ಹೊಸ ಪ್ರಯೋಗಕ್ಕೆ ಅಭಯ ಹಸ್ತ


Team Udayavani, Jan 12, 2018, 11:06 AM IST

12-23.jpg

“ಒಳ್ಳೆಯದು ಮತ್ತು ಕೆಟ್ಟದ್ದು ಏನೇ ಮಾಡಿದ್ದರೂ, ಇದೇ ಜನ್ಮದಲ್ಲಿ ಅನುಭವಿಸಬೇಕು…’
ಹೀಗೆ ಹೇಳಿ ಸುಮ್ಮನಾದರು ಹಿರಿಯ ಪತ್ರಕರ್ತ, ಕಲಾವಿದ ಸುರೇಶ್ಚಂದ್ರ. ಅವರು ಹೇಳಿದ್ದು, “ಜವ’ ಚಿತ್ರದ ಒನ್‌ಲೈನ್‌ ಬಗ್ಗೆ. ಈ ಚಿತ್ರದ ಒನ್‌ಲೈನ್‌ ಕುರಿತು ಸುರೇಶ್ಚಂದ್ರ ಹೇಳಿದ ಮಾತಿದು. “ನಾವೇನು ಮಾಡ್ತೀವೋ ಅದನ್ನೆಲ್ಲಾ ಇದೇ ಜನ್ಮದಲ್ಲಿ ಅನುಭವಿಸಬೇಕು. ಇನ್ನೊಂದರ್ಥದಲ್ಲಿ ಹೇಳುವುದಾದರೆ, ಮಾಡಿದುಣ್ಣೋ ಮಹರಾಯ. ಈ ಕಾನ್ಸೆಪ್ಟ್ನೊಂದಿಗೆ ಚಿತ್ರ ಮೂಡಿಬಂದಿದೆ. ಮಗ ಅಭಯ್‌ಚಂದ್ರ ನಿರ್ದೇಶನದ ಮೊದಲ ಚಿತ್ರವಿದು. ಅವನ ಮೇಲೆ ನಂಬಿಕೆ ಇಟ್ಟು, ವಚನ್‌ಶೆಟ್ಟಿ, ವೀರೇಂದ್ರ ಅವರು ಹಣ ಹಾಕಿದ್ದಾರೆ. ಇನ್ನೊಬ್ಬ ಪುತ್ರ ವಿನಯ್‌ ಚಂದ್ರ ಸಂಗೀತ ನೀಡಿದ್ದಾನೆ. ನಿರ್ದೇಶಕ, ಸಂಗೀತ ನಿರ್ದೇಶಕರಿಬ್ಬರೂ ನನ್ನ ಎರಡು ಕಣ್ಣುಗಳಿದ್ದಂತೆ. ಒಳ್ಳೆಯ ತಂಡ ಕಟ್ಟಿಕೊಂಡಿದ್ದಾರೆ. ಮಕ್ಕಳ ಆಸೆಯಂತೆ ಸಹಕಾರ ಕೊಟ್ಟಿದ್ದೇನೆ. ಒಳ್ಳೇ ಮನಸುಗಳು ಕೈ ಜೋಡಿಸಿವೆ. ನಿಮ್ಮೆಲ್ಲರ ಸಹಕಾರ ಇರಲಿ’ ಅಂದರು ಸುರೇಶ್ಚಂದ್ರ.

