ಪ್ರಿಯಾಂಕಾ ಸೆಕೆಂಡ್‌ ಸ್ಟೋರಿ


Team Udayavani, Sep 29, 2017, 6:45 AM IST

priyanka.jpg

“ಫ‌ಸ್ಟ್‌ ಹಾಫ್ನ ಪ್ರಶ್ನೆಗಳಿಗೆ, ಸೆಕೆಂಡ್‌ ಹಾಫ್ನಲ್ಲಿ ಉತ್ತರ ಸಿಗಲಿದೆ …’
– ಹೀಗೆ ಹೇಳಿ ಪೋಸ್ಟರ್‌ ಕಡೆ ನೋಡಿದರು ನಿರ್ದೇಶಕ ಯೋಗಿ ದೇವಗಂಗೆ. ಅಲ್ಲಿ “ಸೆಕೆಂಡ್‌ ಹಾಫ್’ ಚಿತ್ರದ ಪೋಸ್ಟರ್‌ ಇತ್ತು. “ಸೆಕೆಂಡ್‌ ಹಾಫ್’ ಯೋಗಿ ದೇವಗಂಗೆ ನಿರ್ದೇಶನದ ಸಿನಿಮಾ. ಪ್ರಿಯಾಂಕಾ ಉಪೇಂದ್ರ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ನಡೆಯುತ್ತದೆ. ಇಡೀ ಚಿತ್ರ ಅವರ ಸುತ್ತವೇ ಸಾಗಲಿದೆ ಕೂಡಾ. ಈ ಹಿಂದೆ ಯೋಗರಾಜ ಭಟ್‌, ಸೂರಿಯವರ ಜೊತೆ ಕೆಲಸ ಮಾಡಿ ಅನುಭವವಿರುವ ಯೋಗಿ ದೇವಗಂಗೆ, ತಮ್ಮ ಚೊಚ್ಚಲ ಸಿನಿಮಾದಲ್ಲಿ ಒಂದಷ್ಟು ಹೊಸ ವಿಷಯಗಳನ್ನು ಹೇಳಿದ್ದಾರಂತೆ. ಹೊಸ ವಿಷಯ ಅಂದಾಕ್ಷಣ ಔಟ್‌ ಆಫ್ ವರ್ಲ್ಡ್ ಎಂದು ನೀವಂದುಕೊಳ್ಳಬೇಕಿಲ್ಲ. ನಮ್ಮ ಸಮಾಜದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಅಂಶಗಳನ್ನು ಸೇರಿಸಿ ಈ ಸಿನಿಮಾ ಮಾಡಿದ್ದಾರೆ ಯೋಗಿ.

ನಮ್ಮ ಸಮಾಜದಲ್ಲಿ ನಡೆದ ಕೆಲವು ಘಟನೆಗಳು ಮತ್ತು ಅದರ ತೀವ್ರತೆ, ಅವುಗಳು ಸಮಾಜದ ಮೇಲೆ ಬೀರಿದ ಪರಿಣಾಮಗಳನ್ನು ಗಮನದಲ್ಲಿರಿಸಿಕೊಂಡು ಈ ಕಥೆ ಮಾಡಿದ್ದಾರಂತೆ ಯೋಗಿ. “ಪ್ರೀತಿ, ವಿಶ್ವಾಸ, ಹೆಣ್ಣು, ಬದುಕು, ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿನ ದುಗುಡಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದೇನೆ. ಇದು ರೆಗ್ಯುಲರ್‌ ಪ್ಯಾಟರ್ನ್ ಸಿನಿಮಾವಲ್ಲ. ಚಿತ್ರದ ಫ‌ಸ್ಟ್‌ಹಾಫ್ ಒಂದು ರೀತಿ ಇದ್ದರೆ, ಸೆಕೆಂಡ್‌ ಹಾಫ್ ಇನ್ನೊಂದು ರೀತಿ ಇದೆ. ಫ‌ಸ್ಟ್‌ಹಾಫ್ನ ಎಲ್ಲಾ ಪ್ರಶ್ನೆಗಳಿಗೆ ಸೆಕೆಂಡ್‌ ಹಾಫ್ನಲ್ಲಿ ಉತ್ತರ ಸಿಗಲಿದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು. ಇನ್ನು ಚಿತ್ರ ತಾಂತ್ರಿಕವಾಗಿಯೂ ಚಿತ್ರ ಶ್ರೀಮಂತವಾಗಿದೆ ಎನ್ನಲು ಅವರು ಮರೆಯಲಿಲ್ಲ. 

