಲಯಕ್ಕೆಂದು ಬಯಲಿಗೆ ಹೋಗುವ ಪರಿಸ್ಥಿತಿ ಇದೆ’ ಎನ್ನುತ್ತಾರೆ ಮಹೇಶ್‌.

“ಅಯೋಗ್ಯ’ ಎಂದು ಕರೆಸಿಕೊಳ್ಳುವುದಕ್ಕೆ ತಮಗೇನೂ ಅಭ್ಯಂತರವಿಲ್ಲ ಎನ್ನುತ್ತಾರೆ ಸತೀಶ್‌ ನೀನಾಸಂ. ಅವರು ಈ ಚಿತ್ರದ ಹೀರೋ ಮತ್ತು “ಅಯೋಗ್ಯ’ನ ಪಾತ್ರವನ್ನು ಅವರೇ ಮಾಡುತ್ತಿದ್ದಾರೆ. “ನನಗೆ ಯಾವ ಬೇಸರವೂ ಇಲ್ಲ. ಏಕೆಂದರೆ, ನಾನೂ ಒಬ್ಬ ಮನುಷ್ಯ. ಒಬ್ಬ ಮನುಷ್ಯನಾಗಿ ಹಲವು ತಪ್ಪುಗಳನ್ನು ನಾನೂ ಮಾಡಿರುತ್ತೇನೆ. ಹಾಗಾಗಿ ನನಗೇನೂ ಸಮಸ್ಯೆಯಿಲ್ಲ ಮತ್ತು ಅಯೋಗ್ಯ ಎನ್ನುವುದನ್ನು ನೆಗೆಟಿವ್‌ ಆಗಿ ನೋಡಬೇಕಿಲ್ಲ. ಪ್ರೀತಿಗೂ, ತಮಾಷೆಗೂ ಅಯೋಗ್ಯ ಅಂತ ಕರೀತಾರೆ. ಹಾಗಾಗಿ ಅದರಲ್ಲೇನೂ ತಪ್ಪಿಲ್ಲ ಅಂತ ಭಾವನೆ. ಮಹೇಶ್‌ ಇಲ್ಲಿ ಒಂದೊಳ್ಳೆಯ ತಂಡವನ್ನ ಕಲೆ ಹಾಕಿದ್ದಾರೆ. ಒಳ್ಳೆಯ ಕಲಾವಿದರು ಮತ್ತು ತಂತ್ರಜ್ಞರು ಈ ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ. ನಾನು ಸಹ ಅವರ ಮೇಲೆ ಮತ್ತು ಕಥೆಯ ಮೇಲೆ ನಂಬಿಕೆ ಇಟ್ಟು ಈ ಚಿತ್ರ ಒಪ್ಪಿದ್ದೀನಿ’ ಎಂದರು.

ಚಿತ್ರಕ್ಕೆ ಹರಿಕೃಷ್ಣ ಅವರ ಸಂಗೀತವಿದೆ. ಪ್ರೀತಂ ಎನ್ನುವವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸುರೇಶ್‌, ಮೋಹನ್‌ ಎನ್ನುವವರು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌. ಪೇಟೆ, ಸರಿತ, ರವಿಶಂಕರ್‌, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್‌ ಪ್ರಕಾಶ್‌, ಕುರಿ ಪ್ರತಾಪ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.