ನಿರ್ದೇಶಕ ಅಭಯ್‌ ಚಂದ್ರ ಅವರಿಗೆ ಟ್ರೇಲರ್‌ ಬಿಡುಗಡೆ ಮಾಡಿದ ಖುಷಿ ಇತ್ತು. ಸಿನಿಮಾ ಬಗ್ಗೆ ಏನನ್ನೂ ಹೇಳುವುದಿಲ್ಲ. ಇದು ಐದು ಪಾತ್ರಗಳ ಸುತ್ತ ನಡೆಯೋ ಕಥೆ. ಮಿಸ್ಟ್ರಿ ಥ್ರಿಲ್ಲರ್‌ ಇಲ್ಲಿದೆ. ಸಾಯಿಕುಮಾರ್‌, ಭವಾನಿ ಪ್ರಕಾಶ್‌, ದಿಲೀಪ್‌ರಾಜ್‌ ಮುಖ್ಯ ಪಾತ್ರ ನಿರ್ವಹಿಸಿದ್ದಾರೆ. ಕನ್ನಡದಲ್ಲಿ ಇದು ಹೊಸಬಗೆಯ ಚಿತ್ರವಾಗುತ್ತೆ. “ಜವ’ ಅಂದರೆ ಸಾವು, ಅದರ ಕುರಿತಾದ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.  ಜ.19 ಕ್ಕೆ ತೆರೆಕಾಣಬೇಕಿತ್ತು. ಕಾರಣಾಂತರದಿಂದ ಮುಂದೆ ಹೋಗಿ, ಫೆಬ್ರವರಿ 2 ರಂದು ತೆರೆಕಾಣುತ್ತಿದೆ ಅಂದರು ನಿರ್ದೇಶಕರು.

ಸಾಯಿಕುಮಾರ್‌ ಅವರಿಲ್ಲಿ ಪೊಲೀಸ್‌ ಅಧಿಕಾರಿ ಪಾತ್ರ ನಿರ್ವಹಿಸಿದ್ದಾರಂತೆ. “ಇಲ್ಲೊಂದು ಹೊಸ ತಂಡ ಸೇರಿದೆ. ಸಹೋದರರಿಬ್ಬರ ಕಾಂಬಿನೇಷನ್‌ನಲ್ಲಿ “ಜವ’ ಹೊಸ ಅನುಭವ ಕಟ್ಟಿಕೊಡುತ್ತೆ. ಇಲ್ಲಿ ಎಲ್ಲವೂ ಹೊಸ ಶೈಲಿಯಲ್ಲಿ ಮೂಡಿಬಂದಿರುವುದರಿಂದ ಕನ್ನಡಕ್ಕೆ ಹೊಸ ರೀತಿಯ ಚಿತ್ರ ಇದಾಗಲಿದೆ’ ಎಂಬ ನಂಬಿಕೆ ನನ್ನದು ಅಂದರು ಸಾಯಿಕುಮಾರ್‌.

ಸಂಗೀತ ನಿರ್ದೇಶಕ ವಿನಯ್‌ ಚಂದ್ರ ಅವರ ಪ್ರಕಾರ ಇಲ್ಲಿ ಎಲ್ಲರ ಪಾತ್ರ ಅಚ್ಚುಕಟ್ಟಾಗಿ ಮೂಡಿಬಂದಿರುವುದರಿಂದ “ಜವ’ಕ್ಕೊಂದು ಅರ್ಥ ಸಿಕ್ಕಿದೆಯಂತೆ. “ಇಂತಹ ಚಿತ್ರಗಳಿಗೆ ಹಿನ್ನೆಲೆ ಸಂಗೀತ ಮುಖ್ಯ ಪಾತ್ರವಹಿಸುತ್ತದೆ. ಇಲ್ಲಿ ಹೊಸ ಪ್ರಯತ್ನ ಮಾಡಲಾಗಿದೆ. ಇಡೀ ಚಿತ್ರವೇ ಹೊಸ ಪ್ರಯೋಗದಲ್ಲಿರುವುದರಿಂದ, ಚಾಲೆಂಜಿಂಗ್‌ ಕೆಲಸ ನಿರ್ವಹಿಸಿದ್ದೇನೆ’ ಎಂದರು ವಿನಯ್‌ಚಂದ್ರ.

ನಿರ್ಮಾಪಕ ವಚನ್‌ ಶೆಟ್ಟಿ ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ಖುಷಿ ಇದೆಯಂತೆ. ಭವಾನಿ ಪ್ರಕಾಶ್‌ಗೆ ಇದು ಹೊಸಬರ ಪ್ರಯತ್ನ ಅಂತ ಅನಿಸಿಲ್ಲವಂತೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.