ಐಫೋನ್‌ನಲ್ಲಿ ಸಹಿಷ್ಣು


Team Udayavani, Dec 8, 2017, 7:30 AM IST

iphone.jpg

ತಂತ್ರಜ್ಞಾನ ಮುಂದುವರೆದಂತೆ ಸಿನಿಮಾ ಮಾಡೋದು ಕೂಡಾ ಸುಲಭವಾಗುತ್ತಿದೆ. ಹಾಗಾಗಿಯೇ ಸಾಕಷ್ಟು ಪ್ರಯೋಗಗಳು ಕೂಡಾ ನಡೆಯುತ್ತಿರುತ್ತದೆ. ಈಗಾಗಲೇ ಅನೇಕರು ಐಫೋನ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಸಹಿಷ್ಣು’. ಹೌದು, “ಸಹಿಷ್ಣು’ ಎಂಬ ಸಿನಿಮಾವೊಂದು ಸಂಪೂರ್ಣವಾಗಿ ಐಫೋನ್‌ನಲ್ಲಿ ಚಿತ್ರೀಕರಣವಾಗಿದೆ. ವಿಶೇಷವೆಂದರೆ ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಎರಡು ಗಂಟೆ 1 ನಿಮಿಷ 18 ಸೆಕೆಂಡಿನ ಈ ಸಿನಿಮಾವನ್ನು ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಚಿತ್ರವನ್ನು ಸಂಪತ್‌ ಎನ್ನುವವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. 

ಈಗಾಗಲೇ ಕೆಲವು ಸಿನಿಮಾಗಳಿಗೆ ಸಹಾಯಕರಾಗಿ ದುಡಿದ ಅನುಭವವಿರುವ ಸಂಪತ್‌ ಅವರಿಗೆ ಏನಾದರೊಂದು ಹೊಸ ಪ್ರಯೋಗ ಮಾಡಬೇಕೆಂದೆನಿಸಿದಾಗ ಈ ಆಲೋಚನೆ ಬಂತಂತೆ. ಅದಕ್ಕಾಗಿ ಐಫೋನ್‌ ಹಾಗೂ ಅದಕ್ಕೆ ತಾಂತ್ರಿಕವಾಗಿ ಬೇಕಾದ ವಸ್ತುಗಳನ್ನು ಖರೀದಿಸಿ, ಮೊದಲು ಇಡೀ ಬೆಂಗಳೂರು ಸುತ್ತಾಡಿ ಟೆಸ್ಟ್‌ ಶೂಟ್‌ ಮಾಡಿದರಂತೆ. ಎಲ್ಲವೂ ಪಕ್ಕಾ ಆದ ಮೇಲೆ ಮಡಿಕೇರಿಯ ಸುತ್ತಮುತ್ತ ಸಿಂಗಲ್‌ ಟೇಕ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ಇದೊಂದು ದಾಖಲೆಯಾಗಿದ್ದು, ಅಗತ್ಯ ಪತ್ರಗಳೊಂದಿಗೆ ಗಿನ್ನೆಸ್‌ಗೆ ಕಳುಸಿದ್ದಾರಂತೆ.

ಈಗಾಗಲೇ ಅನೇಕ ಸಿನಿಮಾಗಳು ಸಿಂಗಲ್‌ ಟೇಕ್‌ನಲ್ಲಿ ಶೂಟ್‌ ಆದರೂ ಆ ನಂತರ ಅವುಗಳನ್ನು ಎಡಿಟ್‌ ಮಾಡಲಾಗಿದೆ. ಆದರೆ, “ಸಹಿಷ್ಣು’ ಮಾತ್ರ ಎಡಿಟ್‌ ಮಾಡದ ಸಿಂಗಲ್‌ ಟೇಕ್‌ ಸಿನಿಮಾವಾದ್ದರಿಂದ ವಿಶ್ವದಲ್ಲೇ ಇಂತಹ ಪ್ರಯತ್ನ ಮೊದಲು ಎನ್ನುವುದು ಸಂಪತ್‌ ಅವರು ಮಾತು. ವಿಚಾರವಾದಿಯೊಬ್ಬನ ಹತ್ಯೆಗೆ ಸುಪಾರಿ ನೀಡುವ ಕಾಣದ ವ್ಯಕ್ತಿಗಳು ಒಂದು ಕಡೆಯಾದರೆ, ವಿಚಾರವಾದಿಯನ್ನು ಕಿಡ್ನಾಪ್‌ ಮಾಡುವ ಮಂದಿ, ಆ ವಿಚಾರವಾದಿಯ ನಿರ್ಲಿಪ್ತತೆ ಹಾಗೂ ನಡವಳಿಕೆಯಿಂದ ಬದಲಾಗುತ್ತಾರಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ವಿಚಾರಧಾರೆ ಏನೇ ಇರಬಹುದು. ಆದರೆ, ಮನುಷ್ಯನನ್ನು ಮನುಷ್ಯ ಸಾಯಿಸೋದು ತಪ್ಪು ಎಂಬ ಸಂದೇಶವನ್ನು ಕೂಡಾ ಇಲ್ಲಿ ನೀಡಲಾಗಿದೆಯಂತೆ.

“ಮುಂದೆ ವಿಭಿನ್ನವಾದ ಸಿನಿಮಾಗಳನ್ನು ಮಾಡಬೇಕೆಂದಿದ್ದೇನೆ. ಅದಕ್ಕಿಂತ ಮೊದಲು ನನಗೊಂದು ಪ್ರೊಫೈಲ್‌ ಬೇಕು. ಆ ಉದ್ದೇಶದ ಜೊತೆಗೆ ಪ್ರಯೋಗಾತ್ಮಕ ಸಿನಿಮಾ ಮಾಡಬೇಕೆಂಬ ಕಾರಣದಿಂದ ಈ ಸಿನಿಮಾ ಮಾಡಿದ್ದೇನೆ’ ಎನ್ನುವುದು ಸಂಪತ್‌ ಮಾತು. ಚಿತ್ರದಲ್ಲಿ ಹಿರಿಯ ನಟ ವಿಶ್ವನಾಥ್‌ ಹಾಗೂ ಅಶೋಕ್‌ ಎನ್ನುವವರು ನಟಿಸಿದ್ದಾರೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.