ಕನ್ನಡಕ್ಕೊಬ್ಬ ಸ್ಟೈಲಿಶ್‌ ವಿಲನ್‌


Team Udayavani, Mar 9, 2018, 4:45 PM IST

kannadakobba.jpg

ಇವರನ್ನು ನೀವು ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನೋಡಿರುತ್ತೀರಿ. ಸಖತ್‌ ಸ್ಟೈಲಿಶ ವಿಲನ್‌ ಆಗಿ ಅನೇಕ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಿಧಾನವಾಗಿ ಈಗ ಒಂದಷ್ಟು ಸಿನಿಮಾಗಳಲ್ಲಿ ಬಿಝಿಯಾಗುತ್ತಿದ್ದಾರೆ ಕೂಡಾ. ಇವರ ಹೆಸರು ದೀಪಕ್‌ ಶೆಟ್ಟಿ. ಈಗಾಗಲೇ “ಶ್ರೀಕಂಠ’, “ಟೈಗರ್‌’, “ಭರ್ಜರಿ’, “ಗೌಡ್ರು ಹೋಟೆಲ್‌’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿಸಿರುವ ಅಷ್ಟೂ ಸಿನಿಮಾಗಳಲ್ಲಿ ದೀಪಕ್‌ ಮಾಡಿರೋದು ನೆಗೆಟಿವ್‌ ಪಾತ್ರಗಳನ್ನೇ.  

ದೀಪಕ್‌ ಹುಟ್ಟಿದ್ದು, ಬೆಳೆದಿದ್ದು, ಓದಿದ್ದು ಎಲ್ಲವೂ ಮಂಗಳೂರಿನಲ್ಲಿ. ಉದ್ಯೋಗ ಅರಸಿ ಹೋಗಿದ್ದು ದುಬೈಗೆ. ದುಬೈನಲ್ಲಿ ಒಳ್ಳೆಯ ಉದ್ಯೋಗವೂ ಇತ್ತು. ಕೆಲಸದ ವಿಚಾರದಲ್ಲಿ ಬೇಸರವಾಗುವಂಥದ್ದೇನೂ ಇರಲಿಲ್ಲ. ಆದರೆ, ಮನಸ್ಸು ಮಾತ್ರ ಬೇರೇನೋ ಬಯಸುತ್ತಿತ್ತು. ಈ ಕ್ಷೇತ್ರ ನನ್ನದಲ್ಲ. ದಿನಾ ನಾನು ನಾನಾಗಿದ್ದರೆ ಚೆನ್ನಾಗಿರಲ್ಲ, ದಿನಕ್ಕೊಂದು ಪಾತ್ರವಾಗಬೇಕು, ಹೊಸ ಹಾದಿ ಹಿಡಿಯಬೇಕೆಂಬ ತುಡಿತ ಜೋರಾಗುತ್ತದೆ. ದೀಪಕ್‌ ಶೆಟ್ಟಿ ದುಬೈನಿಂದ ಮಂಗಳೂರು ಫ್ಲೈಟ್‌ ಹತ್ತಿಯೇ ಬಿಡುತ್ತಾರೆ.

ಹೀಗೆ ಬಂದ ಅವರು ಮಾಡೆಲಿಂಗ್‌ನಲ್ಲೂ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಮಾಡೆಲಿಂಗ್‌ನಿಂದ ದೀಪಕ್‌ ಶೆಟ್ಟಿ ನೇರವಾಗಿ ಪ್ರವೇಶಿಸಿದ್ದು ಕಿರುತೆರೆಗೆ. “ಕಾದಂಬರಿ’ ಎಂಬ ಧಾರಾವಾಹಿಯಲ್ಲಿ ನಟಿಸುವ ಮೂಲಕ ದೀಪಕ್‌ ಬಣ್ಣದ ಲೋಕಕ್ಕೆ ಎಂಟ್ರಿಕೊಡುತ್ತಾರೆ. ಆ ನಂತರ ವಿನು ಬಳಂಜ ಅವರ “ಪ್ರೀತಿ ಇಲ್ಲದ ಮೇಲೆ’, “ಬಂದೇ ಬರುತಾವ ಕಾಲ’, “ನಿಗೂಢ’ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಆದರೆ, ದೀಪಕ್‌ ಶೆಟ್ಟಿಗೆ ಬ್ರೇಕ್‌ ಕೊಟ್ಟಿದ್ದು, “ಲವ್‌ಲವಿಕೆ’ ಧಾರಾವಾಹಿ.

