ಸುಳ್ಳಿನ ಕಂತೆಯೊಳಗೆ ಸತ್ಯ


Team Udayavani, Oct 13, 2017, 6:45 AM IST

satya.jpg

“ಇದೊಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ …’
– ಹೀಗೆಂದರು ನಿರ್ದೇಶಕ ದಯಾಳ್‌ ಪದ್ಮನಾಭನ್‌. ಅವರು “ಸತ್ಯ ಹರಿಶ್ಚಂದ್ರ’ ಎಂಬ ಸಿನಿಮಾ ಮಾಡಿದ್ದಾರೆ. ಚಿತ್ರ ಅಕ್ಟೋಬರ್‌ 20ಕ್ಕೆ ಬಿಡುಗಡೆಯಾಗುತ್ತಿದೆ. ಶರಣ್‌ ಈ ಚಿತ್ರದ ನಾಯಕ. ಆದರೂ ಅವರು “ಇದು ಕಮರ್ಷಿಯಲ್‌ ಸಿನಿಮಾ’ ಎಂದು ಒತ್ತಿ ಹೇಳಲು ಕಾರಣ ದಯಾಳ್‌ ಇತ್ತೀಚೆಗೆ ಮಾಡಿದ ಸಿನಿಮಾಗಳು. “ಇತ್ತೀಚೆಗೆ ನಾನು ಒಂದಷ್ಟು ಬೇರೆ ತರಹದ ಸಿನಿಮಾಗಳನ್ನು ಮಾಡಿಕೊಂಡಿದ್ದೆ. ತುಂಬಾ ಗ್ಯಾಪ್‌ನ ನಂತರ ಮಾಡಿದ ಕಮರ್ಷಿಯಲ್‌ ಸಿನಿಮಾವಿದು.

ಹೊಸ ಬಗೆಯ ಕಾಮಿಡಿಯೊಂದಿಗೆ ಈ ಚಿತ್ರ ಮೂಡಿಬಂದಿದೆ’ ಎಂದರು ದಯಾಳ್‌. ಈ ಹಿಂದೆ ಬಂದ “ಸತ್ಯ ಹರಿಶ್ಚಂದ್ರ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದಾದರೂ ಸಂಬಂಧವಿದೆಯಾ ಎಂದರೆ ಖಂಡಿತಾ ಇಲ್ಲ. ಇಲ್ಲಿ ನಾಯಕನ ಹೆಸರು ಸತ್ಯ ಹರಿಶ್ಚಂದ್ರ. ಆದರೆ ಆತನ ಗುಣ ಸುಳ್ಳು ಹೇಳ್ಳೋದು. ಈ ತರಹದ ಒಂದು ಪಾತ್ರದೊಂದಿಗೆ ಸಿನಿಮಾ ಸಾಗುತ್ತದೆ ಎಂದು ಚಿತ್ರದ ಬಗ್ಗೆ ವಿವರ ನೀಡುತ್ತಾರೆ ದಯಾಳ್‌. ಕಾಮಿಡಿಯಾಗಿಯೇ ಸಾಗುವ ಚಿತ್ರ ಕೊನೆಯ 20 ನಿಮಿಷ ತುಂಬಾ ಎಮೋಶನಲ್‌ ಆಗಿದೆಯಂತೆ. ಚಿತ್ರದಲ್ಲಿ ರೆಗ್ಯುಲರ್‌ ಕಾಮಿಡಿ ಬಿಟ್ಟು ಹೊಸ ಬಗೆಯ ಕಾಮಿಡಿ ಇದೆ ಎನ್ನಲು ದಯಾಳ್‌ ಮರೆಯಲಿಲ್ಲ. 

