ಸದ್ಯದಲ್ಲೇ ರಥಯಾತ್ರೆ ಶುರು!


Team Udayavani, Mar 30, 2018, 8:20 AM IST

23.jpg

“ರಂಗಿತರಂಗ’ ಬಿಡುಗಡೆಯಾದ ನಾಲ್ಕನೇ ದಿನಕ್ಕೆ ಅನೂಪ್‌ ಮತ್ತು ನಿರೂಪ್‌ ಭಂಡಾರಿ ಮಾಧ್ಯಮದವರೆದುರು ಕುಳಿತಿದ್ದರು. ಅಂದು ಅವರ ಮುಖದಲ್ಲಿ ಬೇಸರವಿತ್ತು. ಕಾರಣ, ಚಿತ್ರವು “ಬಾಹುಬಲಿ’ ಎದುರು ಬಿಡುಗಡೆಯಾಗಿತ್ತು. ಚಿತ್ರಮಂದಿರಗಳ ಅಭಾವ
ಎದುರಾಗಿತ್ತು. ಆದರೆ, “ರಾಜರಥ’ ಬಿಡುಗಡೆಯಾದಾಗ ಅಂತಹ ಪರಿಸ್ಥಿತಿ ಏನಿರಲಿಲ್ಲ. ದೊಡ್ಡ ಸಂತೋಷವಲ್ಲದಿದ್ದರೂ, ಭಂಡಾರಿ ಸಹೋದರರು ಸ್ವಲ್ಪ ನಿರಾಳವಾಗಿದ್ದರು. 

ಚಿತ್ರಕ್ಕೆ ನೀಡಿದ ಪ್ರತಿಕ್ರಿಯೆ ಬಗ್ಗೆ ಖುಷಿಯಾಗಿದ್ದರು. ಮೊದಲು ಮಾತನಾಡಿದ ಅನೂಪ್‌ ಭಂಡಾರಿ, “ಚಿತ್ರ ಬಿಡುಗಡೆಯಾದಾಗಿನಿಂದ ಸಾಕಷ್ಟು ಪ್ರತಿಕ್ರಿಯೆಗಳು  ಬರುತ್ತಿವೆ. ಕೆಲವರು ಚಿತ್ರ “ರಂಗಿತರಂಗ’ ತರಹ ಇರಬಹುದು ಎಂಬ  ನಿರೀಕ್ಷೆಗಳನ್ನಿಟ್ಟುಕೊಂಡು  ಬಂದಿದ್ದರಂತೆ. ಆ ತರಹ ಇಲ್ಲ ಎಂದು ಆಮೇಲೆ ಗೊತ್ತಾಗಿದೆ. ಈಗಾಗಲೇ ಬೆಂಗಳೂರು ಚಿತ್ರಮಂದಿರಗಳಿಗೆ ಭೇಟಿ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ಊರುಗಳಿಗೂ ಹೋಗಿ, ಜನರಿಗೆ ಧನ್ಯವಾದ ಸಲ್ಲಿಸುವುದರ ಜೊತೆಗೆ ಚಿತ್ರದ ಬಗ್ಗೆ ಪ್ರಚಾರ ಮಾಡಿ ಬರುತ್ತೇವೆ’ ಎಂದು ಹೇಳಿದರು.

