ಬಿಗ್‌ ಮನೆಯಿಂದ ಕರಾಳ ರಾತ್ರಿಯವರೆಗೆ


Team Udayavani, Feb 23, 2018, 11:34 AM IST

big-mane.jpg

“ಬಿಗ್‌ಬಾಸ್‌’ ಗೆದ್ದೇ ಬರುತ್ತೇನೆ ಎಂಬ ವಿಶ್ವಾಸದೊಂದಿಗೆ ದಯಾಳ್‌ ಪದ್ಮನಾಭನ್‌ “ಬಿಗ್‌ ಬಾಸ್‌’ ಮನೆಯೊಳಗೆ ಹೋಗಿದ್ದರಂತೆ. ಆದರೆ, ಅವರು ಬೇಗನೇ ಮನೆಯಿಂದ ಹೊರಬರಬೇಕಾಯಿತು. ಬಂದ ಮೇಲೆ ಏನು ಮಾಡೋದು ಎಂದು ಯೋಚಿಸಿದಾಗ ತೋಚಿದ್ದು “ಕರಾಳ ರಾತ್ರಿ’. ಅದರಂತೆ ಸ್ಕ್ರಿಪ್ಟ್ ರೆಡಿಮಾಡಿಕೊಂಡ ದಯಾಳ್‌ ಈಗ ಸಿನಿಮಾದ ಮುಹೂರ್ತ ಕೂಡಾ ಮಾಡಿಬಿಟ್ಟಿದ್ದಾರೆ. ಒಂದಲ್ಲ ಎರಡು ಸಿನಿಮಾಗಳಿಗೆ.

“ಕರಾಳ ರಾತ್ರಿ’ ಜೊತೆಗೆ “ಪುಟ 109′ ಎಂಬ ಮತ್ತೂಂದು ಸಿನಿಮಾವನ್ನು ದಯಾಳ್‌ ಆರಂಭಿಸಿದ್ದಾರೆ. ವಿಶೇಷವೆಂದರೆ, ಈ ಸಿನಿಮಾಕ್ಕೆ ದಯಾಳ್‌ ಬಿಗ್‌ಬಾಸ್‌ ಮನೆಯಲ್ಲೇ ಕಲಾವಿದರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಜೆಕೆ ಹಾಗೂ ಅನುಪಮಾ ಗೌಡ ಅವರು ದಯಾಳ್‌ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. “ಕರಾಳ ರಾತ್ರಿ’ ಹಾಗೂ “ಪುಟ 109′ ಎರಡೂ ಸಿನಿಮಾಗಳಲ್ಲೂ ಜೆಕೆ ನಟಿಸಿದರೆ, ಅನುಪಮಾ ಗೌಡ ಅವರು “ಕರಾಳ ರಾತ್ರಿ’ಯಲ್ಲಿ ನಟಿಸುತ್ತಿದ್ದಾರೆ.

“ಬಿಗ್‌ಬಾಸ್‌’ ಮನೆಯೊಳಗೆ ಸಿನಿಮಾ ವಿಷಯ ಮಾತನಾಡುತ್ತಾ ದಯಾಳ್‌ ಮುಂದೊಂದು ಸಿನಿಮಾ ಮಾಡುವ ಆಲೋಚನೆ ಇದೆ, ನೀವು ನಟಿಸುತ್ತೀರಾ ಎಂದು ಕೇಳಿದ್ದರಂತೆ. ಅದಕ್ಕೆ ಇಬ್ಬರು ಒಪ್ಪಿದ್ದರು. “ಬಿಗ್‌ಬಾಸ್‌’ನಿಂದ ಹೊರಬಂದ ನಂತರವೂ ಮನೆಯೊಳಗೆ ಕೊಟ್ಟ ಮಾತಿನಂತೆ ಇಬ್ಬರು ಸಿನಿಮಾದಲ್ಲಿ ನಟಿಸಲು ಒಪ್ಪಿದ್ದಾರೆ. ಮೋಹನ್‌ ಹಬ್ಬು ಅವರ ನಾಟಕವನ್ನಾಧರಿಸಿ ದಯಾಳ್‌ “ಕರಾಳ ರಾತ್ರಿ’ ಸಿನಿಮಾ ಮಾಡುತ್ತಿದ್ದಾರೆ.

ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಂತೆ. “ಇದು ಕ್ರೈಮ್‌ ಥ್ರಿಲ್ಲರ್‌ ಸಿನಿಮಾ. ಚಿತ್ರದ ಕಥೆ 1980ಯಲ್ಲಿ ನಡೆಯುತ್ತದೆ. ಕ್ರೈಮ್‌ ಥ್ರಿಲ್ಲರ್‌ ಎಂದಾಕ್ಷಣ ಒಂದು ಫಾರ್ಮುಲಾ ಇರುತ್ತದೆ. ಬಹುತೇಕ ಸಿನಿಮಾಗಳು ಆ ಫಾರ್ಮುಲಾದ ಮೇಲೆಯೇ ಸಾಗುತ್ತದೆ. ಆದರೆ, “ಕರಾಳ ರಾತ್ರಿ’ಯಲ್ಲಿ ಆ ಫಾರ್ಮುಲಾವನ್ನು ಬಿಟ್ಟು ಹೊಸದನ್ನು ಪ್ರಯತ್ನಿಸುತ್ತಿದ್ದೇನೆ. ಚಿತ್ರದಲ್ಲಿ ಭಾವನೆಗಳಿಗೆ ಹೆಚ್ಚು ಒತ್ತು ಕೊಡಲಾಗಿದೆ. ಎಮೋಶನ್‌ ಜೊತೆಗೆ ಸಾಗುವ ಕ್ರೈಮ್‌ ಥ್ರಿಲ್ಲರ್‌ ಸಿನಿಮಾವಿದು.

“ಹಗ್ಗದ ಕೊನೆ’ ತರಹನೇ ಈ ಸಿನಿಮಾ ಕೂಡಾ ಒಳ್ಳೆಯ ಹೆಸರು ತಂದುಕೊಡುತ್ತದೆ ಎಂಬ ವಿಶ್ವಾಸವಿದೆ’ ಎನ್ನುವುದು ದಯಾಳ್‌ ಮಾತು. ಚಿತ್ರದ ಚಿತ್ರೀಕರಣ ಮೂಡಿಗೆರೆಯ ಬಳಿಯ ಮನೆಯೊಂದರಲ್ಲಿ ನಡೆಯಲಿದ್ದು, ಸಿನಿಮಾಕ್ಕಾಗಿ ಒಂದು ಲಕ್ಷ ರೂಪಾಯಿ ಖರ್ಚು ಮಾಡಿ ಆ ಮನೆಯನ್ನು ನವೀಕರಣ ಮಾಡುತ್ತಿದೆ ಚಿತ್ರತಂಡ.  ಶೇ. 70ರಷ್ಟು ಚಿತ್ರೀಕರಣ ಆ ಮನೆಯಲ್ಲೇ ನಡೆಯುತ್ತದೆಯಂತೆ.  

15 ದಿನಗಳಲ್ಲಿ “ಕರಾಳ ರಾತ್ರಿ’ ಚಿತ್ರೀಕರಣ ಮುಗಿಯಲಿದೆಯಂತೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಹಾಡಂತೆ. ನಾಗರಾಜ್‌ ಎನ್ನುವವರು ಹಾಡು ಬರೆಯುತ್ತಿದ್ದಾರೆ. ಚಿತ್ರದ ಹಾಡೊಂದರ ಆರಂಭದಲ್ಲಿ ಡಿವಿಜಿಯವರ “ಮಂಕುತಿಮ್ಮನ ಕಗ್ಗ’ದ ನಾಲ್ಕು ಸಾಲು ಬರಲಿದ್ದು, ಉಳಿದಂತೆ ಅದಕ್ಕೆ ಹೊಂದುವ ರೀತಿ ನಾಗರಾಜ್‌ ಅವರು ಬರೆದಿದ್ದಾರೆ ಎಂದು ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ ದಯಾಳ್‌. 

