ಕಾಮಿಡಿ ರಾಜು, ಕನ್ನಡ ಮೀಡಿಯಂ ಹುಡುಗ ಸಿಟಿಗೆ ಬಂದ


Team Udayavani, Oct 13, 2017, 7:40 AM IST

RAJU.jpg

“ರಾಜು ಕನ್ನಡ ಮೀಡಿಯಂ’ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಅಕ್ಟೋಬರ್‌ 27 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಆದರೂ ಚಿತ್ರತಂಡ ಮಾಧ್ಯಮ ಮುಂದೆ ಬಂದು ಸಿಡಿ ಕೈಯಲ್ಲಿಟ್ಟು ಫೋಟೋಗೆ ಫೋಸ್‌ ಕೊಡುವ ಮೂಲಕ ಆಡಿಯೋ ಬಿಡುಗಡೆ ಶಾಸ್ತ್ರವನ್ನು ಪೂರೈಸಿತು. 

“ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರದ ಮೂಲಕ ಗುರುತಿಸಿಕೊಂಡ ಗುರುನಂದನ್‌ “ರಾಜು ಕನ್ನಡ ಮೀಡಿಯಂ’ ಚಿತ್ರದ ನಾಯಕ. “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರ ನಿರ್ದೇಶಿಸಿದ ನರೇಶ್‌ ಈ ಚಿತ್ರದ ನಿರ್ದೇಶಕರು. “ರಂಗಿತರಂಗ’ದ ಅವಂತಿಕಾ ಶೆಟ್ಟಿ ನಾಯಕಿ. “ಶಿವಲಿಂಗ’ ಚಿತ್ರದ ನಿರ್ಮಿಸಿದ ಕೆ.ಎ. ಸುರೇಶ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇಲ್ಲಿ ನೀವು ಒಂದಂಶವನ್ನು ಗಮನಿಸಬಹುದು. ಮೂರು ಯಶಸ್ವಿ ಸಿನಿಮಾ ತಂಡಗಳು “ರಾಜು ಕನ್ನಡ ಮೀಡಿಯಂ’ ಮೂಲಕ ಒಟ್ಟಾಗಿವೆ. ಅದೇ ಮಾತನ್ನು ನಿರ್ಮಾಪಕ ಸುರೇಶ್‌ ಕೂಡಾ ಹೇಳುತ್ತಾರೆ. “”ಫ‌ಸ್ಟ್‌ ರ್‍ಯಾಂಕ್‌ ರಾಜು’ ಹಿಟ್‌ ಆದ ನಂತರ ಅದೇ ತಂಡದೊಂದಿಗೆ ಸಿನಿಮಾ ಮಾಡಲು ನಿರ್ಧರಿಸಿದೆ. ಅದರ ಪರಿಣಾಮವಾಗಿ “ರಾಜು ಕನ್ನಡ ಮೀಡಿಯಂ ಮೂಡಿಬಂದಿದೆ. ಕಾಮಿಡಿ ಹಿನ್ನೆಲೆಯಲ್ಲಿ ಹೋಗುವ ಒಂದು ಹೊಸ ಬಗೆಯ ಕಥೆ. ಕನ್ನಡ ಮೀಡಿಯಂನಲ್ಲಿ ಓದಿರುವ ಹುಡುಗನೊಬ್ಬ ಜೀವನಕಥೆ ಇದು. ಇಡೀ ಸಿನಿಮಾ ಫ‌ನ್ನಿಯಾಗಿ ಸಾಗುತ್ತದೆ. ಚಿತ್ರದಲ್ಲಿ ಸುದೀಪ್‌ ಅವರು ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾ ಸುದೀಪ್‌ ಅವರಿಗೊಂದು ಥ್ಯಾಂಕ್ಸ್‌ ಹೇಳಿದರು ಸುರೇಶ್‌. ಇನ್ನು, ಚಿತ್ರಕ್ಕೆ ವಿದೇಶಗಳಿಂದಲೂ ಬೇಡಿಕೆ ಬರುತ್ತಿದ್ದು, ಬೇರೆ ಬೇರೆ ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆಯಂತೆ. 

ನಿರ್ದೇಶಕ ನರೇಶ್‌ಗೆ ಈ ಚಿತ್ರ ಕೂಡಾ ತಮ್ಮ “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರದಂತೆ “ರಾಜು ಕನ್ನಡ ಮೀಡಿಯಂ’ ಕೂಡಾ ದೊಡ್ಡ ಹಿಟ್‌ ಆಗುವ ವಿಶ್ವಾಸವಿದೆಯಂತೆ. “ಇದು ಕೂಡಾ ಜನರಿಗೆ ಬೇಗನೇ ಕನೆಕ್ಟ್ ಆಗುವ ಕಥೆ. ಒಬ್ಬ ಕನ್ನಡ ಮೀಡಿಯಂ ಹುಡುಗನ ಜೀವನದ ಕಥೆ. ಚಿತ್ರವನ್ನು ತುಂಬಾ ಸಹಜವಾಗಿ ಸಾಗುವ ಕಥೆ ಇದು. ಹಳ್ಳಿ ಹಿನ್ನೆಲೆಯಿಂದ ಬಂದು ಕನ್ನಡ ಮೀಡಿಯಂನಲ್ಲಿ ಓದಿರುವ ಹುಡುಗ ದೊಡ್ಡ ಬಿಝಿನೆಸ್‌ಮ್ಯಾನ್‌ ಆಗುವ ಅಂಶದೊಂದಿಗೆ ಸಾಗುತ್ತದೆ’ ಎಂದು ಚಿತ್ರದ ವಿವರ ನೀಡಿದರು ನರೇಶ್‌.