ಇನ್ನು ಚಿತ್ರದಲ್ಲಿ ರವಿಶಂಕರ್‌ ಅವರು ಬಳಿಸಿದ ಸ್ಕೂಟರ್‌ನ ಹರಾಜು ಹಾಕಿ ಎಂದು ಹಲವರು ಹೇಳಿದರಂತೆ. ಆದರೆ, ಅದನ್ನು ಹರಾಜು ಹಾಕುವುದು ಬೇಡ, ಚಿತ್ರ ನೋಡಿದ ಪ್ರೇಕ್ಷಕರಿಗೆ ಕೊಡೋಣ ಎಂದು ಅವರು ತೀರ್ಮಾನಿಸಿದ್ದಾರೆ. “ಸುಮ್ಮನೆ ಹರಾಜು ಹಾಕುವುದಕ್ಕೆ ಇಷ್ಟವಿಲ್ಲ. ಅದರ ಬದಲು, ಚಿತ್ರ ನೋಡಿದ ಪ್ರೇಕ್ಷಕರಿಗೆ ಕೊಡುವುದಕ್ಕೆ ತೀರ್ಮಾನಿಸಿದ್ದೇವೆ. ಮುಂದಿನ ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿ ಚಿತ್ರಮಂದಿರದಲ್ಲೂ ಒಂದೊಂದು ಬಾಕ್ಸ್‌ ಇಟ್ಟಿರುತ್ತೇವೆ. ಚಿತ್ರ ನೋಡಿದವರು ಟಿಕೆಟ್‌ ಹಿಂದೆ ತಮ್ಮ ಫೋನ್‌ ನಂಬರ್‌ ಬರೆದು ಹಾಕಬೇಕು. ಆ ನಂತರ ಲಕ್ಕಿ ಡಿಪ್‌ ಮೂಲಕ ವಿಜೇತರನ್ನು ಆಯ್ಕೆ ಮಾಡುತ್ತೇವೆ. ಅದರಲ್ಲಿ ಗೆದ್ದವರಿಗೆ ಸ್ಕೂಟರ್‌ ಕೊಡುತ್ತೇವೆ’ ಎನ್ನುತ್ತಾರೆ ಅನೂಪ್‌ ಭಂಡಾರಿ.

“ರಾಜರಥ’ ಚಿತ್ರವನ್ನು ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ಅಲ್ಲದೆ ಅಮೇರಿಕಾದಲ್ಲಿ ಬಿಡುಗಡೆ ಮಾಡಲಾಗಿದೆಯಂತೆ. ಈ
ಕುರಿತು ಮಾತನಾಡಿದ ನಿರ್ಮಾಪಕರಲ್ಲೊಬ್ಬರಾದ ಸತೀಶ್‌ ಶಾಸ್ತ್ರಿ, “ಚಿತ್ರವನ್ನು 215 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದ್ದೇವೆ. ಕನ್ನಡ ಮತ್ತು ತೆಲುಗು ವರ್ಷನ್‌ಗಳನ್ನು ಬಿಡುಗಡೆ ಮಾಡಿದ್ದೇವೆ. ಮೊದಲ ಮೂರು ದಿನದಲ್ಲಿ ಒಂದು ಲಕ್ಷ ಡಾಲರ್‌ ಕಲೆಕ್ಷನ್‌ ಆಗಿದೆ. ಏಪ್ರಿಲ್‌ 7ರಿಂದ ಬೇರೆ ದೇಶಗಳಲ್ಲಿ ಬಿಡುಗಡೆಯಾಗಲಿದೆ. ಅಲ್ಲಿಗೆ ಅನೂಪ್‌ ಮತ್ತು ನಿರೂಪ್‌ ಹೋಗಿ ಚಿತ್ರದ ಪ್ರಚಾರ ಮಾಡುವುದರ ಜೊತೆಗೆ ಸಂವಾದ ಮಾಡಿ ಬರುತ್ತಾರೆ’ ಎಂದು ಹೇಳಿದರು. ನಿರೂಪ್‌ ಖುಷಿಯಾಗಿದ್ದರು. “ಟ್ರೇಲರ್‌ ನೋಡಿದಾಗ ಬಹಳಷ್ಟು ಜನರಿಗೆ ಚಿತ್ರ ಹೀಗಿರಬಹುದು, ಒಳ್ಳೆಯ ಸಂದೇಶವಿರಬಹುದು ಎಂಬ ನಿರೀಕ್ಷೆ ಇರಲಿಲ್ಲ. ಈಗ ಚಿತ್ರ ನೋಡಿದವರೆಲ್ಲರೂ ಮೆಚ್ಚಿಕೊಂಡಿದ್ದಾರೆ’
ಎಂದು ಖುಷಿಯಾದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.