ಟ್ರಂಕ್‌ನೊಳಗಿಂದ ಬಂದ ಹಾಡು


Team Udayavani, Feb 9, 2018, 9:10 AM IST

28.jpg

ಹಿರಿಯ ನಿರ್ದೇಶಕ, ನಿರ್ಮಾಪಕ ದಿವಂಗತ ಜಿ.ವಿ.ಅಯ್ಯರ್‌ ಅವರ ಮೊಮ್ಮಗಳು ರಿಷಿಕಾ ಶರ್ಮ ನಿರ್ದೇಶನದ “ಟ್ರಂಕ್‌’ ಚಿತ್ರದ ಮೊದಲ ಪೋಸ್ಟರ್‌ ಈಗಾಗಲೇ ಬಿಡುಗಡೆಯಾಗಿದೆ. ಇತ್ತೀಚೆಗೆ ಆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಹಿರಿಯ ಗೀತರಚನೆಕಾರ ಕೆ.ಕಲ್ಯಾಣ್‌ ಅವರು ಆಡಿಯೋ ಸಿಡಿ ಬಿಡುಗಡೆ ಮಾಡುವ ಮೂಲಕ ಹೊಸಬರ ತಂಡಕ್ಕೆ ಶುಭಹಾರೈಸಿದ್ದಾರೆ.

ನಿರ್ದೇಶಕಿ ರಿಷಿಕಾ ಶರ್ಮ ಅವರು ತಮ್ಮ ಮೊದಲ ಚಿತ್ರದ ಕುರಿತು ಅಂದು ಹೇಳಿದ್ದಿಷ್ಟು. “ಇದು ನಿಜ ಘಟನೆ ಇಟ್ಟುಕೊಂಡು ಮಾಡಿದ ಚಿತ್ರ. ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆಯ ಚಿತ್ರಣವಿದು. ಆ ಭಾಗದಲ್ಲಿರುವ  ಮನೆಯೊಂದರಲ್ಲಿ ಒಂದು ಘಟನೆ ನಡೆದಿತ್ತು. ಅದೇ ಚಿತ್ರದ ಹೈಲೈಟ್‌. ಒಂದು ಟ್ರಂಕ್‌ನಿಂದ ಶುರುವಾಗುವ ಕಥೆ ಅದಾಗಿದ್ದು, ಇಪ್ಪತ್ತು ವರ್ಷದ ಹಿಂದೆ ನಡೆದಂತಹ ಕುತೂಹಲದ ಘಟನೆಯನ್ನು ಚಿತ್ರ ಮಾಡಲಾಗಿದೆ. ಒಂದು ಟ್ರಂಕ್‌ ಸುತ್ತ ನಡೆಯೋ ಘಟನೆಗಳೇ ಚಿತ್ರದ ಜೀವಾಳ. ಚಿತ್ರದಲ್ಲಿ ಟ್ರಂಕ್‌ ಕೇಂದ್ರಬಿಂದು. ಆ ಟ್ರಂಕ್‌ನೊಳಗೊಂದು ವಿಚಿತ್ರ ಘಟನೆ ನಡೆಯುತ್ತೆ. ಅದೇನೆಂಬುದನ್ನು ಸಿನಿಮಾದಲ್ಲೇ ನೋಡಬೇಕು. ಇಲ್ಲಿ ಇನ್ನೊಂದು ವಿಶೇಷವೆಂದರೆ, ನಿಜವಾದ ಘೋಸ್ಟ್‌ ಹಂಟರ್ ಕೂಡ ಕೆಲಸ ಮಾಡಿದ್ದಾರೆ. ತೆರೆಯ ಮೇಲೂ ಅವರೂ ಕಾಣಿಸಿಕೊಂಡಿದ್ದಾರೆ. ತಂತ್ರ, ಮಂತ್ರ ಇಲ್ಲದೆ, ಸೈನ್ಸ್‌ ಮೂಲಕ ಹೊಸತನ್ನು ಹೇಳಿದ್ದೇವೆ’ ಅಂದರು ರಿಷಿಕಾ ಶರ್ಮ.

ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನಾಯಕ ನಿಹಾಲ್‌ಗೆ “ಟ್ರಂಕ್‌’ ಹೊಸ ಅನುಭವ ಕಟ್ಟಿಕೊಟ್ಟಿದೆಯಂತೆ. ಒಂದೂವರೆ ವರ್ಷ, ಈ ಟ್ರಂಕ್‌ನಲ್ಲೇ ಕಳೆದಿದ್ದಾರಂತೆ. “ಮಹಿಳೆಯೊಬ್ಬಳು ನಿರ್ದೇಶನ ಮಾಡಿದ ಚಿತ್ರ ಅಂತ ಹೇಳಲು ಸಾಧ್ಯವಿಲ್ಲ. ಯಾಕೆಂದರೆ, ಎಲ್ಲವನ್ನೂ ಒಟ್ಟಿಗೆ ನಿರ್ವಹಿಸಿ, ಎಲ್ಲರನ್ನೂ ಒಂದೇ ಕಡೆ ಸೇರಿಸಿ, ನೀಟ್‌ ಸಿನಿಮಾ ಮಾಡಿದ್ದಾರೆ. ಅಷ್ಟೊಂದು ಕೆಲಸವನ್ನು ತುಂಬಾ ಸುಲಭವಾಗಿ ಮಾಡಿದ್ದಾರೆ. ಕನ್ನಡದಲ್ಲಿ ಇದೊಂದು ಸುದ್ದಿ ಮಾಡುವ ಚಿತ್ರವಾಗುತ್ತೆ’ ಎಂದರು ನಿಹಾಲ್‌. ಇನ್ನು ನಿರ್ಮಾಪಕ ರಾಜೇಶ್‌ ಭಟ್‌ ಅವರಿಗೆ ಒಳ್ಳೆಯ ಚಿತ್ರ ಮಾಡಿರುವ ಖುಷಿ ಇದೆಯಂತೆ. “ಇದು ಹಾರರ್‌ ಚಿತ್ರವಾದರೂ, ಕನ್ನಡದ ಮಟ್ಟಿಗೆ ಹೊಸ ಫೀಲ್‌ ಕೊಡುವ ಚಿತ್ರ’ ಎನ್ನುತ್ತಾರೆ ನಿರ್ಮಾಪಕರು. ಈ ಚಿತ್ರಕ್ಕೆ ಕಾರ್ತಿಕ್‌, ಗಣೇಶನ್‌ ಮತ್ತು ಪ್ರದೀಪ್‌ ಈ ಮೂವರು ಸೇರಿ ಸಂಗೀತ ನೀಡಿದ್ದಾರೆ. ಹಾಲಿವುಡ್‌ ಮತ್ತು ಬಾಲಿವುಡ್‌ ಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿರುವ ಅಲ್ವಿನ್‌ ಅವರು ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪ್ರದೀಪ್‌ ಗೀತೆ ರಚಿಸಿದ್ದಾರೆ. ಕುಮಾರ್‌ ತಮ್ಮ ಆದ್ಯ ಆಡಿಯೋ ಕಂಪೆನಿ ಮೂಲಕ ಮೊದಲ ಆಡಿಯೋ ಸಿಡಿ ಬಿಡುಗಡೆ ಮಾಡಿದ್ದಾರೆ. ಚಿತ್ರಕ್ಕೆ ವೈಶಾಲಿ ದೀಪಕ್‌ ನಾಯಕಿ. ಉಳಿದಂತೆ ಅರುಣ ಬಾಲರಾಜ್‌, ರಂಗಭೂಮಿಯ ಹಿರಿಯ ಕಲಾವಿದೆ ಸುಂದರಶ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಭಜರಂಗ್‌, ಸಂದೀಪ್‌ ಕ್ಯಾಮೆರಾ ಹಿಡಿದಿದ್ದಾರೆ. 

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.