ನಾಯಕ ಗುರುನಂದನ್‌ ಇಲ್ಲಿ ಕನ್ನಡ ಮೀಡಿಯಂ ಹುಡುಗ. ಕನ್ನಡ ಮೀಡಿಯಂ ಹುಡುಗ ಸಿಟಿಗೆ ಬಂದು ಕಷ್ಟಪಡುವ ಮತ್ತು ಇಂಗ್ಲೀಷ್‌ನಲ್ಲಿ ಪರದಾಡುವ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ. ಗುರುನಂದನ್‌ ಓದಿರುವ ಊರು, ಶಾಲೆಯಲ್ಲಿ ಶೂಟಿಂಗ್‌ ಮಾಡಿದ್ದು ಗುರುನಂದನ್‌ಗೆ ಬಾಲ್ಯದ ನೆನಪುಗಳಲ್ಲೇ ಮರುಕಳಿಸಿತಂತೆ. ಚಿತ್ರದಲ್ಲಿ ಬೇರೆ ಬೇರೆ ಗೆಟಪ್‌ಗ್ಳಲ್ಲಿ ಕಾಣಿಸಿಕೊಂಡಿದ್ದರಿಂದ ಆ ತಯಾರಿಗೆ ಸ್ವಲ್ಪ ಸಮಯ ತೆಗೆದುಕೊಂಡಿತಂತೆ. ಚಿತ್ರದಲ್ಲಿ ಆಶಿಕಾ ಕೂಡಾ ನಾಯಕಿಯರಲ್ಲೊಬ್ಬರು. ನಾಯಕನ ಸ್ಕೂಲ್‌ ಡೇಸ್‌ಲವ್‌ನಲ್ಲಿ ಅವರು ಬಂದು ಹೋಗುತ್ತಾರೆ. ಇಂಗ್ಲೀಷ್‌ ಮೀಡಿಯಂದಲ್ಲಿ ಓದಿದ ಆಶಿಕಾಗೆ ಕನ್ನಡ ಶಾಲೆಯಲ್ಲಿ ಚಿತ್ರೀಕರಿಸುವಾಗ ತುಂಬಾ ಆಸಕ್ತಿ ಇತ್ತಂತೆ. ಏಕೆಂದರೆ ಅಲ್ಲಿನ ಮಕ್ಕಳು, ಪಾಠ ಮಾಡುವ ರೀತಿಯನ್ನು ಕುತೂಹಲದಿಂದ ನೋಡಿದ್ದಾಗಿ ಹೇಳಿಕೊಂಡರು. 

ಚಿತ್ರಕ್ಕೆ ರವೀಂದ್ರನಾಥ್‌ ಸಂಗೀತ ನೀಡಿದ್ದಾರೆ. ಹತ್ತು ವರ್ಷಗಳ ಹಿಂದೆ ಕಂಫೋಸ್‌ ಮಾಡಿಟ್ಟುಕೊಂಡಿದ್ದ ಒಂದು ಟ್ಯೂನ್‌ ಅನ್ನು ಇಲ್ಲಿ ಬಳಸಿಕೊಂಡಿದ್ದಾರಂತೆ. ಸಾಕಷ್ಟು ನಿರ್ದೇಶಕರಿಗೆ ಆ ಟ್ಯೂನ್‌ ಕೇಳಿಸಿದ್ದರಂತೆ. ಆದರೆ, ನರೇಶ್‌ ಮಾತ್ರ ಈ ಟ್ಯೂನ್‌ ಅನ್ನು 
“ನನಗೆ ಎತ್ತಿಡಿ’ ಎಂದು 
ಮೂರು ವರ್ಷಗಳ ಹಿಂದೆಯೇ ಹೇಳಿದ್ದರಂತೆ. ಅದನ್ನು ಈಗ ಬಳಸಿಕೊಂಡಿದ್ದಾಗಿ ಹೇಳಿದರು.  ಚಿತ್ರದ ಚಿತ್ರೀಕರಣ ಮೂಡಿಗೆರೆ, ಚಿಕ್ಕಮಗಳೂರು ಹಾಗೂ ವಿದೇಶದಲ್ಲಿ ನಡೆದಿದೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.