ನಿರ್ಮಾಣದಲ್ಲಿ ದಯಾಳ್‌ಗೆ ಅವಿನಾಶ್‌ ಅವರು ಸಾಥ್‌ ನೀಡುತ್ತಿದ್ದಾರೆ. ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿರುವ ಜೆಕೆಗೆ ಬೌಂಡ್‌ ಸ್ಕ್ರಿಪ್ಟ್ ಕೊಟ್ಟ ಮೊದಲ ನಿರ್ದೇಶಕ ದಯಾಳ್‌ ಅಂತೆ. ಅನುಪಮಾ ಕೂಡಾ ಒಳ್ಳೆಯ ಪಾತ್ರ ಸಿಕ್ಕ ಖುಷಿ ಹಂಚಿಕೊಂಡರು. ಚಿತ್ರದಲ್ಲಿ ವೀಣಾ ಸುಂದರ್‌, ಸಿಹಿಕಹಿ ಚಂದ್ರು ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ ನವೀನ್‌ ಕೃಷ್ಣ ಸಂಭಾಷಣೆ ಇದೆ. ಗಣೇಶ್‌ ನಾರಾಯಣ್‌ ಸಂಗೀತ, ಪಿಕೆಎಚ್‌ ದಾಸ್‌ ಛಾಯಾಗ್ರಹಣ ಚಿತ್ರಕ್ಕಿದೆ. 

ಪುಟ 109: ದಯಾಳ್‌ ಮಾಡುತ್ತಿರುವ ಮತ್ತೂಂದು ಸಿನಿಮಾ “ಪುಟ 109′. ಇದು “ಹಗ್ಗದ ಕೊನೆ’ ತರಹದ ಪ್ರಯತ್ನವಂತೆ. ಬಹುತೇಕ ಸಿನಿಮಾ ಎರಡು ಪಾತ್ರಗಳ ಸುತ್ತವೇ ಸಾಗುತ್ತದೆಯಂತೆ.  ಸಂಭಾಷಣೆ ಹೆಚ್ಚು ಕಮರ್ಷಿಯಲ್‌ ಅಂಶಗಳಿಂದ ಕೂಡಿದ್ದು, ಹೊಸ ಪ್ರಯತ್ನವಾಗಲಿದೆ ಎಂಬ ವಿಶ್ವಾಸ ದಯಾಳ್‌ಗಿದೆ. ಚೆನ್ನೈ ಮೂಲದ ಅರವಿಂದ್‌ ಎನ್ನುವವರ ಕಥೆಯನ್ನಿಟ್ಟುಕೊಂಡು ದಯಾಳ್‌ ಈ ಸಿನಿಮಾ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಜೆಕೆ, ನವೀನ್‌ ಕೃಷ್ಣ, ವೈಷ್ಣವಿ ಮೆನನ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಜೆಕೆ ಇಲ್ಲಿ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡರೆ, ನವೀನ್‌ ಕೃಷ್ಣ ಲೇಖಕನ ಪಾತ್ರ ಮಾಡುತ್ತಿದ್ದಾರೆ. ವೈಷ್ಣವಿ, ನವೀನ್‌ ಕೃಷ್ಣ ಪತ್ನಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಶ್ರೀವತ್ಸ ಸಂಗೀತ ನೀಡುತ್ತಿದ್ದು, ಮೊದಲ ಬಾರಿಗೆ ಹಿನ್ನೆಲೆ ಸಂಗೀತದಲ್ಲಿ ಹೊಸ ಪ್ರಯೋಗ ಮಾಡಲು ಮುಂದಾಗಿದ್ದಾರೆ. ಚಿತ್ರಕ್ಕೆ ನವೀನ್‌ ಕೃಷ್ಣ ಸಂಭಾಷಣೆ ಇದೆ. “ಕರಾಳ ರಾತ್ರಿ’ ಮುಗಿದ ನಂತರ ಮೂಡಿಗೆರೆ ಸುತ್ತ ಮುತ್ತವೇ “ಪುಟ 109′ ಕೂಡಾ ನಡೆಯಲಿದೆ. 

* ರವಿಪ್ರಕಾಶ್ ರೈ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.