ಚಿತ್ರವನ್ನು ನಾಗೇಶ್‌ ನಿರ್ಮಿಸಿದ್ದಾರೆ. ನಾಗೇಶ್‌ ಅವರಿಗೆ ನಿರ್ದೇಶಕ ಯೋಗಿ ಮೂರು ವರ್ಷಗಳ ಸ್ನೇಹಿತರಂತೆ. ಅದೊಂದು ದಿನ ಸಿಕ್ಕ ಯೋಗಿ, ತಾನೊಂದು ಕಥೆ ಮಾಡಿಕೊಂಡಿದ್ದೇನೆ ಎಂದೇಳಿ ಒನ್‌ಲೈನ್‌ ಹೇಳಿದರಂತೆ. ಕಥೆ ಕೇಳಿದ ನಾಗೇಶ್‌, ಕಥೆ ತುಂಬಾ ಚೆನ್ನಾಗಿದೆ. ಯಾರಾದರೂ ಒಳ್ಳೆಯ ನಿರ್ಮಾಪಕರನ್ನು ಹುಡುಕಿ ಎಂದರಂತೆ. ಆದರೆ, ನಾಗೇಶ್‌ ಅವರ ಪತ್ನಿ, ಈ ಸಿನಿಮಾವನ್ನು ನಾವೇ ನಿರ್ಮಿಸುವ ಎಂದಾಗ ಮೊದಲು ಬೇಡ ಎಂದ ನಾಗೇಶ್‌ ಕೊನೆಗೆ ಒಪ್ಪಿಕೊಂಡು ಸಿನಿಮಾ ಮಾಡಿದ್ದಾರೆ. “ನಾವು ಸಿನಿಮಾ ಕುಟುಂಬದವರಲ್ಲ. ನಮಗ್ಯಾಕೆ ಸಿನಿಮಾ ಬೇಕು ಎಂದು ದೂರವಿದ್ದೆ. ಆದರೆ ನನ್ನ ಹೆಂಡತಿಗೆ ಸಿನಿಮಾ ಮಾಡುವ ಇಷ್ಟವಿತ್ತು. ಅದಕ್ಕೆ ಕಾರಣ ಕಥೆ. ಕೊನೆಗೆ ಸಿನಿಮಾ ಮಾಡಲು ಒಪ್ಪಿದೆ. “ನನಗೆ ಗುಣಮಟ್ಟದ ಸಿನಿಮಾ ಮಾಡಿಕೊಡಿ’ ಎಂದು ನಿರ್ಮಾಣ ಮಾಡಿದೆ’ ಎಂದು ತಾವು ಅಚಾನಕ್‌ ಆಗಿ ನಿರ್ಮಾಪಕರಾದ ಬಗ್ಗೆ ಹೇಳಿದರು. 

