ಐಫೋನ್‌ನಲ್ಲಿ ಸಹಿಷ್ಣು


Team Udayavani, Dec 8, 2017, 7:30 AM IST

iphone.jpg

ತಂತ್ರಜ್ಞಾನ ಮುಂದುವರೆದಂತೆ ಸಿನಿಮಾ ಮಾಡೋದು ಕೂಡಾ ಸುಲಭವಾಗುತ್ತಿದೆ. ಹಾಗಾಗಿಯೇ ಸಾಕಷ್ಟು ಪ್ರಯೋಗಗಳು ಕೂಡಾ ನಡೆಯುತ್ತಿರುತ್ತದೆ. ಈಗಾಗಲೇ ಅನೇಕರು ಐಫೋನ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಸಹಿಷ್ಣು’. ಹೌದು, “ಸಹಿಷ್ಣು’ ಎಂಬ ಸಿನಿಮಾವೊಂದು ಸಂಪೂರ್ಣವಾಗಿ ಐಫೋನ್‌ನಲ್ಲಿ ಚಿತ್ರೀಕರಣವಾಗಿದೆ. ವಿಶೇಷವೆಂದರೆ ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಎರಡು ಗಂಟೆ 1 ನಿಮಿಷ 18 ಸೆಕೆಂಡಿನ ಈ ಸಿನಿಮಾವನ್ನು ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಚಿತ್ರವನ್ನು ಸಂಪತ್‌ ಎನ್ನುವವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. 

ಈಗಾಗಲೇ ಕೆಲವು ಸಿನಿಮಾಗಳಿಗೆ ಸಹಾಯಕರಾಗಿ ದುಡಿದ ಅನುಭವವಿರುವ ಸಂಪತ್‌ ಅವರಿಗೆ ಏನಾದರೊಂದು ಹೊಸ ಪ್ರಯೋಗ ಮಾಡಬೇಕೆಂದೆನಿಸಿದಾಗ ಈ ಆಲೋಚನೆ ಬಂತಂತೆ. ಅದಕ್ಕಾಗಿ ಐಫೋನ್‌ ಹಾಗೂ ಅದಕ್ಕೆ ತಾಂತ್ರಿಕವಾಗಿ ಬೇಕಾದ ವಸ್ತುಗಳನ್ನು ಖರೀದಿಸಿ, ಮೊದಲು ಇಡೀ ಬೆಂಗಳೂರು ಸುತ್ತಾಡಿ ಟೆಸ್ಟ್‌ ಶೂಟ್‌ ಮಾಡಿದರಂತೆ. ಎಲ್ಲವೂ ಪಕ್ಕಾ ಆದ ಮೇಲೆ ಮಡಿಕೇರಿಯ ಸುತ್ತಮುತ್ತ ಸಿಂಗಲ್‌ ಟೇಕ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ಇದೊಂದು ದಾಖಲೆಯಾಗಿದ್ದು, ಅಗತ್ಯ ಪತ್ರಗಳೊಂದಿಗೆ ಗಿನ್ನೆಸ್‌ಗೆ ಕಳುಸಿದ್ದಾರಂತೆ.

ಈಗಾಗಲೇ ಅನೇಕ ಸಿನಿಮಾಗಳು ಸಿಂಗಲ್‌ ಟೇಕ್‌ನಲ್ಲಿ ಶೂಟ್‌ ಆದರೂ ಆ ನಂತರ ಅವುಗಳನ್ನು ಎಡಿಟ್‌ ಮಾಡಲಾಗಿದೆ. ಆದರೆ, “ಸಹಿಷ್ಣು’ ಮಾತ್ರ ಎಡಿಟ್‌ ಮಾಡದ ಸಿಂಗಲ್‌ ಟೇಕ್‌ ಸಿನಿಮಾವಾದ್ದರಿಂದ ವಿಶ್ವದಲ್ಲೇ ಇಂತಹ ಪ್ರಯತ್ನ ಮೊದಲು ಎನ್ನುವುದು ಸಂಪತ್‌ ಅವರು ಮಾತು. ವಿಚಾರವಾದಿಯೊಬ್ಬನ ಹತ್ಯೆಗೆ ಸುಪಾರಿ ನೀಡುವ ಕಾಣದ ವ್ಯಕ್ತಿಗಳು ಒಂದು ಕಡೆಯಾದರೆ, ವಿಚಾರವಾದಿಯನ್ನು ಕಿಡ್ನಾಪ್‌ ಮಾಡುವ ಮಂದಿ, ಆ ವಿಚಾರವಾದಿಯ ನಿರ್ಲಿಪ್ತತೆ ಹಾಗೂ ನಡವಳಿಕೆಯಿಂದ ಬದಲಾಗುತ್ತಾರಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ವಿಚಾರಧಾರೆ ಏನೇ ಇರಬಹುದು. ಆದರೆ, ಮನುಷ್ಯನನ್ನು ಮನುಷ್ಯ ಸಾಯಿಸೋದು ತಪ್ಪು ಎಂಬ ಸಂದೇಶವನ್ನು ಕೂಡಾ ಇಲ್ಲಿ ನೀಡಲಾಗಿದೆಯಂತೆ.

“ಮುಂದೆ ವಿಭಿನ್ನವಾದ ಸಿನಿಮಾಗಳನ್ನು ಮಾಡಬೇಕೆಂದಿದ್ದೇನೆ. ಅದಕ್ಕಿಂತ ಮೊದಲು ನನಗೊಂದು ಪ್ರೊಫೈಲ್‌ ಬೇಕು. ಆ ಉದ್ದೇಶದ ಜೊತೆಗೆ ಪ್ರಯೋಗಾತ್ಮಕ ಸಿನಿಮಾ ಮಾಡಬೇಕೆಂಬ ಕಾರಣದಿಂದ ಈ ಸಿನಿಮಾ ಮಾಡಿದ್ದೇನೆ’ ಎನ್ನುವುದು ಸಂಪತ್‌ ಮಾತು. ಚಿತ್ರದಲ್ಲಿ ಹಿರಿಯ ನಟ ವಿಶ್ವನಾಥ್‌ ಹಾಗೂ ಅಶೋಕ್‌ ಎನ್ನುವವರು ನಟಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.