ಈ ಧಾರಾವಾಹಿಯಲ್ಲಿ ವಯಸ್ಸಾದ ಪಾತ್ರ ಮಾಡುವ ಮೂಲಕ ಅನೇಕರ ಗಮನ ಸೆಳೆಯುತ್ತಾರೆ. ಈ ಧಾರಾವಾಹಿ ನೋಡಿ, ನಂದಕಿಶೋರ್‌ “ಟೈಗರ್‌’ ಚಿತ್ರದಲ್ಲಿ ಅವಕಾಶ ಕೊಟ್ಟರಂತೆ. “ನನಗೆ “ಲವ್‌ಲವಿಕೆ’ ಧಾರಾವಾಹಿ ಒಳ್ಳೆಯ ಹೆಸರು ತಂದುಕೊಟ್ಟಿತು. ಆ ಧಾರಾವಾಹಿಯಲ್ಲಿ ನಾನು ವಯಸ್ಸಾದ ಪಾತ್ರ ಮಾಡಿದ್ದೆ. ನನ್ನ ಹೇರ್‌ಸ್ಟೈಲ್‌ ಕೂಡಾ ಅದಕ್ಕೆ ಹೊಂದುವಂತಿತ್ತು. ಆ ಪಾತ್ರ ಒಪ್ಪಿಕೊಂಡಾಗ ಅನೇಕರು “ನಿನ್ನ ಕಥೆ ಮುಗೀತು, ಮುಂದೆ ನಿನಗೆ ಇಂತಹ ಪಾತ್ರಗಳೇ ಬರುತ್ತವೆ’ ಎಂದು ಹೆಸರಿಸಿದರು.

ಆದರೆ, ನಾನು ಅದನ್ನು ಸವಾಲಾಗಿ ಸ್ವೀಕರಿಸಿ, ಪಾತ್ರ ಮಾಡಿದೆ. ಅದು ನನಗೆ ಒಳ್ಳೆಯ ಹೆಸರು ತಂದುಕೊಟ್ಟಿತು’ ಎಂದು ತಮ್ಮ ಬಣ್ಣದ ಲೋಕದ ಆರಂಭದ ಬಗ್ಗೆ ಹೇಳುತ್ತಾರೆ ದೀಪಕ್‌ ಶೆಟ್ಟಿ. ದೀಪಕ್‌ ಶೆಟ್ಟಿಯವರು ಇಲ್ಲಿವರೆಗೆ ನಟಿಸಿದ ಸಿನಿಮಾಗಳನ್ನು ನೋಡಿದರೆ ಅಲ್ಲಿ ನಿಮಗೆ ಕಾಣಸಿಗೋದು ಒಬ್ಬ ಸ್ಟೈಲಿಶ್‌ ವಿಲನ್‌. ಮಾಡರ್ನ್ ಲುಕ್‌ನ ಸೂಟು-ಬೂಟು ಹಾಕಿಕೊಂಡಿರುವ ವಿಲನ್‌ ಪಾತ್ರಗಳಲ್ಲೇ ದೀಪಕ್‌ ಕಾಣಿಸಿಕೊಂಡಿದ್ದಾರೆ. ಮುಂದೆ ಒಪ್ಪಿಕೊಂಡಿರುವ ಸಿನಿಮಾಗಳಲ್ಲೂ ಅದೇ ತರಹದ ಪಾತ್ರ ಅವರಿಗೆ ಸಿಕ್ಕಿದೆಯಂತೆ.