ಪ್ರಿಯಾಂಕಾ ಉಪೇಂದ್ರ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್‌ ಪೇದೆ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ಅವರ ಸುತ್ತವೇ ಸುತ್ತುತ್ತದೆ. ಚಿತ್ರದಲ್ಲಿ ಅವರು ಟಿವಿಎಸ್‌ ಓಡಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು ಟಿವಿಎಸ್‌ ಕಲಿತರಂತೆ. “ಯೋಗಿ ತುಂಬಾ ಹೊಸತನದ ಕಥೆ ಮಾಡಿದ್ದಾರೆ. ಪಾತ್ರ ಕೂಡಾ ವಿಭಿನ್ನವಾಗಿದೆ. ಈ ಪಾತ್ರಕ್ಕೆ ನಾನು ಟಿವಿಎಸ್‌ ಕಲಿಯಬೇಕಿತ್ತು. ನನಗೆ ಬರುತ್ತಿರಲಿಲ್ಲ. ಹಾಗಾಗಿ, ಟಿವಿಎಸ್‌ ಬದಲು ಜೀಪ್‌ ಓಡಿಸುತ್ತೆ¤àನೆ ಅಂದೆ. ಆದರೆ, ಕಾನ್‌ಸ್ಟಬಲ್‌ಗೆ ಜೀಪ್‌ ಕೊಡಲ್ಲ, ನೀವು ಟಿವಿಎಸ್‌ ಕಲಿಯಬೇಕು ಎಂದಿದ್ದಕ್ಕೆ ಕಲಿತೆ. ಈಗ ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಖುಷಿಯ ವಿಚಾರವೆಂದರೆ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ ಕೂಡಾ ಈ ಚಿತ್ರದಲ್ಲಿ ನಟಿಸಿದ್ದಾರೆ’ ಎಂದು ಖುಷಿಯಾದರು ಪ್ರಿಯಾಂಕಾ. ನಿರಂಜನ್‌ ಕೂಡಾ ತಮ್ಮ ಚಿಕ್ಕಮ್ಮನ ಜೊತೆ ನಟಿಸಿದ ಖುಷಿ ಹಂಚಿಕೊಂಡರು. “ನಿರ್ದೇಶಕರು ಆಡಿಷನ್‌ ಮಾಡಿದ ನಂತರ ಈ ಸಿನಿಮಾಕ್ಕೆ “ನೀವು ಆಯ್ಕೆಯಾಗಿದ್ದೀರಿ’ ಎಂದಾಗ ಖುಷಿಯಾಯಿತು. ಇಲ್ಲಿ ನನ್ನ ಪಾತ್ರದ ಹೆಸರು ವಾಟರ್‌. ಮೊದಲ ಸಿನಿಮಾದಲ್ಲೇ ಒಳ್ಳೆಯ ತಂಡ ಸಿಕ್ಕಿದೆ’ ಎಂದರು. ಚಿತ್ರದಲ್ಲಿ ಶರತ್‌ ಲೋಹಿತಾಶ್ವ ಕೂಡಾ ನಟಿಸಿದ್ದಾರೆ. ಸಾಮಾನ್ಯವಾಗಿ ಈಗಿನ ನಿರ್ದೇಶಕರು ಫೋನ್‌ನಲ್ಲೇ ಪಾತ್ರ ವಿವರಿಸಿದರೆ, ಯೋಗಿ ಮಾತ್ರ ಮನೆಗೆ ಬಂದು ಕಥೆ ಹೇಳಿದರಂತೆ. “ಯೋಗಿ ಕಥೆ ಹೇಳಿದಾಗ ಇಡೀ ಸಿನಿಮಾನೇ ನೋಡಿದಂತಾಯಿತು. ತುಂಬಾ ಟ್ಯಾಲೆಂಟ್‌ ಇರುವ ನಿರ್ದೇಶಕ. ನಾನು ತುಂಬಾ ಎಂಜಾಯ್‌ ಮಾಡಿದ ಕಥೆ. ಈ ರೀತಿಯೂ ಸಿನಿಮಾ ಮಾಡಬಹುದಾ ಎಂದು ಅನಿಸಿದಂತಹ ಕಥೆ ಇದು’ ಎಂದು ಖುಷಿ ಹಂಚಿಕೊಂಡರು ಶರತ್‌ ಲೋಹಿತಾಶ್ವ. ಚಿತ್ರದಲ್ಲಿ ಸುರಭಿ ಕೂಡಾ ನಟಿಸಿದ್ದಾರೆ. ಅವರು ಕೂಡಾ ತಮ್ಮ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಆರ್‌.ಕೆ.ಶಿವಕುಮಾರ್‌ ಛಾಯಾಗ್ರಹಣ, ಚೇತನ್‌ ಸೋಸ್ಕಾ ಸಂಗೀತವಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.