ಹೇ ಡಾರ್ಲಿಂಗ್‌ ನೀನೆಷ್ಟು ಒಳ್ಳೆಯವಳು


Team Udayavani, Apr 13, 2018, 7:30 AM IST

28.jpg

ಹೆಣ್ಣಿನ ಮೇಲೆ ನಡೆಯುತ್ತಿರುವ ಶೋಷಣೆ ಕುರಿತು ಈಗಾಗಲೇ ಹಲವು ಚಿತ್ರಗಳು, ಕಿರುಚಿತ್ರಗಳು ಮೂಡಿಬಂದಿವೆ. ಆ ಸಾಲಿಗೆ
“ಹೇ ಡಾರ್ಲಿಂಗ್‌’ ಕಿರುಚಿತ್ರವೂ ಸೇರಿದೆ. ಅಕಿಯೋ ಪ್ರವೀಣ್‌ ಕುಮಾರ್‌ ಕಥೆ, ಚಿತ್ರಕಥೆ ರಚಿಸಿ 30 ನಿಮಿಷದ ಈ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಕಿರುಚಿತ್ರದಲ್ಲಿ ಹೆಣ್ಣಿನ ಮೇಲಿನ ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಇನ್ನಿತರೆ ವಿಷಯಗಳನ್ನು ಹೇಳಲಾಗಿದೆ.

“ಹೆಣ್ಣಿಗೆ ಹೆಣ್ಣೇ ವೈರಿ ಎಂಬ ಮಾತಿದೆ. ಆದರೆ, ಅದೇ ಹೆಣ್ಣು, ತನ್ನ ಬದುಕನ್ನು ಕತ್ತಲಾಗಿಸಿಕೊಂಡು, ಅದೆಷ್ಟೋ ಹೆಣ್ಣುಮಕ್ಕಳನ್ನು ತನಗೆ ಅರಿವಿಲ್ಲದೆ ರಕ್ಷಣೆ ಮಾಡುತ್ತಿದ್ದಾಳೆ. ಅಂತಹ ಹೆಣ್ಣುಮಕ್ಕಳ ಕುರಿತು ಈ ಚಿತ್ರ ಮೂಡಿಬಂದಿದೆ. ಪ್ರಸ್ತುತ ದಿನಗಳಲ್ಲಿ ಅತ್ಯಾಚಾರಗಳ ಸಂಖ್ಯೆ ಕಡಿಮೆಯಾಗುತ್ತಿವೆ ಅನ್ನುವುದಾದರೆ, ಅದಕ್ಕೆ ಕಾರಣ ವೇಶ್ಯೆಯರು. ಚಿತ್ರದ ಕ್ಲೈಮಾಕ್ಸ್‌ನಲ್ಲಿ ನಾಯಕ,
ವೇಶ್ಯೆಯರಿಗೆ ಸೀರೆ ಕೊಡುತ್ತಾನೆ. ಅವರು ಅದನ್ನು ಸ್ವೀಕರಿಸಿ, “ದಯವಿಟ್ಟು ಅತ್ಯಾಚಾರ ಮಾಡಬೇಡಿ’ ಅಂತ ಪುರುಷ ಸಮಾಜಕ್ಕೊಂದು ಸಂದೇಶ ರವಾನಿಸುತ್ತಾರೆ. ಅದು ಚಿತ್ರದ ಹೈಲೈಟ್‌. ಯಾಕೆ ಹಾಗೆ ಹೇಳುತ್ತಾರೆ ಎಂಬುದೇ ಕಥೆ ಎನ್ನುತ್ತಾರೆ
ಪ್ರವೀಣ್‌ ಕುಮಾರ್‌.

ಅಂದು ಚಿತ್ರ ವೀಕ್ಷಿಸಿದ ನಿರ್ದೇಶಕ ಕೋಡ್ಲು ರಾಮಕೃಷ್ಣ , “ನಮ್ಮ ಕಾಲದಲ್ಲಿ ಕಿರುಚಿತ್ರದ ಪರಿಕಲ್ಪನೆಯೇ ಇರಲಿಲ್ಲ. ಏನಿದ್ದರೂ ಎರಡೂವರೆ ಗಂಟೆಯಲ್ಲಿ ಎಲ್ಲವನ್ನು ಹೇಳಬೇಕಿತ್ತು. ಇಷ್ಟೊಂದು ಗಂಭೀರ ವಿಷಯವನ್ನು ಕೇವಲ ಅರ್ಧ ಗಂಟೆಯಲ್ಲಿ ತೋರಿಸುವುದು ತುಂಬ ಕಷ್ಟ. ನಿರ್ದೇಶಕರ ಜಾಣ್ಮೆ ಇಲ್ಲಿ ಕಾಣುತ್ತದೆ’ ಎಂದರು ಕೂಡ್ಲು. ವಿಧಾನ ಪರಿಷತ್‌ ಸದಸ್ಯ ಶರವಣ, ರಾಜ್‌ ಬಹದ್ದೂರ್‌, ಅಲ್ತಾಫ್ ಖಾನ್‌ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ಭಾರ್ಗವಿ ಈ ಚಿತ್ರಕ್ಕೆ ಹಣ ಹಾಕಿದ್ದಾರೆ. ಈ ಹಿಂದೆ “ಒನ್‌ವೇ’ ಚಿತ್ರ ಮಾಡಿ ನಷ್ಟ ಅನುಭವಿಸಿದ್ದ ಅವರಿಗೆ, ಈ ಕಥೆ ಕೇಳಿ, ನಿರ್ಮಾಣ ಮಾಡಬೇಕೆನಿಸಿದ್ದರಿಂದ ಕಿರುಚಿತ್ರ ಮಾಡಿದ್ದಾಗಿ ಹೇಳಿಕೊಂಡರು ಅವರು. “ಒನ್‌ ವೇ’ ಚಿತ್ರದಲ್ಲಿ ನಟಿಸಿದ್ದ ಕಿರಣ್‌ರಾಜ್‌ ಇಲ್ಲಿ ನಾಯಕರಾಗಿದ್ದಾರೆ. ಉಳಿದಂತೆ ಶೃತಿ ರಾವ್‌, ರಾಣಿರಾವ್‌, ಶ್ರೀನಿವಾಸ್‌, ಪಲ್ಲವಿ, ಪುಷ್ಪ ರಂಗಾಯಣ, ಬೇಬಿ ಅವ್ಯಕ್ತ ಇವರೆಲ್ಲರಿಗೂ ಇದು ಮೊದಲ ಅನುಭವ.

ಛಾಯಾಗ್ರಾಹಕ ಶಂಕರ್‌ಗೆ ಇದು ಮೊದಲ ಚಿತ್ರ. ಅಂತೆಯೇ ಸಂಗೀತ ನಿರ್ದೇಶಕ ಮೊಟ್ಟು ಅವರಿಗೂ ಇದು ಚೊಚ್ಚಲ ಚಿತ್ರ. ಪ್ರತಾಪ್‌ ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.