“ಬಹುಶಃ ನನ್ನ ಸಾಲ್ಟ್ ಅಂಡ್‌ ಪೆಪ್ಪರ್‌ ಹೇರ್‌ಸ್ಟೈಲ್‌ ಹಾಗೂ ನನ್ನ ಲುಕ್‌ನಿಂದಾಗಿ ನನಗೆ ಸ್ಟೈಲಿಶ್‌ ವಿಲನ್‌ ಪಾತ್ರಗಳು ಸಿಗುತ್ತಿರಬಹುದು. ಆದರೆ, ಪಾತ್ರಗಳ ಹಿನ್ನೆಲೆ ಬೇರೆಯಾಗಿರುವುದರಿಂದ ಹೊಸತನದಿಂದ ಪಾತ್ರ ನಿರ್ವಹಿಸಲು ಪ್ರಯತ್ನಿಸುತ್ತಿದ್ದೇನೆ’ ಎನ್ನುವುದು ದೀಪಕ್‌. ಮುಂದೆ “ಅಸತೋಮ ಸದ್ಗಮಯ’, “ಕಾಲಚಕ್ರ’, “ಪೊಗರು’ ಸೇರಿದಂತೆ ಇನ್ನೂ ಒಂದಷ್ಟು ಚಿತ್ರಗಳಲ್ಲಿ ದೀಪಕ್‌ ಶೆಟ್ಟಿ ನಟಿಸಲಿದ್ದಾರಂತೆ. ಸದ್ಯ ಯೋಗರಾಜ್‌ ಭಟ್‌ ನಿರ್ದೇಶನದ “ಪಂಚತಂತ್ರ’ ಚಿತ್ರದಲ್ಲಿ ದೀಪಕ್‌ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಹಿಪ್ಪಿ ಸ್ಟೈಲ್‌ನ ಪಾತ್ರವಂತೆ. ವಯಸ್ಸಾದರೂ ದೇಹವನ್ನು ಗಟ್ಟಿಮುಟ್ಟಾಗಿಟ್ಟುಕೊಂಡು ಜಾಲಿಯಾಗಿರುವ ಪಾತ್ರ ಸಿಕ್ಕಿದೆಯಂತೆ. ದೀಪಕ್‌ ಶೆಟ್ಟಿಗೆ ಸಾಕಷ್ಟು ಅವಕಾಶಗಳು ಬರುತ್ತಿವೆ. ಬಹುತೇಕ ಪಾತ್ರಗಳು ನೆಗೆಟಿವ್‌. ಹಾಗಾದರೆ ಒಂದು ಸಿನಿಮಾ ಒಪ್ಪಿಕೊಳ್ಳುವ ಮುನ್ನ ದೀಪಕ್‌ ಏನು ನೋಡುತ್ತಾರೆ ಎಂಬ ಪ್ರಶ್ನೆ ಬರುತ್ತದೆ. ಅದಕ್ಕೂ ಅವರು ಉತ್ತರಿಸಿದ್ದಾರೆ.

“ನಾನು ಯಾವುದೇ ಪಾತ್ರ ಒಪ್ಪಿಕೊಳ್ಳುವ ಮುನ್ನ ಆ ಪಾತ್ರದ ಆದ್ಯತೆ ನೋಡುತ್ತೇನೆ. ಸಿನಿಮಾಕ್ಕೆ ಆ ಪಾತ್ರ ಎಷ್ಟು ಪ್ರಾಮುಖ್ಯವಾಗಿರುತ್ತದೆ ಎಂಬುದು ಕೂಡಾ ಮುಖ್ಯವಾಗುತ್ತದೆ. ಜೊತೆಗೆ ಸುಖಾಸುಮ್ಮನೆ ಬಂದು ಬಿಲ್ಡಪ್‌ ಕೊಡುವ ಪಾತ್ರ ನನಗಿಷ್ಟವಿಲ್ಲ. ನಟನೆಗೆ ಅವಕಾಶವಿರಬೇಕು. ಜೊತೆಗೆ ಆ ಪಾತ್ರ ನನಗೆ ಹೊಂದಿಕೆಯಾಗಬೇಕು. ಯಾರು ಸಿಕ್ಕಿಲ್ಲ ಎಂಬ ಕಾರಣಕ್ಕೆ ನಾನು ಪಾತ್ರ ಮಾಡಲು ಸಿದ್ಧವಿಲ್ಲ’ ಎಂದು ತಮ್ಮ ಸಿನಿಮಾ ಆಯ್ಕೆಯ ಬಗ್ಗೆ ಹೇಳುತ್ತಾರೆ. 

* ರವಿಪ್ರಕಾಶ್ ರೈ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.