ಗುರುವಿನ ಸಮ್‌ ಆಹಾರ


Team Udayavani, Nov 24, 2017, 11:47 AM IST

Samhara_(146).jpg

ಚಿತ್ರದ ಬಗ್ಗೆ ಒಂದೇ ಒಂದು ಮಾತನ್ನಾಡದೆಯೂ, ಚಿತ್ರದ ಬಗ್ಗೆ ಪ್ರಚಾರ ಪಡೆಯುವುದು ಅಷ್ಟು ಸುಲಭವಲ್ಲ. ಕನ್ನಡದಲ್ಲಿ ಕೆಲವರಿಗಷ್ಟೇ ಈ ವಿದ್ಯೆ ಸಿದ್ಧಿಸಿದ್ದು, ಆ ಪೈಕಿ ಗುರು ದೇಶಪಾಂಡೆ ಸಹ ಒಬ್ಬರು. ಅವರು ಕೆಳೆದ ಕೆಲವು ತಿಂಗಳುಗಳಿಂದ ತಮ್ಮ ಹೊಸ ಚಿತ್ರ “ಸಂಹಾರ’ದಿಂದ ಸುದ್ದಿಯಾಗುತ್ತಲೇ ಇದ್ದಾರೆ. ಬರೀ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್‌, ಪೋಸ್ಟರ್‌ ಬಿಡುಗಡೆ ಅಂತ ಚಿತ್ರವು ಸುದ್ದಿಯಾಗುತ್ತಿದೆಯೇ ಹೊರತು, ಅದರ ಸಾರದಿಂದಲ್ಲ.

ಚಿರಂಜೀವಿ ಸರ್ಜಾ ಬರ್ತ್‌ಡೇಗೊಂದು ಟ್ರೇಲರ್‌, ಚಿಕ್ಕಣ್ಣ ಬರ್ತ್‌ಡೇಗೊಂದು ಟೀಸರ್‌, ಹರಿಪ್ರಿಯ ಹುಟ್ಟುಹಬ್ಬಕ್ಕೊಂದು ಪೋಸ್ಟರ್‌, ಕಾವ್ಯ ಶೆಟ್ಟಿ ಹುಟ್ಟಿದಹಬ್ಬಕ್ಕೊಂದು ಫೋಟೋ … ಹೀಗೆ ಇಷ್ಟರಲ್ಲೇ ಸುದ್ದಿ ಮಾಡುತ್ತಿರುವ ಅವರು, “ಸಂಹಾರ’ ಬಗ್ಗೆ ಬರೆಯೋಕೆ ಏನನ್ನೂ ಹೇಳಿಕೊಂಡಿಲ್ಲ. ಯಾಕೆ ಈ ಮಾತು ಅಂದರೆ, ಇತ್ತೀಚೆಗೆ ಬಿಡುಗಡೆಯಾದ ಆಡಿಯೋ ಸಿಡಿ ಕಾರ್ಯಕ್ರಮ ಕೂಡ ಅದಕ್ಕೆ ಹೊರತಾಗಿರಲಿಲ್ಲ.

ಧ್ರುವ ಸರ್ಜಾ ಬಂದು ಆಡಿಯೋ ಸಿಡಿ ಬಿಡುಗಡೆ ಮಾಡಿದರು ಅನ್ನೋದೇ ಅಂದಿನ ಹೈಲೈಟ್‌. ಅದು ಬಿಟ್ಟರೆ, ಆಡಿಯೋ ಬಿಡುಗಡೆ ಸಮಾರಂಭ ಸಹ ಚಿತ್ರದ ಇನ್ನಿತರ ಸಮಾರಂಭಗಳ ತರಹ ನೀರಸವಾಗಿತ್ತು. ಅಂದು ಧ್ರುವ ಬಿಟ್ಟರೆ ಆ ಕಾರ್ಯಕ್ರಮದಲ್ಲಿ ವಿತರಕ, ನಿರ್ಮಾಪಕ ಜಾಕ್‌ ಮಂಜು, ಯೋಗಿ ದ್ವಾರಕೀಶ್‌, ಕೆ. ಮಂಜು, ಚಿರು, ಕಾವ್ಯ, ಗುರು ದೇಶಪಾಂಡೆ ಸೇರಿದಂತೆ ಹಲವರು ಹಾಜರಿದ್ದರು. ಝೇಂಕಾರ್‌ ಸಂಸ್ಥೆ ಹಾಡುಗಳನ್ನು ಹೊರತಂದಿದೆ.

ಚಿತ್ರದಲ್ಲಿ ಜಯಂತ್‌ ಕಾಯ್ಕಿಣಿ ಅವರು ಬರೆದಿರುವ “ಏನ್‌ ಅಚ್ಚರಿಯಾಗಿದೆಯೋ …’ ಹಾಡಿಗೆ ಪುನೀತ್‌ ರಾಜಕುಮಾರ್‌ ದನಿಯಾಗಿದ್ದಾರೆಂಬುದು ಚಿತ್ರದ ಪ್ಲಸ್‌ ಎನ್ನಬಹುದು. ರವಿ ಬಸ್ರೂರು ಹಿನ್ನೆಲೆ ಸಂಗೀತ ನೀಡಿದ್ದಾರೆ. ಅವರ ಹಿನ್ನೆಲೆ ಸಂಗೀತ ನಿರ್ದೇಶಕರಿಗೆ ಹಾಲಿವುಡ್‌ ರೇಂಜ್‌ಗಿದೆಯಂತೆ. ಬೆಂಗಳೂರು, ಮಂಗಳೂರು, ಸಕಲೇಶಪುರ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪ್ರಶಾಂತ್‌ ರಾಜಪ್ಪ ಸಂಭಾಷಣೆ ಬರೆದರೆ, ರವಿವರ್ಮ ಸಾಹಸವಿದೆ. ಈ ಚಿತ್ರಕ್ಕೆ ಎ. ವೆಂಕಟೇಶ್‌ ಮತ್ತು ಆರ್‌. ಸುಂದರ ಕಾಮರಾಜು ನಿರ್ಮಾಪಕರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.