ಕೆ.ಮಂಜು ಅವರು ಈ ಚಿತ್ರ ವನ್ನು ನಿರ್ಮಿಸಿದ್ದಾರೆ. ಚಿತ್ರ ದೀಪಾವಳಿ ಸಮಯದಲ್ಲಿ ಬಿಡುಗಡೆ ಯಾಗುತ್ತಿರುವುದರಿಂದ ಜನ ಖುಷಿಯಿಂದ ಈ ಸಿನಿಮಾವನ್ನು ಸ್ವೀಕರಿಸುತ್ತಾರೆಂಬ ವಿಶ್ವಾಸ ಮಂಜು ಅವರಿಗಿದೆ. ಚಿತ್ರ ಬಿಡುಗಡೆಗೆ ಮುನ್ನವೇ ಮಂಜು ಹಾಕಿದ ಬಂಡವಾಳದಲ್ಲಿ ಎರಡು ಕೋಟಿ ರೂಪಾಯಿ ವಾಪಾಸ್‌ ಪಡೆದಿದ್ದಾರೆ. ಟಿವಿ ರೈಟ್ಸ್‌ನಿಂದ 1.80 ಕೋಟಿ, ಆಡಿಯೋದಿಂದ 15 ಲಕ್ಷ ಹಾಗೂ ಹಿಂದಿ ಡಬ್ಬಿಂಗ್‌ನಿಂದ ಮೂವತ್ತು ಲಕ್ಷ ಬಂದಿದ್ದಾಗಿ ವಿವರ ಕೊಡುತ್ತಾರೆ ಮಂಜು. ಚಿತ್ರದ ವಿತರಣೆಯನ್ನು ಜಾಕ್‌ ಮಂಜು ಮಾಡುತ್ತಿದ್ದು, ಅವರು ಕೂಡಾ ಒಳ್ಳೆಯ ಬೆಲೆ ಕೊಡುತ್ತಾರೆಂಬ ವಿಶ್ವಾಸ ಮಂಜು ಅವರಿಗಿದೆಯಂತೆ. 

ನಾಯಕ ಶರಣ್‌ ಅವರ ಸಿನಿ ಕೆರಿಯರ್‌ನಲ್ಲಿ “ಸತ್ಯ ಹರಿಶ್ಚಂದ್ರ’ ಹೊಸ ಬಗೆಯ ಸಿನಿಮಾವಾಗುವ ವಿಶ್ವಾಸ. ರೆಗ್ಯುಲರ್‌ ಕಾಮಿಡಿ ಬಿಟ್ಟು ಬೇರೆ ತೆರನಾದ ಕಾಮಿಡಿಯನ್ನು ಈ ಸಿನಿಮಾದಿಂದ ನಿರೀಕ್ಷಿಸಬಹುದು ಎಂಬುದು ಶರಣ್‌ ಮಾತು. ಚಿತ್ರದಲ್ಲಿ ಭಾವನಾ ರಾವ್‌ ಹಾಗೂ ಸಂಚಿತಾ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರದ ಬಗ್ಗೆ ಇಬ್ಬರೂ ಹೆಚ್ಚೇನು ಮಾತನಾಡಲಿಲ್ಲ. ಚಿತ್ರದ “ಕುಲದಲ್ಲಿ ಮೇಲ್ಯಾವುದೋ ..’ ಹಾಡನ್ನು ಇಮ್ರಾನ್‌ ಸರ್ದಾರಿಯಾ ಕೊರಿಯೋಗ್ರಾಫ್ ಮಾಡಿದ್ದಾರೆ. ಆರಂಭದಲ್ಲಿ ದಯಾಳ್‌ ಈ ಹಾಡನ್ನು “ನೀವು ಮಾಡಿಕೊಡಿ’ ಎಂದಾಗ ಇಮ್ರಾನ್‌ ಹಿಂದೇಟು ಹಾಕಿದರಂತೆ. ಅದಕ್ಕೆ ಕಾರಣ ಅಷ್ಟೊಂದು ಜನಪ್ರಿಯ ಹಾಡನ್ನು ಮರುಸೃಷ್ಟಿ ಮಾಡೋದು ಸುಲಭದ ಕೆಲಸವಲ್ಲ ಎಂದು ಹೆದರಿದರಂತೆ. ಆ ನಂತರ ಪೂರ್ವತಯಾರಿಯೊಂದಿಗೆ ಅದ್ಧೂರಿಯಾಗಿ ಮೂಡಿಬಂತು ಎಂದು ಅನುಭವ ಹಂಚಿಕೊಂಡರು. 

ಚಿತ್ರ ವಿತರಣೆ ಮಾಡುತ್ತಿರುವ ಜಾಕ್‌ ಮಂಜು ಕೂಡಾ ಚಿತ್ರದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.