ಟೈಮ್‌ ಬದಲಾಗುತ್ತೆ ಗುರು! ಟೋರ ಟೋರದಲ್ಲಿ ಹೊಸಬರು


Team Udayavani, Oct 13, 2017, 7:40 AM IST

Tora-Tora_(112).jpg

ಕನ್ನಡದಲ್ಲಿ ಹೊಸ ಹೊಸ ಜಾನರ್‌ನ ಸಿನಿಮಾಗಳು ಬರುತ್ತಲೇ ಇವೆ. ಅದರಲ್ಲೂ ಚಿತ್ರರಂಗಕ್ಕೆ ಬರುವ ಹೊಸಬರ ಹೊಸ ಬಗೆಯನ್ನು ಪ್ರಯತ್ನಿಸುತ್ತಾರೆ. ಈಗ ಆ ಸಾಲಿಗೆ “ಟೋರ ಟೋರ’ ಎಂಬ ಚಿತ್ರವೂ ಸೇರುತ್ತದೆ. ಇದು ಕೂಡಾ ಹೊಸಬರೇ ಸೇರಿ ಮಾಡಿರುವ ಚಿತ್ರ. ಟೈಮ್‌ ಮೆಷಿನ್‌ ಕುರಿತು “ಟೋರ ಟೋರ’ ಚಿತ್ರ ಮಾಡಿದ್ದು, ಕನ್ನಡಕ್ಕೆ ಇದು ಹೊಸ ಕಾನ್ಸೆಪ್ಟ್ ಎಂಬುದು ನಿರ್ದೇಶಕ ಹರ್ಷ್‌ ಗೌಡ ಅವರ ಮಾತು. 

“ಕನ್ನಡಕ್ಕೆ ಇದು ಹೊಸ ಬಗೆಯ ಸಿನಿಮಾ. ಟೈಮ್‌ ಟ್ರಾವೆಲ್‌ ಕಾನ್ಸೆಪ್ಟ್ನಲ್ಲಿ ಈ ಸಿನಿಮಾ ಮಾಡಿದ್ದೇವೆ. ಟೈಮ್‌ ಮೆಷಿನ್‌ನೊಂದಿಗೆ ಈ ಸಿನಿಮಾ ಸಾಗುತ್ತದೆ. ಐದು ಜನ ಹುಡುಗರು ಹಾಗೂ ಇಬ್ಬರು ಹುಡುಗಿಯರಿಗೆ ಅಚಾನಕ್‌ ಆಗಿ ಸಿಗುವ ಟೈಮ್‌ ಮೆಷಿನ್‌ನಿಂದ ಏನೆಲ್ಲಾ ಆಗುತ್ತದೆ, ಅವರ ಜೀವನವನ್ನು ಹೇಗೆಲ್ಲಾ ರಿವೈಂಡ್‌ ಮಾಡಿ ನೋಡುತ್ತಾರೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡುತ್ತಾರೆ ಹರ್ಷ್‌ ಗೌಡ. 

ಅಂದಹಾಗೆ, ಹರ್ಷ್‌ ಗೌಡಗೆ ಇದು ಮೊದಲ ಸಿನಿಮಾ. ಸುಮಾರು 10 ವರ್ಷಗಳಿಂದ ಸಿನಿಮಾ ಮಾಡಬೇಕೆಂದು ಓಡಾಡಿಕೊಂಡಿದ್ದ ಹರ್ಷ್‌ ಅವರ ಕನಸು ಈಗ ಈಡೇರಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರನ್ನು ಆಡಿಷನ್‌ ಮೂಲಕವೇ ಆಯ್ಕೆ ಮಾಡಿದರಂತೆ. ಪಕ್ಕಾ ಯೂತ್‌ ಓರಿಯೆಂಟೆಡ್‌ ಆಗಿರುವ ಈ ಚಿತ್ರ ಫ‌ನ್ನಿಯಾಗಿ ಸಾಗುವ ಮೂಲಕ ಇಂದಿನ ಟ್ರೆಂಡ್‌ಗೆ ತಕ್ಕಂತಿದೆ ಎನ್ನಲು ಅವರು ಮರೆಯಲಿಲ್ಲ. 

ಚಿತ್ರದಲ್ಲಿ ಸಿದ್ದು ಮೂಲೀಮನಿ, ಸನಿಹ ಯಾದವ್‌, ಪೂಜಾ ರಾಜು, ಸನತ್‌, ಮಂಜು ಹೆದ್ದೂರು, ಅನಿರುದ್ಧ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಸಿದ್ದು ಹೇಳುವಂತೆ ಇದು ರೆಗ್ಯುಲರ್‌ ಪ್ಯಾಟರ್ನ್ ಸಿನಿಮಾವಲ್ಲ. ಇಡೀ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಹರ್ಷ್‌ ಬೇರೆ ರೀತಿಯೇ ಮಾಡಿಕೊಂಡಿದ್ದು, ಫ‌ನ್ನಿಯಾಗಿ ಸಿನಿಮಾ ಸಾಗುತ್ತದೆ. ಹರ್ಷ್‌ ಅವರ ಕಲಾವಿದರಿಗೆ ಸಂಪೂರ್ಣ ಸ್ವತಂತ್ರ ಕೊಟ್ಟಿದ್ದರಿಂದ ಪಾತ್ರ ಕೂಡಾ ಚೆನ್ನಾಗಿ ಮೂಡಿಬಂದಿದೆ ಎಂಬುದು ಸಿದ್ದು ಮಾತು. ಉಳಿದಂತೆ ಚಿತ್ರದಲ್ಲಿ ನಟಿಸಿರುವ ಸನಿಹ ಅವರಿಗೆ ಇದು ಮೊದಲ ಚಿತ್ರ. ಟೋರ ಟೋರ ಯಾವ ರೀತಿ ಖುಷಿ ಕೊಡುತ್ತೋ ಈ ಸಿನಿಮಾ ಕೂಡಾ ಅದೇ ರೀತಿ ಮನರಂಜನೆ ನೀಡುವುದರಿಂದ “ಟೋರ ಟೋರ’ ಎಂದು ಟೈಟಲ್‌ ಇಡಲಾಗಿದೆಯಂತೆ.

ಚಿತ್ರದಲ್ಲಿ ಸನತ್‌ ನಾಯಕರಾಗಿ ನಟಿಸಿದ್ದಾರೆ. ಅವರ ಪ್ರಕಾರ ಚಿತ್ರದಲ್ಲಿ ಗ್ರಾಫಿಕ್‌ ಕೂಡಾ ಹೆಚ್ಚಿದ್ದು, ಅಚ್ಚುಕಟ್ಟಾಗಿ ಗ್ರಾಫಿಕ್‌ ಮಾಡಿರುವ ವಿಎಫ್ಎಕ್ಸ್‌ ತಂಡ ನಿಜವಾದ ಹೀರೋ ಅಂತೆ. ಉಳಿದಂತೆ ಪೂಜಾ, ಮಂಜು, ಅನಿರುದ್ಧ ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು. ಚಿತ್ರಕ್ಕೆ ಸಿದ್ಧಾರ್ಥ್ ಕಾಮತ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.