ಸೆಂಟಿಮೆಂಟ್‌ ರುಕ್ಕು ಮೂರು ವರ್ಷಗಳ ನಂತರ…


Team Udayavani, Nov 17, 2017, 6:00 AM IST

CENTIMENT-RUKKU.jpg

ಮೂರು ವರ್ಷಗಳ ಹಿಂದೆ “ರುಕ್ಕು’ ಎಂಬ ಸಿನಿಮಾ ಆರಂಭವಾಗಿರೋದು ನಿಮಗೆ ನೆನಪಿರಬಹುದು. ಆ ಚಿತ್ರ ಏನಾಯಿತು ಎಂದು ನೀವು ಕೇಳುವ ಮುನ್ನವೇ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಹೌದು, ಚಿತ್ರತಂಡವೆಲ್ಲಾ ಸೇರಿಕೊಂಡು ಚಿತ್ರದ ಆಡಿಯೋ ಬಿಡುಗಡೆ ಮಾಡಿತು. ಬಸವರಾಜು ಬಳ್ಳಾರಿ ಈ ಚಿತ್ರದ ನಿರ್ದೆಶಕರು. “ರುಕ್ಕು’ ಚಿತ್ರದಲ್ಲಿ ಏನು ಹೇಳಲು ಹೊರಟಿದ್ದಾರೆ ನಿರ್ದೇಶಕರು ಎಂದು ನೀವು ಕೇಳಬಹುದು. “ಇದೊಂದು ಹಳ್ಳಿಕಥೆ. ಇಡೀ ಸಿನಿಮಾ ಹಳ್ಳಿಯ ಹಿನ್ನೆಲೆಯಲ್ಲೇ ನಡೆಯುತ್ತದೆ’ ಎನ್ನುವುದು ನಿರ್ದೇಶಕರ ಮಾತು. ನಿರ್ದೇಶಕ ಬಸವರಾಜ ಬಳ್ಳಾರಿಯವರು ಈ ಸಿನಿಮಾ ಮಾಡಲು ಕಾರಣ ನಾಯಕ ಶ್ರೇಯಸ್‌ ಅಂತೆ. ಅದೊಂದು ದಿನ ನಾಯಕ ಶ್ರೇಯಸ್‌ ಒಂದು ಕಥೆಯೊಂದಿಗೆ ಬಂದರಂತೆ. ಕಥೆ ಕೇಳಿದ ಬಸವರಾಜು ಅವರಿಗೆ ಈ ಸಿನಿಮಾದಲ್ಲಿ ಒಳ್ಳೆಯ ಅಂಶಗಳಿವೆ ಎಂದೆನಿಸಿ, ಸುಮಾರು ಮೂರು ತಿಂಗಳುಗಳ ಕಾಲ ಕೂತು ಸ್ಕ್ರಿಪ್ಟ್ ಸಿದ್ಧಪಡಿಸಿದರಂತೆ. ಅಂತಿಮವಾಗಿ ಸಿನಿಮಾ ಮುಗಿದಿದೆ. “ಚಿತ್ರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಹೇಳಿದ್ದೇವೆ. ಮುಖ್ಯವಾಗಿ ಇಲ್ಲಿ ಸೆಂಟಿಮೆಂಟ್‌ಗೆ ಹೆಚ್ಚು ಒತ್ತು ನೀಡಲಾಗಿದೆ. ಸಿನಿಮಾ ನೋಡಿ ಹೊರಬರುವಾಗ ಖಂಡಿತ ಕಣ್ಣೀರು ಬರುತ್ತದೆ’ ಎಂದು ಸಿನಿಮಾ ಬಗ್ಗೆ ವಿಶ್ವಾಸದಿಂದ ಮಾತನಾಡುತ್ತಾರೆ. ಸುಮಾರು 30 ದಿನಗಳ ಕಾಲ ಚಿತ್ರೀಕರಣ ಮಾಡಿದ್ದು, ಸಿನಿಮಾ ನೈಜವಾಗಿ ಮೂಡಿಬಂದಿದೆ ಎನ್ನಲು ಅವರು ಮರೆಯಲಿಲ್ಲ. 

ಚಿತ್ರದ ನಾಯಕ ಶ್ರೇಯಸ್‌ ಹೆಚ್ಚು ಮಾತನಾಡಲಿಲ್ಲ. ಅವರಿಲ್ಲಿ ತ್ಯಾಗ ಮಾಡುವ ತ್ಯಾಗಮಯಿಯಾಗಿ ಕಾಣಿಸಿಕೊಂಡಿದ್ದಾರೆ. ಕಥೆಯಲ್ಲಿ ಗಟ್ಟಿತನವಿರುವುದರಿಂದ ಜನ ಇಷ್ಟಪಡುವ ವಿಶ್ವಾಸ ಕೂಡಾ ಅವರಿಗಿದೆ. ನಾಯಕಿ ವೇಗ ರಮ್ಯಾ ಮೈಕ್‌ ಎತ್ತಿಕೊಂಡು “ನೀವೇನಾದರೂ ಕೇಳಿ’ ಎಂದು ಪತ್ರಕರ್ತರಿಗೆ ಹೇಳಿದರೇ ಹೊರತು ಅವರಾಗಿ ಏನನ್ನೂ ಹೇಳುವ ಗೋಜಿಗೆ ಹೋಗಲಿಲ್ಲ. ಚಿತ್ರಕ್ಕೆ ಎ.ಟಿ.ರವೀಶ್‌ ಸಂಗೀತ ನೀಡಿದ್ದಾರೆ. ಚಿತ್ರದ ಹಾಡುಗಳು ಸನ್ನಿವೇಶಕ್ಕನುಗುಣವಾಗಿ ಇದ್ದು, ಸೊಗಸಾದ ಹಾಡುಗಳನ್ನು ಕೊಟ್ಟಿದ್ದಾರಂತೆ. ಚಿತ್ರದಲ್ಲಿ ಆರು ಹಾಡುಗಳಿವೆ ಎಂದು ವಿವರ ನೀಡಿದರು ರವೀಶ್‌. 

ಚಿತ್ರಕ್ಕೆ ಸತೀಶ್‌ ಬಾಬು ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರ ನೋಡುವಾಗಲೇ ಅವರಿಗೆ ಈ ಸಿನಿಮಾದಲ್ಲಿ ಹೊಸತನವಿದೆ ಎಂದು ಗೊತ್ತಾಯಿತಂತೆ. ಹಾಗಾಗಿ, ಸನ್ನಿವೇಶಕ್ಕನುಗುಣವಾಗಿ ಹಿನ್ನೆಲೆ ಸಂಗೀತ ನೀಡಿದ್ದಾಗಿ ಹೇಳಿಕೊಂಡರು. ಚಿತ್ರದಲ್ಲಿ ನಾಗೇಂದ್ರ ಅರಸ್‌ ಸಂಕಲನದ ಜೊತೆಗೆ ಒಂದು ಪಾತ್ರ ಕೂಡಾ ಮಾಡಿದ್ದಾರೆ. ಉಳಿದಂತೆ ಸಾಧು ಕೋಕಿಲ, ತಿಲಕ್‌, ಸತ್ಯಜಿತ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.