ನೈಜ ಘಟನೆಯೊಂದರ ಡಿಂಗ್‌ಡಾಂಗ್‌ ಸ್ಟೋರಿ


Team Udayavani, Dec 15, 2017, 11:23 AM IST

15-11.jpg

ಯಾವತ್ತೋ ನಡೆದ ನೈಜ ಘಟನೆಗಳು ಇನ್ಯಾವತ್ತೋ ಸಿನಿಮಾಗಳಾಗುತ್ತವೆ. ಈಗ ಅದೇ ರೀತಿ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದೆ. ಅದು “ಮಾಂಜ್ರಾ’. ಬೆಳಗಾವಿಯ ಬೊಂಬಗ್ರ ಎನ್ನುವಲ್ಲಿ ನಡೆದ ಘಟನೆಯೊಂದನ್ನಿಟ್ಟು ಕೊಂಡು ಮುತ್ತುರಾಜ್‌ ಎನ್ನುವವರು “ಮಾಂಜ್ರಾ’ ಎನ್ನುವ ಸಿನಿಮಾ ಮಾಡಿದ್ದಾರೆ. ಮಾಂಜ್ರಾ ಎನ್ನುವುದು ಬೀದರ್‌ನಲ್ಲಿ ಹರಿಯುವ ನದಿ. ಆ ನದಿಯ ಹೆಸರನ್ನಿಟ್ಟುಕೊಂಡು ಕನ್ನಡ ಹಾಗೂ ಮರಾಠಿಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇದೊಂದು ದುರಂತ ಲವ್‌ಸ್ಟೋರಿ. ಚಿತ್ರದ ಕಥಾನಾಯಕಿ ಈಗಿಲ್ಲ. ಆದರೆ, ನಾಯಕ ಮಾನಸಿಕ ಅಸ್ವಸ್ಥ ಆಗಿ ಮುಂಬೈನಲ್ಲಿದ್ದಾರಂತೆ. ಆ ಕಥೆಯನ್ನಿಟ್ಟುಕೊಂಡು ಅದಕ್ಕೆ ಸಿನಿಮಾ ಟಚ್‌ ಕೊಟ್ಟು “ಮಾಂಜ್ರಾ’ ಮಾಡಿದ್ದಾರೆ. 

ಮುತ್ತುರಾಜ್‌ 8ನೇ ಕ್ಲಾಸಿನಲ್ಲಿದ್ದಾಗ ಪತ್ರಿಕೆಯೊಂದರಲ್ಲಿ ಬೆಳಗಾವಿಯಲ್ಲಿ ನಡೆದ ಘಟನೆಯ ಸುದ್ದಿ ಬಂದಿತ್ತಂತೆ. ಆಗಲೇ ಇದನ್ನು ಸಿನಿಮಾ ಮಾಡಬೇಕೆಂದುಕೊಂಡಿದ್ದರಂತೆ ಮುತ್ತುರಾಜ್‌. ಅದರಂತೆ ಈಗ ಸಿನಿಮಾ ಮಾಡಿದ್ದಾರೆ. ಚಿತ್ರದ ಚಿತ್ರೀಕರಣವನ್ನು ಮೂಲಕಥೆಯ ನಾಯಕಿಯ ಮನೆಯಲ್ಲೇ ಮಾಡಿದ್ದಾರಂತೆ. ಆದರೆ ತಮ್ಮ ಮಗಳ ಕಥೆಯನ್ನೇ ಸಿನಿಮಾ ಮಾಡುತ್ತಿದ್ದಾರೆಂದು ತಿಳಿದು ನಂತರ ಚಿತ್ರೀಕರಣಕ್ಕೆ ಸಮಸ್ಯೆಯಾಯಿತಂತೆ. 

ಚಿತ್ರವು ಕನ್ನಡ ಹಾಗೂ ಮರಾಠಿಯಲ್ಲಿ ತಯಾರಾಗುತ್ತಿದ್ದು, ಮರಾಠಿ ಸಂಭಾಷಣೆ ಚಿತ್ರದಲ್ಲಿದ್ದು, ಕನ್ನಡ ಸಬ್‌ಟೈಟಲ್‌ನಲ್ಲಿ ಅದು ಬರಲಿದೆಯಂತೆ. ಚಿತ್ರಕ್ಕೆ ನಿರ್ದೇಶಕರು “ಡಿಂಗ್‌ಡಾಂಗ್‌ ಸ್ಟೋರಿ’ ಎಂಬ ಟ್ಯಾಗ್‌ಲೈನ್‌ ಇದೆ. ಚಿತ್ರವನ್ನು ರವಿ ಅರ್ಜುನ್‌ ನಿರ್ಮಿಸಿದ್ದಾರೆ. ಆರಂಭದಲ್ಲಿ ಸುಮ್ಮನೆ ಕಥೆ ಕೇಳಿದರಾಯ್ತು ಎಂದುಕೊಂಡು ನಿರ್ದೇಶಕರಲ್ಲಿ ಮಾತನಾಡಿದಾಗ, ಕಥೆ ಇಷ್ಟವಾಗಿ ಸಿನಿಮಾ ಮಾಡಲು ನಿರ್ಧರಿಸಿದರಂತೆ. ಚಿತ್ರದಲ್ಲಿ ರಂಜಿತ್‌ ಸಿಂಗ್‌ ನಾಯಕರಾಗಿ ನಟಿಸಿದ್ದಾರೆ. ಈ ಹಿಂದೆ ತಮಿಳು ಸಿನಿಮಾವೊಂದರ ಆಡಿಷನ್‌ನಲ್ಲಿ ರಂಜಿತ್‌ ಅವರ ನಟನೆ ನೋಡಿದ ನಿರ್ದೇಶಕರು ಅವರನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿದರಂತೆ. ಚಿತ್ರದಲ್ಲಿ ಅಪೂರ್ವ ನಾಯಕಿ. ಚಿತ್ರದಲ್ಲಿ ಅವರ ಪಾತ್ರಕ್ಕೆ ತುಂಬಾ ಪ್ರಾಮುಖ್ಯತೆ ಇದೆಯಂತೆ. ಮರಾಠಿ ಕುಟುಂಬದಿಂದ ಬಂದ ಅವರಿಗೆ ಚಿತ್ರದಲ್ಲೂ ಮರಾಠಿ ಮಾತನಾಡುವ ಅವಕಾಶ ಸಿಕ್ಕಿದೆಯಂತೆ.  

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.