ಟೈಮ್‌ ಬದಲಾಗುತ್ತೆ ಗುರು! ಟೋರ ಟೋರದಲ್ಲಿ ಹೊಸಬರು


Team Udayavani, Oct 13, 2017, 7:40 AM IST

Tora-Tora_(112).jpg

ಕನ್ನಡದಲ್ಲಿ ಹೊಸ ಹೊಸ ಜಾನರ್‌ನ ಸಿನಿಮಾಗಳು ಬರುತ್ತಲೇ ಇವೆ. ಅದರಲ್ಲೂ ಚಿತ್ರರಂಗಕ್ಕೆ ಬರುವ ಹೊಸಬರ ಹೊಸ ಬಗೆಯನ್ನು ಪ್ರಯತ್ನಿಸುತ್ತಾರೆ. ಈಗ ಆ ಸಾಲಿಗೆ “ಟೋರ ಟೋರ’ ಎಂಬ ಚಿತ್ರವೂ ಸೇರುತ್ತದೆ. ಇದು ಕೂಡಾ ಹೊಸಬರೇ ಸೇರಿ ಮಾಡಿರುವ ಚಿತ್ರ. ಟೈಮ್‌ ಮೆಷಿನ್‌ ಕುರಿತು “ಟೋರ ಟೋರ’ ಚಿತ್ರ ಮಾಡಿದ್ದು, ಕನ್ನಡಕ್ಕೆ ಇದು ಹೊಸ ಕಾನ್ಸೆಪ್ಟ್ ಎಂಬುದು ನಿರ್ದೇಶಕ ಹರ್ಷ್‌ ಗೌಡ ಅವರ ಮಾತು. 

“ಕನ್ನಡಕ್ಕೆ ಇದು ಹೊಸ ಬಗೆಯ ಸಿನಿಮಾ. ಟೈಮ್‌ ಟ್ರಾವೆಲ್‌ ಕಾನ್ಸೆಪ್ಟ್ನಲ್ಲಿ ಈ ಸಿನಿಮಾ ಮಾಡಿದ್ದೇವೆ. ಟೈಮ್‌ ಮೆಷಿನ್‌ನೊಂದಿಗೆ ಈ ಸಿನಿಮಾ ಸಾಗುತ್ತದೆ. ಐದು ಜನ ಹುಡುಗರು ಹಾಗೂ ಇಬ್ಬರು ಹುಡುಗಿಯರಿಗೆ ಅಚಾನಕ್‌ ಆಗಿ ಸಿಗುವ ಟೈಮ್‌ ಮೆಷಿನ್‌ನಿಂದ ಏನೆಲ್ಲಾ ಆಗುತ್ತದೆ, ಅವರ ಜೀವನವನ್ನು ಹೇಗೆಲ್ಲಾ ರಿವೈಂಡ್‌ ಮಾಡಿ ನೋಡುತ್ತಾರೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡುತ್ತಾರೆ ಹರ್ಷ್‌ ಗೌಡ. 

ಅಂದಹಾಗೆ, ಹರ್ಷ್‌ ಗೌಡಗೆ ಇದು ಮೊದಲ ಸಿನಿಮಾ. ಸುಮಾರು 10 ವರ್ಷಗಳಿಂದ ಸಿನಿಮಾ ಮಾಡಬೇಕೆಂದು ಓಡಾಡಿಕೊಂಡಿದ್ದ ಹರ್ಷ್‌ ಅವರ ಕನಸು ಈಗ ಈಡೇರಿದೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರನ್ನು ಆಡಿಷನ್‌ ಮೂಲಕವೇ ಆಯ್ಕೆ ಮಾಡಿದರಂತೆ. ಪಕ್ಕಾ ಯೂತ್‌ ಓರಿಯೆಂಟೆಡ್‌ ಆಗಿರುವ ಈ ಚಿತ್ರ ಫ‌ನ್ನಿಯಾಗಿ ಸಾಗುವ ಮೂಲಕ ಇಂದಿನ ಟ್ರೆಂಡ್‌ಗೆ ತಕ್ಕಂತಿದೆ ಎನ್ನಲು ಅವರು ಮರೆಯಲಿಲ್ಲ. 

ಚಿತ್ರದಲ್ಲಿ ಸಿದ್ದು ಮೂಲೀಮನಿ, ಸನಿಹ ಯಾದವ್‌, ಪೂಜಾ ರಾಜು, ಸನತ್‌, ಮಂಜು ಹೆದ್ದೂರು, ಅನಿರುದ್ಧ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಸಿದ್ದು ಹೇಳುವಂತೆ ಇದು ರೆಗ್ಯುಲರ್‌ ಪ್ಯಾಟರ್ನ್ ಸಿನಿಮಾವಲ್ಲ. ಇಡೀ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಹರ್ಷ್‌ ಬೇರೆ ರೀತಿಯೇ ಮಾಡಿಕೊಂಡಿದ್ದು, ಫ‌ನ್ನಿಯಾಗಿ ಸಿನಿಮಾ ಸಾಗುತ್ತದೆ. ಹರ್ಷ್‌ ಅವರ ಕಲಾವಿದರಿಗೆ ಸಂಪೂರ್ಣ ಸ್ವತಂತ್ರ ಕೊಟ್ಟಿದ್ದರಿಂದ ಪಾತ್ರ ಕೂಡಾ ಚೆನ್ನಾಗಿ ಮೂಡಿಬಂದಿದೆ ಎಂಬುದು ಸಿದ್ದು ಮಾತು. ಉಳಿದಂತೆ ಚಿತ್ರದಲ್ಲಿ ನಟಿಸಿರುವ ಸನಿಹ ಅವರಿಗೆ ಇದು ಮೊದಲ ಚಿತ್ರ. ಟೋರ ಟೋರ ಯಾವ ರೀತಿ ಖುಷಿ ಕೊಡುತ್ತೋ ಈ ಸಿನಿಮಾ ಕೂಡಾ ಅದೇ ರೀತಿ ಮನರಂಜನೆ ನೀಡುವುದರಿಂದ “ಟೋರ ಟೋರ’ ಎಂದು ಟೈಟಲ್‌ ಇಡಲಾಗಿದೆಯಂತೆ.

ಚಿತ್ರದಲ್ಲಿ ಸನತ್‌ ನಾಯಕರಾಗಿ ನಟಿಸಿದ್ದಾರೆ. ಅವರ ಪ್ರಕಾರ ಚಿತ್ರದಲ್ಲಿ ಗ್ರಾಫಿಕ್‌ ಕೂಡಾ ಹೆಚ್ಚಿದ್ದು, ಅಚ್ಚುಕಟ್ಟಾಗಿ ಗ್ರಾಫಿಕ್‌ ಮಾಡಿರುವ ವಿಎಫ್ಎಕ್ಸ್‌ ತಂಡ ನಿಜವಾದ ಹೀರೋ ಅಂತೆ. ಉಳಿದಂತೆ ಪೂಜಾ, ಮಂಜು, ಅನಿರುದ್ಧ ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು. ಚಿತ್ರಕ್ಕೆ ಸಿದ್ಧಾರ್ಥ್ ಕಾಮತ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.